AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್? ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು

ಗುಣರಂಜನ್ ಶೆಟ್ಟಿ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ. ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ಇಬ್ಬರೂ ಮುತ್ತಪ್ಪ ರೈ ಜೊತೆ ಇದ್ದವರು. ನಂತರ ಮುತ್ತಪ್ಪ ರೈ ಜೊತೆಯಿಂದ ಮನ್ಮಿತ್ ಹೊರಬಂದಿದ್ದ.

ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್? ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು
ಜಯಕರ್ನಾಟಕ ಸಂಘಟನೆ ಸದಸ್ಯರು ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ, ಗುಣರಂಜನ್ ಶೆಟ್ಟಿ .
TV9 Web
| Edited By: |

Updated on:Jun 12, 2022 | 3:02 PM

Share

ಬೆಂಗಳೂರು: ಜಯಕರ್ನಾಟಕ ಸಂಘಟನೆಯ (Jayakarnataka Organization) ಗುಣರಂಜನ್ ಶೆಟ್ಟಿ (Gunaranjan Shetty) ಕೊಲೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಜಯಕರ್ನಾಟಕ ಸಂಘಟನೆ ಸದಸ್ಯರು ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ದಿವಂಗತ ಡಾನ್ ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಹತ್ಯೆಗೆ ಸ್ಕೆಚ್ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ ಹತ್ಯೆಗೆ ಸ್ಕೆಚ್​ ಹಾಕಿರುವ ಆರೋಪವನ್ನು ತಳ್ಳಿ ಹಾಕಿರುವ ಮನ್ಮಿತ್​ ರೈ, ಬ್ಯುಸಿನೆಸ್ ವಿಚಾರವಾಗಿ ತಾನು ವಿದೇಶದಲ್ಲಿರುವುದಾಗಿ ಹೇಳುತ್ತಿದ್ದಾರೆ.

ಗುಣರಂಜನ್ ಶೆಟ್ಟಿ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ. ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ಇಬ್ಬರೂ ಮುತ್ತಪ್ಪ ರೈ ಜೊತೆ ಇದ್ದವರು. ನಂತರ ಮುತ್ತಪ್ಪ ರೈ ಜೊತೆಯಿಂದ ಮನ್ಮಿತ್ ಹೊರಬಂದಿದ್ದ.

ಆರೋಪದ ಬಗ್ಗೆ ಮಾತನಾಡಿರುವ ಮನ್ಮಿತ್​ ರೈ, ಇದು ಎಷ್ಟು ಸತ್ಯ ಎಂಬುವುದನ್ನ ಪೊಲೀಸರು ತನಿಖೆ ಮಾಡುತ್ತಾರೆ. ಆದ್ರೆ ಈ ವಿಚಾರದಲ್ಲಿ ನನ್ನ ಹೆಸರು ಏಕೆ ಬರುತ್ತಿದೆಯೋ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಇದುವೆರಗೂ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಯಾವ ಸ್ಟೇಷನ್​ನಲ್ಲೂ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಅಪರಾಧ ಪ್ರಕರಣಗಳಿಲ್ಲದಿದ್ದರೂ ಯಾಕೆ ನನ್ನ ವಿರುದ್ದ ಆರೋಪ ಬರುತ್ತಿದೆ ಗೊತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ
Image
Viral Video: ಟಿವಿ ನೋಡುತ್ತಾ ಡ್ರಮ್ಮಿಂಗ್ ಅಭ್ಯಾಸ ಮಾಡಿದ 3ರ ಬಾಲಕ, ಆತನ ಮುಖಭಾವಕ್ಕೆ ನೆಟ್ಟಿಗರು ಫಿದಾ
Image
ಬೆಂಗಳೂರಲ್ಲಿ ಉಗ್ರನ ಬಂಧನ ಪ್ರಕರಣ; ಪೊಲೀಸರಿಗೆ ಕೊನೆಗೂ ಸಿಕ್ತು ಉಗ್ರ ತಾಲಿಬ್ ಮಾಹಿತಿ
Image
777 Charlie: ರಿಯಲ್​ ಲೈಫ್​ನಲ್ಲಿ ಕಂಡ ನಾಯಿಗಳ ಬಗ್ಗೆ ಮಾತಾಡಿದ ರಕ್ಷಿತ್​ ಶೆಟ್ಟಿ; ಹೇಗಿತ್ತು ‘ಸಿಂಪಲ್​ ಸ್ಟಾರ್​’ ಅನುಭವ?
Image
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಇಸ್ಮಾಯಿಲ್​ ಬಂಧನ

ಮನ್ಮಿತ್

ಇದನ್ನೂ ಓದಿ: ಬೆಂಗಳೂರಲ್ಲಿ ಉಗ್ರನ ಬಂಧನ ಪ್ರಕರಣ; ಪೊಲೀಸರಿಗೆ ಕೊನೆಗೂ ಸಿಕ್ತು ಉಗ್ರ ತಾಲಿಬ್ ಮಾಹಿತಿ

ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಟಿವಿ9 ಜೊತೆ ಮಾತನಾಡಿ, ಮಂಗಳೂರಿನ ಹಿರಿಯ ಪೊಲೀಸ್​ ಅಧಿಕಾರಿಗಳು ಫೋನ್​ ಮಾಡಿ​ ನಿಮಗೆ ಬೇದರಿಕೆ ಇದೆ. ಹತ್ಯೆಯ ಪ್ಲ್ಯಾನ್​​ನಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ. ನೀವು ಹುಷಾರಾಗಿರಿ ಎಂದು ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ ಎಂದು ತಿಳಿಸಿದರು. ಈ ವೇಳೆ ಶ್ರೀರಂಗ ಮನ್ಮಿತ್ ಭಾಗಿಯಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಅಂತ ಹೇಳಿದ್ದಾರೆ.

ಈ ವಿಚಾರ ಗೊತ್ತಾಗಿ ತಂಗಿ ಅನುಷ್ಕಾ ಶೆಟ್ಟಿ ಕರೆ ಮೇಲೆ ಕರೆ ಮಾಡಿದ್ದರು. ಅವರ ಜೊತೆ ಮಾತಾಡಲು ಅವೈಡ್ ಮಾಡಿದ್ದೇನೆ. ಅವರಿಗೆ ಸಿಕ್ಕಿ ಎಲ್ಲ ವಿಚಾರ ಹೇಳುತ್ತೇನೆ. ಭೂಗತ ಲೋಕವನ್ನು ಕಂಟ್ರೋಲ್ ಪಡೆಯಬೇಕು ಅಂತ ಕೆಲವರು ಓಡಾಡುತ್ತಿದ್ದಾರೆ. ವಿದೇಶದಲ್ಲಿ ಕುಳಿತುಕೊಂಡು ಹೆದರಿಸಬಹುದು ಅನ್ನೋ ಯೋಚನೆಯಲ್ಲಿದ್ದಾರೆ. ನಾನು ಸೆಲೆಬ್ರೆಟಿ ಅಣ್ಣ ಆಗಿರುವುದರಿಂದ ನನ್ನನ್ನು ಟಚ್ ಮಾಡಿದರೆ ಅವರಿಗೆ ಮೈಲೇಜ್ ಸಿಗುತ್ತೆ. ನನಗೆ ಯಾವ ಬೆದರಿಕೆ ಕರೆ ಕೂಡ ಬಂದಿಲ್ಲ ಯಾರಿಗೂ ನನ್ನ ಬಳಿ ದ್ವೇಷ ಇಲ್ಲ. ಯಾಕೆ ಹೀಗೆ ಮಾಡಿದರು ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ನಾನು ಈ ಎಲ್ಲಾ ಬೆದರಿಕೆಗಳಿಗೆ ಹೆದರುವುದಿಲ್ಲ. ಕೊಲ್ಲುವನು ಒಬ್ಬನಿದ್ದರೆ ಕಾಯುವನು ಮೇಲೊಬ್ಬ ಇರುತ್ತಾನೆ. ಪೊಲೀಸ್ ಇಲಾಖೆ ತನಿಖೆಗೆ ಬೇಕಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದು ಗುಣರಂಜನ್ ಅಭಿಪ್ರಾಯಪಟ್ಟರು.

ಇನ್ನು ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಮುತ್ತಪ್ಪ ರೈ ರೈಟ್ ಹ್ಯಾಂಡ್ ರಾಕೇಶ್ ಮಲ್ಲಿ, ಮಾಡೋಕೆ ಕೆಲಸ ಇಲ್ಲದವರು ಇಂತಹ ಆರೋಪ ಮಾಡುತ್ತಿದ್ದಾರೆ. ಏನು ಮಾಡೋದು‌ ಜನರಿಗೆ ಕೆಲಸ ಇಲ್ಲವಲ್ಲ ಅಂತ ಹೇಳಿದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:55 am, Sun, 12 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ