ಜಯನಗರಕ್ಕೂ ಬಂತು ಕೊಕೇನ್, ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಒಬೆರಾಯ್ ವಿಕ್ಟರ್ ಬಂಧಿತ ಆರೋಪಿ. ಈತ ವಾಟ್ಸಪ್ ಮೂಲಕ ಜನರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ನಂತರ ಅವರಿಗೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸರು ಆರೋಪಿ ಮೊಬೈಲ್ ಗೆ ಕೊಕೇನ್ ಬೇಕೆಂದು ವಾಟ್ಸಪ್ ನಲ್ಲಿ ಸಂದೇಶ ಕಳುಹಿಸಿದ್ದಾರೆ. ಈ ಸಂದೇಶ ನೋಡಿದ ಆರೋಪಿ ಲೋಕೆಶನ್ ಕಳುಹಿಸಲು ಹೇಳಿದ್ದಾನೆ. ಹೀಗೆ ಆರೋಪಿಯನ್ನು ಬೆನ್ನು ಹತ್ತಿದ ಜಯನಗರ ಪೊಲೀಸರು […]

ಜಯನಗರಕ್ಕೂ ಬಂತು ಕೊಕೇನ್, ನೈಜೀರಿಯಾ ಪ್ರಜೆ ಬಂಧನ
ಸಾಧು ಶ್ರೀನಾಥ್​

Updated on: Nov 26, 2019 | 12:49 PM

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವಿದೇಶಿ ಪ್ರಜೆಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಒಬೆರಾಯ್ ವಿಕ್ಟರ್ ಬಂಧಿತ ಆರೋಪಿ. ಈತ ವಾಟ್ಸಪ್ ಮೂಲಕ ಜನರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ನಂತರ ಅವರಿಗೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಜಯನಗರ ಪೊಲೀಸರು ಆರೋಪಿ ಮೊಬೈಲ್ ಗೆ ಕೊಕೇನ್ ಬೇಕೆಂದು ವಾಟ್ಸಪ್ ನಲ್ಲಿ ಸಂದೇಶ ಕಳುಹಿಸಿದ್ದಾರೆ. ಈ ಸಂದೇಶ ನೋಡಿದ ಆರೋಪಿ ಲೋಕೆಶನ್ ಕಳುಹಿಸಲು ಹೇಳಿದ್ದಾನೆ. ಹೀಗೆ ಆರೋಪಿಯನ್ನು ಬೆನ್ನು ಹತ್ತಿದ ಜಯನಗರ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಂದು ಲಕ್ಷ ಮೌಲ್ಯದ 14 ಗ್ರಾಂ ಕೊಕೇನ್, ಮೂರು ಸಾವಿರ ಹಣ ಹಾಗೂ ಒಂದು ಮೊಬೈಲ್, ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us