AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರ ನಿದ್ರೆಯಲ್ಲಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವತಿ

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಅಂಜಲಿ ಕುಮಾರ್(20) ಎಂದು ಗುರುತಿಸಲಾದ ಆರೋಪಿಯು ತನ್ನ 24 ವರ್ಷದ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರ ನಿದ್ರೆಯಲ್ಲಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವತಿ
ಸಾವು
ನಯನಾ ರಾಜೀವ್
|

Updated on:Oct 24, 2023 | 9:57 AM

Share

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಅಂಜಲಿ ಕುಮಾರ್(20) ಎಂದು ಗುರುತಿಸಲಾದ ಆರೋಪಿಯು ತನ್ನ 24 ವರ್ಷದ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಜಾರ್ಖಂಡ್‌ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಸೋಮವಾರ ಬಂಧಿಸಲಾಗಿದ್ದು, ಆಕೆಯ ರಕ್ತದ ಕಲೆಯುಳ್ಳ ಬಟ್ಟೆ ಮತ್ತು ಕೊಲೆಗೆ ಬಳಸಿದ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ , ಅಂಜಲಿಯು ಧರ್ಮನ್ ಜೊತೆ ಸಂಬಂಧ ಹೊಂದಿದ್ದಳು ಮತ್ತು ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೂ ಆತ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದ. ನಂತರ ಜಿಗುಪ್ಸೆಗೊಂಡ ಅಂಜಲಿ ಕೊಲೆಗೆ ಯೋಜನೆ ರೂಪಿಸಿ ಧರ್ಮನ್‌ನನ್ನು ಶನಿವಾರ ಪೊದೆಗಳಿಂದ ಆವೃತವಾದ ಏಕಾಂತ ಸ್ಥಳಕ್ಕೆ ಕರೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!

ಸ್ವಲ್ಪ ಹೊತ್ತು ಮಾತನಾಡಿದ ನಂತರ ಧರ್ಮೇನ್ ನೆಲದ ಮೇಲೆ ಮಲಗಿದ್ದ ಅದೇ ಸಂದರ್ಭದಲ್ಲಿ ಅಂಜಲಿ ಅಲ್ಲೇ ಇದ್ದ ಕೊಡಲಿಯಿಂದ ಧರ್ಮನ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ.

ಕೊಲೆ ಮಾಡಿದ ಬಳಿಕ ಅಂಜಲಿ ಶವವನ್ನು ಪೊದೆಯಲ್ಲಿ ಬಚ್ಚಿಟ್ಟು ಸ್ಥಳದಿಂದ ತೆರಳಿದ್ದಳು. ಭಾನುವಾರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. 48 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ, ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Tue, 24 October 23