AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಅನುಕಂಪದ ನೌಕರಿ ಆಸೆಗೆ ಗಂಡನನ್ನೇ ಕೊಲೆ ಮಾಡಿ ಸೀಲಿಂಗ್ ಫ್ಯಾನ್​ಗೆ ನೇತು ಹಾಕಿದ್ದ ಪತ್ನಿ; ಆಮೇಲೇನಾಯ್ತು?

ಹಣ, ಆಸ್ತಿ, ಆಭರಣಕ್ಕಾಗಿ ಕೊಲೆಗಳಾಗುತ್ತಿರುವ ಬಗ್ಗೆ ಆಗಾಗ್ಗೆ ವರದಿಗಳಾಗುತ್ತಿರುತ್ತವೆ. ಆದರೆ, ಜಾರ್ಖಂಡ್​ನಲ್ಲೊಬ್ಬಳು ಮಹಿಳೆ ಗಂಡನ ಸಾವಿನ ಅನುಕಂಪದಿಂದ ಸರ್ಕಾರಿ ನೌಕರಿ ದೊರೆಯಬಹುದೆಂಬ ಆಸೆಯಲ್ಲಿ ಆತನನ್ನು ಹತ್ಯೆ ಮಾಡಿ ಸೀಲಿಂಗ್ ಫ್ಯಾನ್​​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಕೃತ್ಯ ಕೊನೆಗೂ ಬಯಲಾಗಿದೆ.

Jharkhand: ಅನುಕಂಪದ ನೌಕರಿ ಆಸೆಗೆ ಗಂಡನನ್ನೇ ಕೊಲೆ ಮಾಡಿ ಸೀಲಿಂಗ್ ಫ್ಯಾನ್​ಗೆ ನೇತು ಹಾಕಿದ್ದ ಪತ್ನಿ; ಆಮೇಲೇನಾಯ್ತು?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 18, 2023 | 11:32 AM

Share

ಚಾಯೀಬಸ (ಜಾರ್ಖಂಡ್): ಹಣ, ಆಸ್ತಿ, ಆಭರಣಕ್ಕಾಗಿ ಕೊಲೆಗಳಾಗುತ್ತಿರುವ (Murder) ಬಗ್ಗೆ ಆಗಾಗ್ಗೆ ವರದಿಗಳಾಗುತ್ತಿರುತ್ತವೆ. ಆದರೆ, ಜಾರ್ಖಂಡ್​ನಲ್ಲೊಬ್ಬಳು (Jharkhand) ಮಹಿಳೆ ಗಂಡನ ಸಾವಿನ ಅನುಕಂಪದಿಂದ ಸರ್ಕಾರಿ ನೌಕರಿ ದೊರೆಯಬಹುದೆಂಬ ಆಸೆಯಲ್ಲಿ ಆತನನ್ನು ಹತ್ಯೆ ಮಾಡಿ ಸೀಲಿಂಗ್ ಫ್ಯಾನ್​​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಕೃತ್ಯ ಕೊನೆಗೂ ಬಯಲಾಗಿದೆ. ಇದೀಗ ಮಹಿಳೆಗೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡವನ್ನೂ ವಿಧಿಸಿದೆ. ಜಿಲ್ಲಾ ಪ್ರಿನ್ಸಿಪಲ್ ಸೆಷನ್ಸ್ ಜಡ್ಜ್ ವಿಶ್ವನಾಥ್ ಶುಕ್ಲಾ ಅವರು ಆದೇಶ ಪ್ರಕಟಿಸಿದ್ದು, ಅಪರಾಧಿ ಅನಿತಾ ಕುಮಾರಿ ಅಲಿಯಾಸ್ ಅನಿತಾ ಸಿಂಗ್​ಗೆ ಶಿಕ್ಷೆ ವಿಧಿಸಿದ್ದಾರೆ. ಈಕೆ 2017ರ ಜನವರಿ 25ರಂದು ಪತಿ ರಾಜೀವ್ ಕುಮಾರ್​ ಸಿಂಗ್​ನನ್ನು ಹತ್ಯೆ ಮಾಡಿದ್ದಳು.

ನಡೆದಿದ್ದೇನು?

ಅನಿತಾ ಮತ್ತು ರಾಜೀವ್ 2007ರಲ್ಲಿ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ಸಂಬಂಧ ಹಳಸಿದ್ದು, ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿ ಆಶುತೋಷ್ ಶೇಖರ್ ತಿಳಿಸಿದ್ದಾರೆ. 2013ರಲ್ಲಿ ರಾಜೀವ್​ಗೆ ರೈಲ್ವೆ ಇಲಾಖೆಯಲ್ಲಿ ಡಿ ದರ್ಜೆಯ ನೌಕರನಾಗಿ ಉದ್ಯೋಗ ದೊರೆತಿದೆ. ಆ ನಂತರ ಆತನ ಬಳಿಗೆ ಮರಳಿದ ಅನಿತಾ ನಂತರ ಜತೆಯಾಗಿ ವಾಸಿಸುತ್ತಿರುತ್ತಾಳೆ. ಚಾಯೀಬಸದಲ್ಲಿ ರಾಜೀವ್​​ಗೆ ದೊರೆತ ಕ್ವಾರ್ಟರ್ಸ್​​ನಲ್ಲಿ ಮಗಳ ಜತೆ ಇಬ್ಬರೂ ವಾಸಿಸುತ್ತಿರುತ್ತಾರೆ. ಅಲ್ಲಿಯೇ ರಾಜೀವ್​ನನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ: ತಾಯಿಯ ಅನೈತಿಕ ಸಂಬಂಧ ಪ್ರಶ್ನೇ ಮಾಡಿದ ಅಪ್ರಾಪ್ತ ಬಾಲಕಿಯನ್ನ ಕೊಂದ ದುರುಳ

ರಾಜೀವ್​ ಸಾವಿನ ಬಗ್ಗೆ ಅನುಮಾನಗಳು ಮೂಡಿಬಂದಿದ್ದರಿಂದ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಯಿತು. ಅನಿತಾಳನ್ನು ವಿಚಾರಣೆಗೆ ಒಳಪಡಿಸಿದಾಗ, ಪತಿಯ ಮರಣದ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಬಹುದೆಂಬ ಆಸೆಯಿಂದ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಎಲ್ಲಿದೆ ಚಾಯೀಬಸ?

ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಹಭೂಮ್ ಜಿಲ್ಲೆಯ ನಗರವಾಗಿದೆ. ಚಾಯೀಬಸ ಜಿಲ್ಲಾ ಕೇಂದ್ರವೂ ಹೌದು. ಇದು ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಸ್ಥಳವೂ ಆಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 18 March 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ