AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಗ್ಯಾಸ್​ ಸಿಲಿಂಡರ್​ಗಳಿದ್ದ ಟ್ರಕ್​ಗೆ ಬಸ್​ ಡಿಕ್ಕಿ; 16 ಜನ ಸಾವು, 26 ಮಂದಿಗೆ ಗಾಯ

40 ಪ್ರಯಾಣಿಕರಿದ್ದ ಬಸ್ ಸಾಹಿಬ್‌ಗಂಜ್ ಜಿಲ್ಲೆಯ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‌ಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 26 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ

ಜಾರ್ಖಂಡ್​ನಲ್ಲಿ ಗ್ಯಾಸ್​ ಸಿಲಿಂಡರ್​ಗಳಿದ್ದ ಟ್ರಕ್​ಗೆ ಬಸ್​ ಡಿಕ್ಕಿ; 16 ಜನ ಸಾವು, 26 ಮಂದಿಗೆ ಗಾಯ
ಜಾರ್ಖಂಡ್​ನಲ್ಲಿ ಬಸ್ ಅಪಘಾತ
TV9 Web
| Edited By: |

Updated on: Jan 05, 2022 | 7:00 PM

Share

ಪಾಕುರ್: ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್​ ನಡುವೆ ಡಿಕ್ಕಿಯಾಗಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ. ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೇರ್‌ಕೋಲಾ ಗ್ರಾಮದ ಗೋವಿಂದಪುರ- ಸಾಹೇಬ್‌ಗಂಜ್ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು 40 ಪ್ರಯಾಣಿಕರಿದ್ದ ಬಸ್ ಸಾಹಿಬ್‌ಗಂಜ್ ಜಿಲ್ಲೆಯ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‌ಗೆ ತೆರಳುತ್ತಿತ್ತು. ಆಗ ಎದುರಿನಿಂದ ಬರುತ್ತಿದ್ದ ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 26 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಾಕುರ್‌ನ ಸಿವಿಲ್ ಸರ್ಜನ್ ಆರ್‌ಡಿ ಪಾಸ್ವಾನ್ ಪಿಟಿಐಗೆ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರನ್ನು ರಾಂಚಿಯ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಗೆ ದಾಖಲಿಸಲಾಗಿದೆ ಮತ್ತು ಇತರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅಜಿತ್ ಕುಮಾರ್ ವಿಮಲ್ ಹೇಳಿದ್ದಾರೆ. ಗಾಯಾಳುಗಳನ್ನು ಮೊದಲು ಜಿಲ್ಲೆಯ ಸದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತದ ಬಳಿಕ ಹಲವಾರು ಜನರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಗ್ಯಾಸ್ ಕಟರ್​ಗಳಿಂದ ಬಸ್​ನ ಕಿಟಕಿಯನ್ನು ಕಟ್ ಮಾಡಿ, ಪ್ರಯಾಣಿಕರನ್ನು ಹೊರಗೆಳೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮದಿಂದ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಸಿಲುಕಿಕೊಂಡಿತ್ತು. ಬಸ್ ಮತ್ತು ಟ್ರಕ್ ಎರಡೂ ವೇಗವಾಗಿ ಚಲಿಸುತ್ತಿದ್ದವು ಮತ್ತು ಈ ಪ್ರದೇಶದಲ್ಲಿ ದಟ್ಟವಾದ ಮಂಜು ಇದ್ದುದರಿಂದ ಎದುರಿನಿಂದ ಬರುತ್ತಿದ್ದ ವಾಹನ ಕಾಣುತ್ತಿರಲಿಲ್ಲ. ಅದೃಷ್ಟವಶಾತ್ ಟ್ರಕ್‌ನಲ್ಲಿದ್ದ ಯಾವುದೇ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ. ಅವೇನಾದರೂ ಸ್ಫೋಟಗೊಂಡಿದ್ದರೆ ಅಪಘಾತದಿಂದ ಇನ್ನೂ ಹೆಚ್ಚಿನ ಜೀವಗಳು ಬಲಿಯಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಗಮನಿಸಿದರೆ, ಟೋಲ್ ಹೆಚ್ಚಾಗುವ ಆತಂಕವಿದೆ ಎಂದು ವಿಮಲ್ ಹೇಳಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕ ಆಸ್ಪತ್ರೆಗೆ ದಾಖಲು

Haiti Blast: ಹೈಟಿಯಲ್ಲಿ ಗ್ಯಾಸ್​ ಟ್ಯಾಂಕರ್ ಸ್ಫೋಟ; 50ಕ್ಕೂ ಹೆಚ್ಚು ಜನ ಸಜೀವ ದಹನ, 20 ಮನೆ ಸುಟ್ಟು ಭಸ್ಮ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?