AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ
ಗುಂಡಿನ ದಾಳಿ
Follow us
ನಯನಾ ರಾಜೀವ್
|

Updated on: Jan 26, 2024 | 12:48 PM

ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ಗುರುವಾರ ರಾತ್ರಿ ಬೈಕ್​ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್​ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ.

ಪನ್ವಾಡಿಯ ಸರಾಫ ಪಟ್ಟಣದ ಪಕ್ಕದಲ್ಲಿರುವ ಅಲಿಪುರದಲ್ಲಿ ರಾತ್ರಿ ಗುಂಡಿನ ಸದ್ದು ಕೇಳಿಬಂದಿತ್ತು. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್​ಕಾಂತ್​ಗೆ ಗಂಭೀರ ಗಾಯಗಳಾಗಿವೆ.

ಮತ್ತಷ್ಟು ಓದಿ: ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ

ಪ್ರತಿದಿನದಂತೆ ಆಭರಣದ ಅಂಗಡಿ ಮುಚ್ಚಿ ಬ್ಯಾಗ್​ನಲ್ಲಿ ಚಿನ್ನಾಭರಣ ಹಾಕಿಕೊಂಡು ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸ್ಸು ಕೇಳಿ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ