AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್

ಬುರ್ಖಾ ಧರಿಸಿಕೊಂಡು ಬಂದು ಬೆಂಗಳೂರಿನ ಎಂಇಎಸ್ ರಿಂಗ್ ರಸ್ತೆಯಲ್ಲಿ ಹೊಟೇಲ್​​ ನಡೆಸುತ್ತಿರುವ ಮಹಿಳಾ ​ಉದ್ಯಮಿಯನ್ನು ಕಿಡ್ನಾಪ್​ ಮಾಡಿ ಆಟೋದಲ್ಲಿ ಕರೆದೊಯ್ಯುತ್ತಿದ್ದವರನ್ನು ಜಾಲಹಳ್ಳಿ ಸಂಚಾರಿ ಪೊಲೀಸರು ತಡೆದರು. ಮುಂದೆ ಏನಾಯ್ತು? ಸ್ಟೋರಿ ಓದಿ

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್
ಮಹಿಳಾ ಉದ್ಯಮಿಯ ಅಪಹರಣ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 02, 2023 | 2:14 PM

Share

ಬೆಂಗಳೂರು ಅ.02: ಜಾಲಹಳ್ಳಿ ಸಂಚಾರಿ ಪೊಲೀಸರ (Traffic Police) ಸಮಯ ಸಮಯ ಪ್ರಜ್ಞೆಯಿಂದ ಕಿಡ್ನಾಪ್ ಆಗಿದ್ದ ಮಹಿಳಾ ಹೋಟೆಲ್ ಉದ್ಯಮಿ (Businessman) ಬಚಾವ್​ ಆಗಿದ್ದಾರೆ. ನಿವೃತ್ತ ಸೇನಾಧಿಕಾರಿ ವಿಜಯ್ ಪತ್ನಿ, ಮಹಿಳಾ ಹೋಟೆಲ್ ಉದ್ಯಮಿ ಪಂಕಜಾ ಅಪಹರಣವಾಗಿದ್ದ ಮಹಿಳೆ. ನಗರದ ಎಂಇಎಸ್ ರಿಂಗ್ ರಸ್ತೆಯಲ್ಲಿ ಪಂಕಜಾ ಕಳೆದ ನಾಲ್ಕು ವರ್ಷಗಳಿಂದ ಡಿಎಂ ರೆಸಿಡೆನ್ಸಿ ಹೋಟೆಲ್ (Hotel) ನಡೆಸುತ್ತಿದ್ದಾರೆ. ಭಾನುವಾರ  ಮಧ್ಯಾಹ್ನ 12 ಗಂಟೆ ಸುಮಾರಿಗೆ ರೂಂ ಬುಕ್​​ ಮಾಡಲು ಬುರ್ಖಾ ಧರಿಸಿಕೊಂಡು ನಾಲ್ವರು ಮಹಿಳೆಯರು ಬಂದಿದ್ದಾರೆ.

ಆದರೆ ಪಂಕಜಾ ಅವರು ಸ್ಥಳೀಯರಿಗೆ ರೂಂ ಕೊಡಲ್ಲ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಐವರ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಪಂಕಜಾ ಅವರ ಮೇಲೆ ಬುರ್ಖಾಧಾರಿ ಮಹಿಳೆಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಂತರ ಈ ನಾಲ್ವರು ಮಹಿಳೆಯರು ಪಂಕಜಾ ಅವರನ್ನು ಸುತ್ತುವರೆದು ಕಿಡ್ನಾಪ್​ ಮಾಡಿಕೊಂಡು ಆಟೋದಲ್ಲಿ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಈ ವಿಚಾರ ಜಾಲಹಳ್ಳಿ ಸಂಚಾರಿ ಪೊಲೀಸರಿಗೆ ತಿಳಿದಿದೆ. ಆರೋಪಿಗಳು ಹೋಟೆಲ್​ನಿಂದ ಕೊಂಚ ದೂರ ಹೊಗುತಿದ್ದಂತೆ ಜಾಲಹಳ್ಳಿ ಸಂಚಾರಿ ಪೊಲೀಸರು ಆಟೋ ತಡೆದು, ಪಂಕಜಾ ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪಂಕಜಾ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ