AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್​ನಲ್ಲಿ ಜಾಲಿಯಾಗಿ ಬೈಕ್ ರೈಡ್ ಮಾಡ್ತಿದ್ದ ಅಮೃತಾ-ಶ್ರೀಧರ್ ಬೆಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು ಹೇಗೆ?

ಬೆಂಗಳೂರು: ತನ್ನ ಸುಖಕ್ಕಾಗಿ ತಾಯಿಯನ್ನ ಕೊಂದು ಪ್ರಿಯತಮನ ಜೊತೆ ಜಾಲಿ ಮೂಡ್​ನಲ್ಲಿದ್ದ ಕೊಲೆಗಾರ್ತಿ ಮತ್ತು ಪ್ರಿಯತಮ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಅಂಡಮಾನ್​ನಲ್ಲಿ ಸುತ್ತಾಡ್ತಿದ್ದ ಈ ಹಂತಕ ಜೋಡಿ ಬೆಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದೇ ಒಂದು ರೋಚಕ ಕಹಾನಿ. ಅಂಡಮಾನ್ ಮತ್ತು ನಿಕೊಬಾರ್ ದ್ವೀಪದ ಪ್ರಖ್ಯಾತ ಕಾಲಾಪಾನಿ ಜೈಲ್ ಬಳಿ ಎಂಜಾಯ್ ಮಾಡ್ತಿದ್ದ ಹಂತಕರು ಸದ್ಯ ಅಂದರ್ ಆಗಿದ್ದಾರೆ. ಆದರೆ ಹತ್ತೆ ತಾಯಿಯನ್ನ ಕೊಂದು ಸ್ವಲ್ಪವೂ ಪಶ್ಚಾತ್ತಾಪವಿಲ್ಲದೆ, ನೋವಿಲ್ಲದೆ ಅಮೃತಾ ಪ್ರಿಯಕರನ ಜೊತೆ ಸುತ್ತಾಡ್ತಿದ್ದಾಳೆ. ಫೆಬ್ರವರಿ 2 ರಂದು […]

ಅಂಡಮಾನ್​ನಲ್ಲಿ ಜಾಲಿಯಾಗಿ ಬೈಕ್ ರೈಡ್ ಮಾಡ್ತಿದ್ದ ಅಮೃತಾ-ಶ್ರೀಧರ್ ಬೆಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು ಹೇಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 05, 2020 | 2:51 PM

Share

ಬೆಂಗಳೂರು: ತನ್ನ ಸುಖಕ್ಕಾಗಿ ತಾಯಿಯನ್ನ ಕೊಂದು ಪ್ರಿಯತಮನ ಜೊತೆ ಜಾಲಿ ಮೂಡ್​ನಲ್ಲಿದ್ದ ಕೊಲೆಗಾರ್ತಿ ಮತ್ತು ಪ್ರಿಯತಮ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಅಂಡಮಾನ್​ನಲ್ಲಿ ಸುತ್ತಾಡ್ತಿದ್ದ ಈ ಹಂತಕ ಜೋಡಿ ಬೆಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದೇ ಒಂದು ರೋಚಕ ಕಹಾನಿ.

ಅಂಡಮಾನ್ ಮತ್ತು ನಿಕೊಬಾರ್ ದ್ವೀಪದ ಪ್ರಖ್ಯಾತ ಕಾಲಾಪಾನಿ ಜೈಲ್ ಬಳಿ ಎಂಜಾಯ್ ಮಾಡ್ತಿದ್ದ ಹಂತಕರು ಸದ್ಯ ಅಂದರ್ ಆಗಿದ್ದಾರೆ. ಆದರೆ ಹತ್ತೆ ತಾಯಿಯನ್ನ ಕೊಂದು ಸ್ವಲ್ಪವೂ ಪಶ್ಚಾತ್ತಾಪವಿಲ್ಲದೆ, ನೋವಿಲ್ಲದೆ ಅಮೃತಾ ಪ್ರಿಯಕರನ ಜೊತೆ ಸುತ್ತಾಡ್ತಿದ್ದಾಳೆ. ಫೆಬ್ರವರಿ 2 ರಂದು ತಾಯಿಯ ಕೊಲೆ ಮಾಡಿದ್ದ ಅಮೃತಾ ಈ ಹಿಂದೆಯೇ ಪಕ್ಕಾ ಪ್ರೀಪ್ಲಾನ್ ಮಾಡಿದ್ದು, ಹತ್ಯೆ ಮಾಡಲು ಬ್ಲೂಪ್ರಿಂಟ್ ಹಾಕಿಕೊಂಡಿರುವ ಸುಳಿವು ಸಿಕ್ಕಿದೆ.

ತನಿಖೆ ವೇಳೆ ಜನವರಿ 15ರಂದೇ ಫ್ಲೈಟ್ ಟಿಕೆಟ್ ಬುಕ್ ಆಗಿರುವುದು ಕನ್ಫರ್ಮ್ ಆಗಿದೆ. ಅಷ್ಟೇ ಅಲ್ಲ ಕೊಲೆಯಾಗಿದ್ದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ. ಫ್ಲೈಟ್ ಹತ್ತಿದ್ದು ಬೆಳಿಗ್ಗೆ 6ಕ್ಕೆ. ಅಂದ್ರೆ 15 ದಿನಗಳ ಹಿಂದೆಯೇ ಈ ಕಿರಾತಕಿ ಮಗಳು ಸ್ಕೆಚ್ ಹಾಕಿದ್ದು, ಇದು ಪ್ರಿಪ್ಲಾನ್ಡ್ ಮರ್ಡರ್ ಅನ್ನೋದು ಪಕ್ಕಾ ಆಗಿತ್ತು.

ದಾರಿ ತಪ್ಪಿಸ್ತಾ ಆ ಒಂದು ಸುಳಿವು: ಅಮೃತಾ ತನ್ನ ಮೊಬೈಲ್​ ಫೋನ್​ನಲ್ಲಿ ಆಪ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈ ಮಾಹಿತಿಯ ಬೆನ್ನುಹತ್ತಿದ ಪೊಲೀಸರು ಜೆಸ್ಟ್ ಮಿಸ್​ಆಗಿ ಆರೋಪಿಯನ್ನ ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಘಟನೆ ದಿನವೇ ಸಿಕ್ಕಿಬೀಳಬೇಕಿದ್ದ ಹಂತಕರನ್ನು ಅಚಾನಕ್ಕಾಗಿ ಮತ್ತೊಂದು ಸುಳಿವು ದಾರಿತಪ್ಪಿಸಿದೆ.

ಆ ದಿನ ಅಮೃತಾ ಮತ್ತು ಶ್ರೀಧರ್ ಫ್ಲೈಟ್ ನಲ್ಲಿ ಎಸ್ಕೇಪ್ ಆಗಿದ್ದಾರೆ. ಆ ಬೆನ್ನಲ್ಲೇ ಬೆಂಗಳೂರಿನಿಂದ ಫ್ಲೈಟ್​ಗಳ ಮೂಲಕ ಬೇರೆ ಕಡೆ ಹೋಗಿದ್ದ ಪ್ರಯಾಣಿಕರ ಮಾಹಿತಿಯನ್ನ ಸಂಗ್ರಹ ಮಾಡಲಾಗಿದೆ.

ಆಗ ಅದೇ ದಿನ ಅಮೃತಾ ಚಂದ್ರಶೇಖರ್ ಹಾಗೂ ಶ್ರೀಧರ್ ಅನ್ನೋ ಮತ್ತೊಂದು ಜೋಡಿ ಮುಂಬೈಗೆ ಹೋಗಿತ್ತು. ಆಗ ಪೊಲೀಸರು ಅವರೇ ಪ್ರಕರಣದ ಹಂತಕರು ಎಂದು ಭಾವಿಸಿ ಮುಂಬೈ ಮೇಲೆ ಕಣ್ಣಿಟ್ಟ ಕಾರಣ ಆರೋಪಿಗಳು ಜಸ್ಟ್ ಮಿಸ್ ಆಗಿದ್ದರು. ಆ ಗ್ಯಾಪ್​ನಲ್ಲಿ ಆರೋಪಿ ಅಮೃತಾ ಮತ್ತು ಶ್ರೀಧರ್ ಅಂಡಮಾನ್ ಮತ್ತು ನಿಕೊಬಾರ್ ದ್ವೀಪಕ್ಕೆ ಎಂಟ್ರಿ ಕೊಟ್ಟು ಜಾಲಿಯಾಗಿ ಎಂಜಾಯ್ ಮಾಡಿದ್ದಾರೆ.

ಕೊನೆಗೆ ಮುಂಬೈನಲ್ಲಿರುವ ಜೋಡಿ ಆರೋಪಿಗಳಲ್ಲ ಅನ್ನೊದು‌ ಖಚಿತವಾಗ್ತಿದ್ದಂತೆ ಅಂಡಮಾನ್ ಮತ್ತು ನಿಕೋಬಾರ್ ಮೇಲೆ ಪೊಲೀಸರ ಕಣ್ಣು ಬಿದ್ದಿದೆ. ಫೋನ್ ನಂಬರ್ ಸೇರಿ ಇತರೇ ಟೆಕ್ನಿಕಲ್ ಡಿಟೇಲ್ಸ್ ಸುಳಿವಿನ ಮೆರೆಗೆ ಅಂಡಮಾನ್ ಮತ್ತು ನಿಕೋಬಾರ್ ಗೆ ಹೋಗಿದ್ದ ಕೆ.ಆರ್.ಪುರಂ ಪೊಲೀಸರು, ಅಲ್ಲಿನ ಪ್ರಖ್ಯಾತ ಕಾಲಾಪಾನಿ ಜೈಲು ಬಳಿ ಜಾಲಿ ಮೂಡ್ ನಲ್ಲಿ ಬೈಕ್ ನಲ್ಲಿ ಎಂಜಾಯ್ ಮಾಡುತ್ತಿದ್ದ ಅಮೃತಾ ಮತ್ತು ಶ್ರೀಧರ್​ನನ್ನ ಬಂಧಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ