AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಸಾಲ ಮರುಪಾವತಿಸಿಲ್ಲ ಎಂದು ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದ ಫೈನಾನ್ಸ್​ ಕಂಪನಿ ಅಧಿಕಾರಿಗಳು

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ರೈತನ ಟ್ರ್ಯಾಕ್ಟರ್ ಅನ್ನು ಬಲವಂತವಾಗಿ ತೆಗೆದುಕೊಳ್ಳಲು ಬಂದ ಫೈನಾನ್ಸ್ ಕಂಪನಿಯ ಅಧಿಕಾರಿಗಳು, ಟ್ರ್ಯಾಕ್ಟರ್ ಸಾಲದ ಕಂತು ಸಕಾಲಕ್ಕೆ ಮರುಪಾವತಿಸಲಿಲ್ಲ ಎಂಬ ಕಾರಣಕ್ಕೆ ವಿಕಲಚೇತನ ರೈತನ ಗರ್ಭಿಣಿ ಮಗಳ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ದುಷ್ಕೃತ್ಯ ಮೆರೆದಿದ್ದಾರೆ.

Jharkhand: ಸಾಲ ಮರುಪಾವತಿಸಿಲ್ಲ ಎಂದು ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದ ಫೈನಾನ್ಸ್​ ಕಂಪನಿ ಅಧಿಕಾರಿಗಳು
Death
TV9 Web
| Updated By: ನಯನಾ ರಾಜೀವ್|

Updated on: Sep 17, 2022 | 11:00 AM

Share

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ರೈತನ ಟ್ರ್ಯಾಕ್ಟರ್ ಅನ್ನು ಬಲವಂತವಾಗಿ ತೆಗೆದುಕೊಳ್ಳಲು ಬಂದ ಫೈನಾನ್ಸ್ ಕಂಪನಿಯ ಅಧಿಕಾರಿಗಳು, ಟ್ರ್ಯಾಕ್ಟರ್ ಸಾಲದ ಕಂತು ಸಕಾಲಕ್ಕೆ ಮರುಪಾವತಿಸಲಿಲ್ಲ ಎಂಬ ಕಾರಣಕ್ಕೆ ವಿಕಲಚೇತನ ರೈತನ ಗರ್ಭಿಣಿ ಮಗಳ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ದುಷ್ಕೃತ್ಯ ಮೆರೆದಿದ್ದಾರೆ.

ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಹಜಾರಿಬಾಗ್ ಹಿರಿಯ ಪೊಲೀಸ್ ಅಧೀಕ್ಷಕ ಮನೋಜ್ ರತನ್ ಚೌತ್ ಪ್ರಕಾರ, ಈ ಸಂಬಂಧ ಹಣಕಾಸು ಕಂಪನಿಯ ಸ್ಥಳೀಯ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಲ್ಲಾ ಆರೋಪಿಗಳನ್ನು ಬಂಧಿಸಲು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಇಚಾಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಯಾತ್‌ನ ವಿಕಲಚೇತನ ರೈತ ಮಿಥಿಲೇಶ್ ಮೆಹ್ತಾ ಅವರು ಟ್ರ್ಯಾಕ್ಟರ್ ಖರೀದಿಸಲು ಪಡೆದ ಕಂಪನಿಯ ಸಾಲದ ಒಂದು ಲಕ್ಷದ ಮೂವತ್ತು ಸಾವಿರ ರೂಪಾಯಿಗಳ ಬಾಕಿ ಕಂತುಗಳನ್ನು ಠೇವಣಿ ಮಾಡಬೇಕು ಎಂದು ಫೈನಾನ್ಸ್ ಕಂಪನಿಯಿಂದ ಸಂದೇಶ ಬಂದಿತ್ತು.

ಆದರೆ ಅದು ಸಾಧ್ಯವಾಗದಿದ್ದಾಗ, ಫೈನಾನ್ಸ್ ಕಂಪನಿಯ ಏಜೆಂಟರು ಮತ್ತು ಅಧಿಕಾರಿಗಳು ಶುಕ್ರವಾರ ಅವರ ಮನೆಗೆ ತಲುಪಿ ಟ್ರ್ಯಾಕ್ಟರ್ ಅನ್ನು ಕೊಂಯೊಯ್ಯಲು ಪ್ರಯತ್ನಿಸಿದರು.

ರೈತರ ಟ್ರ್ಯಾಕ್ಟರ್​ ಅನ್ನು ಹಿಂಪಡೆಯಲು ಹೋದಾಗ, ತಕ್ಷಣವೇ ಒಂದು ಲಕ್ಷದ ಇಪ್ಪತ್ತು ಸಾವಿರ ಬಾಕಿ ಮೊತ್ತವನ್ನು ಪಾವತಿಸಲು ಒತ್ತಾಯಿಸಿದರು. ಆದರೆ ಫೈನಾನ್ಸ್ ಕಂಪನಿಯ ಉದ್ಯೋಗಿಗಳು ಒಪ್ಪದೆ ಬಲವಂತವಾಗಿ ಟ್ರ್ಯಾಕ್ಟರ್ ತೆಗೆದುಕೊಳ್ಳಲು ಮುಂದಾದರು.

ವಿಕಲಚೇತನ ರೈತನ 27 ವರ್ಷದ ಮಗಳು ಮೋನಿಕಾ ಅವರನ್ನು ತಡೆಯಲು ಓಡಿದಳು, ಆದರೆ ಆಕೆಗೆ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಅವರು ಹೇಳಿದರು.

ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ಫೈನಾನ್ಸ್ ಕಂಪನಿಯ ನೌಕರರನ್ನು ಬಂಧಿಸುವಂತೆ ಒತ್ತಾಯಿಸಿದರು.

ಫೈನಾನ್ಸ್​​ನಲ್ಲಿ ಬಡ ಕುಟುಂಬವೊಂದು ಸಾಲ ಪಡೆದುಕೊಂಡಿತ್ತು. ಅದನ್ನು ಮರುಪಾವತಿಸದ ಕಾರಣ ಅಧಿಕಾರಿಗಳು ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಪ್ರಕರಣ ನಡೆದಿದೆ. ಹಜಾರಿಬಾಗ್​​ನ ಇಚ್ಚಾಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೂರು ತಿಂಗಳ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಫೈನಾನ್ಸ್ ಕಂಪನಿಯ ರಿಕವರಿ ಎಜೆಂಟ್​, ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?