AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್​!

ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. ಕೊಲೆ ನಡೆದ ಸ್ಥಳದಿಂದ ಕೂಗಳತೆ […]

ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್​!
KUSHAL V
|

Updated on:Oct 16, 2020 | 8:06 AM

Share

ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. ಕೊಲೆ ನಡೆದ ಸ್ಥಳದಿಂದ ಕೂಗಳತೆ ದೂರದಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿದೆ. ಇದಲ್ಲದೆ, ಹಂತಕರು ಬಳಸಿದ್ದ ಬೈಕ್​ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ, ಖಾಕಿ ಪಡೆ ಕೃತ್ಯಕ್ಕೆ ಬಳಸಲಾಗಿದ್ದ ಗನ್​ ಯಾರ ಹೆಸರಲ್ಲಿದೆ ಎಂದು ಪತ್ತೆಹಚ್ಚಲು ಮುಂದಾಗಿದ್ದಾರೆ. ಜೊತೆಗೆ, ಅಲ್ಲೇ ಇದ್ದ ಮೂರು ಜಾಕೆಟ್, ಒಂದು ಟೋಪಿ, ಬ್ಯಾಗ್ ಹಾಗೂ ಕೃತ್ಯಕ್ಕೆ ಬಳಸಿದ್ದ ಇತರೆ ವಸ್ತುಗಳನ್ನು FSL ಅಧಿಕಾರಿಗಳ ತಂಡವು ಪರಿಶೀಲನೆ ನಡೆಸುತ್ತಿದೆ.

ಮನೀಷ್ ಶೆಟ್ಟಿ ಕೊಲೆಗೆ ನಡೆದಿತ್ತು ಪೂರ್ವ ನಿಯೋಜಿತ ಪ್ಲ್ಯಾನ್ ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆಗೆ ಹಂತಕರು ಪಕ್ಕ ಪ್ಲ್ಯಾನ್ ಮಾಡಿಕೊಂಡೇ ಬಂದಿದ್ದರು ಎಂದು ಹೇಳಲಾಗಿದೆ. ಪೂರ್ವ ನಿಯೋಜಿತವಾಗಿ ಪ್ಲ್ಯಾನ್ ಮಾಡಿದ್ದ ಹಂತಕರು ಮನೀಷ್ ಚಲನವಲನಗಳನ್ನು ಗಮನಿಸಿ ಪಕ್ಕಾ ಸ್ಕೆಚ್ ಹಾಕಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಮನೀಷ್​ ಬಾರ್ ಬಳಿ ಬರೋದನ್ನೇ ಕಾದುಕುಳಿತ ಹಂತಕರು ಅಲ್ಲೇ ಶೆಟ್ಟಿಯ ಹತ್ಯೆ ಮಾಡಿದ್ದಾರೆ.

ಮನೀಷ್ ಶೆಟ್ಟಿ ಕೊಲೆಗೆ ಬಂದಿದ್ದು ಮೂವರು ಹಂತಕರ ತಂಡ ಎಂದು ಹೇಳಲಾಗಿದೆ. ಆ ಮೂವರಿಂದ‌ಲೇ ಮನೀಷ್ ಶೆಟ್ಟಿಯ ಭೀಕರ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಜೊತೆಗೆ, ಹಂತಕರು ಒಂದೇ ಸುಜುಕಿ ಸಮುರಾಯ್ ಬೈಕ್​ನಲ್ಲಿ ಬಂದಿದ್ದರು ಎಂದು ಸಹ ಹೇಳಲಾಗಿದೆ.

ಭೂಗತ ಪಾತಕಿಯ ಆಪ್ತವಲಯದಲ್ಲಿದ್ದ ಮನೀಷ್ ಶೆಟ್ಟಿ ಅಸಲಿಗೆ ಬಾರ್​ ಮಾಲೀಕ ಮನೀಷ್ ಶೆಟ್ಟಿ ಮಂಗಳೂರಿನಲ್ಲಿ ಹೆಚ್ಚು ಕಾಂಟ್ಯಾಕ್ಟ್ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಭೂಗತ ಪಾತಕಿ ಬನ್ನಂಜೆ ರಾಜನ ಆಪ್ತವಲಯದಲ್ಲಿದ್ದ ಮನೀಷ್ ಶೆಟ್ಟಿ ಈ ಹಿಂದೆ ಜೈಲುವಾಸ ಸಹ ಅನುಭವಿಸಿ ಬಂದಿದ್ದ. ಆತನ ವಿರುದ್ಧ ರೌಡಿಶೀಟ್​ ಸಹ ಓಪನ್ ಆಗಿತ್ತು.

Published On - 7:59 am, Fri, 16 October 20

Follow Us
KUSHAL V
KUSHAL V
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!