AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್

ಬುರ್ಖಾ ಧರಿಸಿಕೊಂಡು ಬಂದು ಬೆಂಗಳೂರಿನ ಎಂಇಎಸ್ ರಿಂಗ್ ರಸ್ತೆಯಲ್ಲಿ ಹೊಟೇಲ್​​ ನಡೆಸುತ್ತಿರುವ ಮಹಿಳಾ ​ಉದ್ಯಮಿಯನ್ನು ಕಿಡ್ನಾಪ್​ ಮಾಡಿ ಆಟೋದಲ್ಲಿ ಕರೆದೊಯ್ಯುತ್ತಿದ್ದವರನ್ನು ಜಾಲಹಳ್ಳಿ ಸಂಚಾರಿ ಪೊಲೀಸರು ತಡೆದರು. ಮುಂದೆ ಏನಾಯ್ತು? ಸ್ಟೋರಿ ಓದಿ

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್
ಮಹಿಳಾ ಉದ್ಯಮಿಯ ಅಪಹರಣ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 02, 2023 | 2:14 PM

Share

ಬೆಂಗಳೂರು ಅ.02: ಜಾಲಹಳ್ಳಿ ಸಂಚಾರಿ ಪೊಲೀಸರ (Traffic Police) ಸಮಯ ಸಮಯ ಪ್ರಜ್ಞೆಯಿಂದ ಕಿಡ್ನಾಪ್ ಆಗಿದ್ದ ಮಹಿಳಾ ಹೋಟೆಲ್ ಉದ್ಯಮಿ (Businessman) ಬಚಾವ್​ ಆಗಿದ್ದಾರೆ. ನಿವೃತ್ತ ಸೇನಾಧಿಕಾರಿ ವಿಜಯ್ ಪತ್ನಿ, ಮಹಿಳಾ ಹೋಟೆಲ್ ಉದ್ಯಮಿ ಪಂಕಜಾ ಅಪಹರಣವಾಗಿದ್ದ ಮಹಿಳೆ. ನಗರದ ಎಂಇಎಸ್ ರಿಂಗ್ ರಸ್ತೆಯಲ್ಲಿ ಪಂಕಜಾ ಕಳೆದ ನಾಲ್ಕು ವರ್ಷಗಳಿಂದ ಡಿಎಂ ರೆಸಿಡೆನ್ಸಿ ಹೋಟೆಲ್ (Hotel) ನಡೆಸುತ್ತಿದ್ದಾರೆ. ಭಾನುವಾರ  ಮಧ್ಯಾಹ್ನ 12 ಗಂಟೆ ಸುಮಾರಿಗೆ ರೂಂ ಬುಕ್​​ ಮಾಡಲು ಬುರ್ಖಾ ಧರಿಸಿಕೊಂಡು ನಾಲ್ವರು ಮಹಿಳೆಯರು ಬಂದಿದ್ದಾರೆ.

ಆದರೆ ಪಂಕಜಾ ಅವರು ಸ್ಥಳೀಯರಿಗೆ ರೂಂ ಕೊಡಲ್ಲ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಐವರ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಪಂಕಜಾ ಅವರ ಮೇಲೆ ಬುರ್ಖಾಧಾರಿ ಮಹಿಳೆಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಂತರ ಈ ನಾಲ್ವರು ಮಹಿಳೆಯರು ಪಂಕಜಾ ಅವರನ್ನು ಸುತ್ತುವರೆದು ಕಿಡ್ನಾಪ್​ ಮಾಡಿಕೊಂಡು ಆಟೋದಲ್ಲಿ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಈ ವಿಚಾರ ಜಾಲಹಳ್ಳಿ ಸಂಚಾರಿ ಪೊಲೀಸರಿಗೆ ತಿಳಿದಿದೆ. ಆರೋಪಿಗಳು ಹೋಟೆಲ್​ನಿಂದ ಕೊಂಚ ದೂರ ಹೊಗುತಿದ್ದಂತೆ ಜಾಲಹಳ್ಳಿ ಸಂಚಾರಿ ಪೊಲೀಸರು ಆಟೋ ತಡೆದು, ಪಂಕಜಾ ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪಂಕಜಾ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು