AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ. ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ […]

ಸಂಜನಾ ಆಪ್ತ ರಾಹುಲ್​ ನಿಜಕ್ಕೂ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋ ಮಾಲೀಕನಾ?
KUSHAL V
| Edited By: |

Updated on: Sep 04, 2020 | 5:03 PM

Share

ಬೆಂಗಳೂರು: CCB ತನಿಖೆ ಬಳಿಕ ಬಂಧನಕ್ಕೆ ಒಳಗಾದ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನ ಕುರಿತು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿದೆ.

ಅಸಲಿಗೆ, ಆರೋಪಿ ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿರಲಿಲ್ಲ. ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದಲ್ಲಿ ಈತ ಏಜೆಂಟ್ ಆಗಿದ್ದು ಭಾರತದಿಂದ ಜನರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತನ್ನ ಕೆಲಸಕ್ಕಾಗಿ ಪರ್ಸೆಂಟ್ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದ ರಾಹುಲ್‌ಗೆ ಒಬ್ಬ ಗುರು ಇದ್ದಾನೆ. ಆತ BTM ಲೇಔಟ್‌ನ ನಿವಾಸಿ. ಈತನೇ ಶ್ರೀಲಂಕಾದ ಬ್ಯಾಲಿಸ್ ಕ್ಯಾಸಿನೋದ ಪ್ರಮುಖ ಏಜೆಂಟ್ ಎಂದು ಹೇಳಲಾಗಿದೆ.

ರಾಹುಲ್ ಗುರುವಿನ ಬಳಿ ಏಜೆಂಟ್ ಕಾರ್ಡ್ ಇತ್ತು. ಹೀಗಾಗಿ, ಈತನ ಜೊತೆ ರಾಹುಲ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತನ್ನ ಬಾಸ್ ಬಳಿ ಏಜೆಂಟ್ ಕಾರ್ಡ್‌ಗಳನ್ನ ಪಡೆದು ಅತಿಥಿಗಳನ್ನ ಕ್ಯಾಸಿನೋಗೆ ಕರೆದುಕೊಂಡು ಹೋಗುತ್ತಿದ್ದನಂತೆ. ಇವರು ಕ್ಯಾಸಿನೋಗೆ ಯಾರನ್ನಾದ್ರು ಕರೆದುಕೊಂಡು ಹೋಗಿ ಅಲ್ಲಿ ಆಡಲು ಹೋದವರು ಹಣ ಕಳೆದುಕೊಂಡಿದ್ದರಲ್ಲಿ 60-40 ಒಪ್ಪಂದದಂತೆ ಈತನಿಗೆ ಶೇಕಡಾ 40ರಷ್ಟು ಹಣ ಸಿಗುತ್ತಿತ್ತಂತೆ.

ಹೀಗಾಗಿ, ರಾಹುಲ್ ವಾರಕ್ಕೆ ಒಮ್ಮೆ ಶ್ರೀಲಂಕಾಗೆ ಹೋಗುತ್ತಿದ್ದು ತನ್ನೊಟ್ಟಿಗೆ ಪ್ರತಿ ವಾರ ಕಸ್ಟಮರ್‌ಗಳನ್ನು ಸಹ ಕರೆದುಕೊಂಡು ಹೋಗುತ್ತಿದ್ದ. ಜೊತೆಗೆ, ಇದೇ ಕ್ಯಾಸಿನೋದಲ್ಲಿ ರಾಹುಲ್​ ಹುಟ್ಟುಹಬ್ಬ ಆಚರಿಸಿಕೊಂಡಿದ್ದ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ