AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್

ಬುರ್ಖಾ ಧರಿಸಿಕೊಂಡು ಬಂದು ಬೆಂಗಳೂರಿನ ಎಂಇಎಸ್ ರಿಂಗ್ ರಸ್ತೆಯಲ್ಲಿ ಹೊಟೇಲ್​​ ನಡೆಸುತ್ತಿರುವ ಮಹಿಳಾ ​ಉದ್ಯಮಿಯನ್ನು ಕಿಡ್ನಾಪ್​ ಮಾಡಿ ಆಟೋದಲ್ಲಿ ಕರೆದೊಯ್ಯುತ್ತಿದ್ದವರನ್ನು ಜಾಲಹಳ್ಳಿ ಸಂಚಾರಿ ಪೊಲೀಸರು ತಡೆದರು. ಮುಂದೆ ಏನಾಯ್ತು? ಸ್ಟೋರಿ ಓದಿ

ಟ್ರಾಫಿಕ್​ ಪೊಲೀಸರ ಸಮಯ ಪ್ರಜ್ಞೆಯಿಂದ ಮಹಿಳಾ ಹೋಟೆಲ್ ಉದ್ಯಮಿ ಬಚಾವ್
ಮಹಿಳಾ ಉದ್ಯಮಿಯ ಅಪಹರಣ
Jagadisha B
| Edited By: |

Updated on: Oct 02, 2023 | 2:14 PM

Share

ಬೆಂಗಳೂರು ಅ.02: ಜಾಲಹಳ್ಳಿ ಸಂಚಾರಿ ಪೊಲೀಸರ (Traffic Police) ಸಮಯ ಸಮಯ ಪ್ರಜ್ಞೆಯಿಂದ ಕಿಡ್ನಾಪ್ ಆಗಿದ್ದ ಮಹಿಳಾ ಹೋಟೆಲ್ ಉದ್ಯಮಿ (Businessman) ಬಚಾವ್​ ಆಗಿದ್ದಾರೆ. ನಿವೃತ್ತ ಸೇನಾಧಿಕಾರಿ ವಿಜಯ್ ಪತ್ನಿ, ಮಹಿಳಾ ಹೋಟೆಲ್ ಉದ್ಯಮಿ ಪಂಕಜಾ ಅಪಹರಣವಾಗಿದ್ದ ಮಹಿಳೆ. ನಗರದ ಎಂಇಎಸ್ ರಿಂಗ್ ರಸ್ತೆಯಲ್ಲಿ ಪಂಕಜಾ ಕಳೆದ ನಾಲ್ಕು ವರ್ಷಗಳಿಂದ ಡಿಎಂ ರೆಸಿಡೆನ್ಸಿ ಹೋಟೆಲ್ (Hotel) ನಡೆಸುತ್ತಿದ್ದಾರೆ. ಭಾನುವಾರ  ಮಧ್ಯಾಹ್ನ 12 ಗಂಟೆ ಸುಮಾರಿಗೆ ರೂಂ ಬುಕ್​​ ಮಾಡಲು ಬುರ್ಖಾ ಧರಿಸಿಕೊಂಡು ನಾಲ್ವರು ಮಹಿಳೆಯರು ಬಂದಿದ್ದಾರೆ.

ಆದರೆ ಪಂಕಜಾ ಅವರು ಸ್ಥಳೀಯರಿಗೆ ರೂಂ ಕೊಡಲ್ಲ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಐವರ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಪಂಕಜಾ ಅವರ ಮೇಲೆ ಬುರ್ಖಾಧಾರಿ ಮಹಿಳೆಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಂತರ ಈ ನಾಲ್ವರು ಮಹಿಳೆಯರು ಪಂಕಜಾ ಅವರನ್ನು ಸುತ್ತುವರೆದು ಕಿಡ್ನಾಪ್​ ಮಾಡಿಕೊಂಡು ಆಟೋದಲ್ಲಿ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಈ ವಿಚಾರ ಜಾಲಹಳ್ಳಿ ಸಂಚಾರಿ ಪೊಲೀಸರಿಗೆ ತಿಳಿದಿದೆ. ಆರೋಪಿಗಳು ಹೋಟೆಲ್​ನಿಂದ ಕೊಂಚ ದೂರ ಹೊಗುತಿದ್ದಂತೆ ಜಾಲಹಳ್ಳಿ ಸಂಚಾರಿ ಪೊಲೀಸರು ಆಟೋ ತಡೆದು, ಪಂಕಜಾ ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪಂಕಜಾ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!