AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ಗ್ಯಾಸ್​ ಸಿಲಿಂಡರ್​ಗಳಿದ್ದ ಟ್ರಕ್​ಗೆ ಬಸ್​ ಡಿಕ್ಕಿ; 16 ಜನ ಸಾವು, 26 ಮಂದಿಗೆ ಗಾಯ

40 ಪ್ರಯಾಣಿಕರಿದ್ದ ಬಸ್ ಸಾಹಿಬ್‌ಗಂಜ್ ಜಿಲ್ಲೆಯ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‌ಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 26 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ

ಜಾರ್ಖಂಡ್​ನಲ್ಲಿ ಗ್ಯಾಸ್​ ಸಿಲಿಂಡರ್​ಗಳಿದ್ದ ಟ್ರಕ್​ಗೆ ಬಸ್​ ಡಿಕ್ಕಿ; 16 ಜನ ಸಾವು, 26 ಮಂದಿಗೆ ಗಾಯ
ಜಾರ್ಖಂಡ್​ನಲ್ಲಿ ಬಸ್ ಅಪಘಾತ
TV9 Web
| Edited By: |

Updated on: Jan 05, 2022 | 7:00 PM

Share

ಪಾಕುರ್: ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್​ ನಡುವೆ ಡಿಕ್ಕಿಯಾಗಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ. ಅಮ್ರಪಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೇರ್‌ಕೋಲಾ ಗ್ರಾಮದ ಗೋವಿಂದಪುರ- ಸಾಹೇಬ್‌ಗಂಜ್ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು 40 ಪ್ರಯಾಣಿಕರಿದ್ದ ಬಸ್ ಸಾಹಿಬ್‌ಗಂಜ್ ಜಿಲ್ಲೆಯ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‌ಗೆ ತೆರಳುತ್ತಿತ್ತು. ಆಗ ಎದುರಿನಿಂದ ಬರುತ್ತಿದ್ದ ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 26 ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಾಕುರ್‌ನ ಸಿವಿಲ್ ಸರ್ಜನ್ ಆರ್‌ಡಿ ಪಾಸ್ವಾನ್ ಪಿಟಿಐಗೆ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಒಬ್ಬರನ್ನು ರಾಂಚಿಯ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಗೆ ದಾಖಲಿಸಲಾಗಿದೆ ಮತ್ತು ಇತರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅಜಿತ್ ಕುಮಾರ್ ವಿಮಲ್ ಹೇಳಿದ್ದಾರೆ. ಗಾಯಾಳುಗಳನ್ನು ಮೊದಲು ಜಿಲ್ಲೆಯ ಸದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತದ ಬಳಿಕ ಹಲವಾರು ಜನರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಗ್ಯಾಸ್ ಕಟರ್​ಗಳಿಂದ ಬಸ್​ನ ಕಿಟಕಿಯನ್ನು ಕಟ್ ಮಾಡಿ, ಪ್ರಯಾಣಿಕರನ್ನು ಹೊರಗೆಳೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಪರಿಣಾಮದಿಂದ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಸಿಲುಕಿಕೊಂಡಿತ್ತು. ಬಸ್ ಮತ್ತು ಟ್ರಕ್ ಎರಡೂ ವೇಗವಾಗಿ ಚಲಿಸುತ್ತಿದ್ದವು ಮತ್ತು ಈ ಪ್ರದೇಶದಲ್ಲಿ ದಟ್ಟವಾದ ಮಂಜು ಇದ್ದುದರಿಂದ ಎದುರಿನಿಂದ ಬರುತ್ತಿದ್ದ ವಾಹನ ಕಾಣುತ್ತಿರಲಿಲ್ಲ. ಅದೃಷ್ಟವಶಾತ್ ಟ್ರಕ್‌ನಲ್ಲಿದ್ದ ಯಾವುದೇ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ. ಅವೇನಾದರೂ ಸ್ಫೋಟಗೊಂಡಿದ್ದರೆ ಅಪಘಾತದಿಂದ ಇನ್ನೂ ಹೆಚ್ಚಿನ ಜೀವಗಳು ಬಲಿಯಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಗಮನಿಸಿದರೆ, ಟೋಲ್ ಹೆಚ್ಚಾಗುವ ಆತಂಕವಿದೆ ಎಂದು ವಿಮಲ್ ಹೇಳಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕ ಆಸ್ಪತ್ರೆಗೆ ದಾಖಲು

Haiti Blast: ಹೈಟಿಯಲ್ಲಿ ಗ್ಯಾಸ್​ ಟ್ಯಾಂಕರ್ ಸ್ಫೋಟ; 50ಕ್ಕೂ ಹೆಚ್ಚು ಜನ ಸಜೀವ ದಹನ, 20 ಮನೆ ಸುಟ್ಟು ಭಸ್ಮ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್