AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್

ಬುರ್ಖಾ ಧರಿಸಿಕೊಂಡು ಬಂದು ಬೆಂಗಳೂರಿನ ಎಂಇಎಸ್ ರಿಂಗ್ ರಸ್ತೆಯಲ್ಲಿ ಹೊಟೇಲ್​​ ನಡೆಸುತ್ತಿರುವ ಮಹಿಳಾ ​ಉದ್ಯಮಿಯನ್ನು ಕಿಡ್ನಾಪ್​ ಮಾಡಿ ಆಟೋದಲ್ಲಿ ಕರೆದೊಯ್ಯುತ್ತಿದ್ದವರನ್ನು ಜಾಲಹಳ್ಳಿ ಸಂಚಾರಿ ಪೊಲೀಸರು ತಡೆದರು. ಮುಂದೆ ಏನಾಯ್ತು? ಸ್ಟೋರಿ ಓದಿ

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್
ಮಹಿಳಾ ಉದ್ಯಮಿಯ ಅಪಹರಣ
Jagadisha B
| Edited By: |

Updated on: Oct 02, 2023 | 2:14 PM

Share

ಬೆಂಗಳೂರು ಅ.02: ಜಾಲಹಳ್ಳಿ ಸಂಚಾರಿ ಪೊಲೀಸರ (Traffic Police) ಸಮಯ ಸಮಯ ಪ್ರಜ್ಞೆಯಿಂದ ಕಿಡ್ನಾಪ್ ಆಗಿದ್ದ ಮಹಿಳಾ ಹೋಟೆಲ್ ಉದ್ಯಮಿ (Businessman) ಬಚಾವ್​ ಆಗಿದ್ದಾರೆ. ನಿವೃತ್ತ ಸೇನಾಧಿಕಾರಿ ವಿಜಯ್ ಪತ್ನಿ, ಮಹಿಳಾ ಹೋಟೆಲ್ ಉದ್ಯಮಿ ಪಂಕಜಾ ಅಪಹರಣವಾಗಿದ್ದ ಮಹಿಳೆ. ನಗರದ ಎಂಇಎಸ್ ರಿಂಗ್ ರಸ್ತೆಯಲ್ಲಿ ಪಂಕಜಾ ಕಳೆದ ನಾಲ್ಕು ವರ್ಷಗಳಿಂದ ಡಿಎಂ ರೆಸಿಡೆನ್ಸಿ ಹೋಟೆಲ್ (Hotel) ನಡೆಸುತ್ತಿದ್ದಾರೆ. ಭಾನುವಾರ  ಮಧ್ಯಾಹ್ನ 12 ಗಂಟೆ ಸುಮಾರಿಗೆ ರೂಂ ಬುಕ್​​ ಮಾಡಲು ಬುರ್ಖಾ ಧರಿಸಿಕೊಂಡು ನಾಲ್ವರು ಮಹಿಳೆಯರು ಬಂದಿದ್ದಾರೆ.

ಆದರೆ ಪಂಕಜಾ ಅವರು ಸ್ಥಳೀಯರಿಗೆ ರೂಂ ಕೊಡಲ್ಲ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಐವರ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಪಂಕಜಾ ಅವರ ಮೇಲೆ ಬುರ್ಖಾಧಾರಿ ಮಹಿಳೆಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಂತರ ಈ ನಾಲ್ವರು ಮಹಿಳೆಯರು ಪಂಕಜಾ ಅವರನ್ನು ಸುತ್ತುವರೆದು ಕಿಡ್ನಾಪ್​ ಮಾಡಿಕೊಂಡು ಆಟೋದಲ್ಲಿ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಈ ವಿಚಾರ ಜಾಲಹಳ್ಳಿ ಸಂಚಾರಿ ಪೊಲೀಸರಿಗೆ ತಿಳಿದಿದೆ. ಆರೋಪಿಗಳು ಹೋಟೆಲ್​ನಿಂದ ಕೊಂಚ ದೂರ ಹೊಗುತಿದ್ದಂತೆ ಜಾಲಹಳ್ಳಿ ಸಂಚಾರಿ ಪೊಲೀಸರು ಆಟೋ ತಡೆದು, ಪಂಕಜಾ ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪಂಕಜಾ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ