ಬಂಧಿಸಲು ಬಂದ ಪೊಲೀಸರನ್ನು ಥಳಿಸಿ ಪರಾರಿಯಾದ ಕಳ್ಳರು

ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಧಾರವಾಡ ಎಸಿಪಿ ಅನುಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬಂಧಿಸಲು ಬಂದ ಪೊಲೀಸರನ್ನು ಥಳಿಸಿ ಪರಾರಿಯಾದ ಕಳ್ಳರು
ಪೊಲೀಸರ ಮೇಲೆ ಇರಾನಿ ಗ್ಯಾಂಗ್​ ದಾಳಿ

Updated on: Nov 26, 2020 | 2:41 PM

ಧಾರವಾಡ: ಆಂಧ್ರದಲ್ಲಿ ಕಳ್ಳತನ ಮಾಡಿ, ನಗರದಲ್ಲಿ ತಲೆಮರೆಸಿಕೊಂಡಿದ್ದ ಕಳ್ಳರನ್ನು ಹಿಡಿಯಲು ಬಂದಿದ್ದ ಆಂಧ್ರ ಪೊಲೀಸರ ಮೇಲೆಯೇ ಕಳ್ಳರು ಹಲ್ಲೆ ಮಾಡಿ, ಪರಾರಿಯಾಗಿರುವ ಘಟನೆ ಸಂಗಮ್ ವೃತ್ತದ ಬಳಿ ನಡೆದಿದೆ.

ಇರಾನಿ ಗ್ಯಾಂಗ್​ನ ಕಳ್ಳರನ್ನು ಬಂಧಿಸಲು ಆಂಧ್ರ ಪೊಲೀಸರು ಬಂದಿದ್ದ ವೇಳೆ ಈ ಘಟನೆ  ನಡೆದಿದೆ. ಈ ವೇಳೆ ಪೊಲೀಸರು ಮತ್ತು ಕಳ್ಳರ ನಡುವೆ ಮಾರಾಮಾರಿ ನಡೆದಿದ್ದು ಇರಾನಿ ಗ್ಯಾಂಗ್​ನ ಕಳ್ಳರು ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ ಇರಾನಿ ಗ್ಯಾಂಗ್, ಅಷ್ಟಕ್ಕೆ ಸುಮ್ಮನಾಗದೆ ತಮಗೆ ತಾವೇ ಬಿಯರ್ ಬಾಟಲಿಯಿಂದ ಇರಿದುಕೊಂಡಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಘಟನೆ ನಡೆದ ಸ್ಥಳಕ್ಕೆ ಧಾರವಾಡ ಎಸಿಪಿ ಅನುಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 2:22 pm, Thu, 26 November 20

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us