AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಅನುಕಂಪದ ನೌಕರಿ ಆಸೆಗೆ ಗಂಡನನ್ನೇ ಕೊಲೆ ಮಾಡಿ ಸೀಲಿಂಗ್ ಫ್ಯಾನ್​ಗೆ ನೇತು ಹಾಕಿದ್ದ ಪತ್ನಿ; ಆಮೇಲೇನಾಯ್ತು?

ಹಣ, ಆಸ್ತಿ, ಆಭರಣಕ್ಕಾಗಿ ಕೊಲೆಗಳಾಗುತ್ತಿರುವ ಬಗ್ಗೆ ಆಗಾಗ್ಗೆ ವರದಿಗಳಾಗುತ್ತಿರುತ್ತವೆ. ಆದರೆ, ಜಾರ್ಖಂಡ್​ನಲ್ಲೊಬ್ಬಳು ಮಹಿಳೆ ಗಂಡನ ಸಾವಿನ ಅನುಕಂಪದಿಂದ ಸರ್ಕಾರಿ ನೌಕರಿ ದೊರೆಯಬಹುದೆಂಬ ಆಸೆಯಲ್ಲಿ ಆತನನ್ನು ಹತ್ಯೆ ಮಾಡಿ ಸೀಲಿಂಗ್ ಫ್ಯಾನ್​​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಕೃತ್ಯ ಕೊನೆಗೂ ಬಯಲಾಗಿದೆ.

Jharkhand: ಅನುಕಂಪದ ನೌಕರಿ ಆಸೆಗೆ ಗಂಡನನ್ನೇ ಕೊಲೆ ಮಾಡಿ ಸೀಲಿಂಗ್ ಫ್ಯಾನ್​ಗೆ ನೇತು ಹಾಕಿದ್ದ ಪತ್ನಿ; ಆಮೇಲೇನಾಯ್ತು?
ಸಾಂದರ್ಭಿಕ ಚಿತ್ರ
Ganapathi Sharma
|

Updated on:Mar 18, 2023 | 11:32 AM

Share

ಚಾಯೀಬಸ (ಜಾರ್ಖಂಡ್): ಹಣ, ಆಸ್ತಿ, ಆಭರಣಕ್ಕಾಗಿ ಕೊಲೆಗಳಾಗುತ್ತಿರುವ (Murder) ಬಗ್ಗೆ ಆಗಾಗ್ಗೆ ವರದಿಗಳಾಗುತ್ತಿರುತ್ತವೆ. ಆದರೆ, ಜಾರ್ಖಂಡ್​ನಲ್ಲೊಬ್ಬಳು (Jharkhand) ಮಹಿಳೆ ಗಂಡನ ಸಾವಿನ ಅನುಕಂಪದಿಂದ ಸರ್ಕಾರಿ ನೌಕರಿ ದೊರೆಯಬಹುದೆಂಬ ಆಸೆಯಲ್ಲಿ ಆತನನ್ನು ಹತ್ಯೆ ಮಾಡಿ ಸೀಲಿಂಗ್ ಫ್ಯಾನ್​​ಗೆ ನೇತುಹಾಕಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಕೃತ್ಯ ಕೊನೆಗೂ ಬಯಲಾಗಿದೆ. ಇದೀಗ ಮಹಿಳೆಗೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡವನ್ನೂ ವಿಧಿಸಿದೆ. ಜಿಲ್ಲಾ ಪ್ರಿನ್ಸಿಪಲ್ ಸೆಷನ್ಸ್ ಜಡ್ಜ್ ವಿಶ್ವನಾಥ್ ಶುಕ್ಲಾ ಅವರು ಆದೇಶ ಪ್ರಕಟಿಸಿದ್ದು, ಅಪರಾಧಿ ಅನಿತಾ ಕುಮಾರಿ ಅಲಿಯಾಸ್ ಅನಿತಾ ಸಿಂಗ್​ಗೆ ಶಿಕ್ಷೆ ವಿಧಿಸಿದ್ದಾರೆ. ಈಕೆ 2017ರ ಜನವರಿ 25ರಂದು ಪತಿ ರಾಜೀವ್ ಕುಮಾರ್​ ಸಿಂಗ್​ನನ್ನು ಹತ್ಯೆ ಮಾಡಿದ್ದಳು.

ನಡೆದಿದ್ದೇನು?

ಅನಿತಾ ಮತ್ತು ರಾಜೀವ್ 2007ರಲ್ಲಿ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ಸಂಬಂಧ ಹಳಸಿದ್ದು, ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿ ಆಶುತೋಷ್ ಶೇಖರ್ ತಿಳಿಸಿದ್ದಾರೆ. 2013ರಲ್ಲಿ ರಾಜೀವ್​ಗೆ ರೈಲ್ವೆ ಇಲಾಖೆಯಲ್ಲಿ ಡಿ ದರ್ಜೆಯ ನೌಕರನಾಗಿ ಉದ್ಯೋಗ ದೊರೆತಿದೆ. ಆ ನಂತರ ಆತನ ಬಳಿಗೆ ಮರಳಿದ ಅನಿತಾ ನಂತರ ಜತೆಯಾಗಿ ವಾಸಿಸುತ್ತಿರುತ್ತಾಳೆ. ಚಾಯೀಬಸದಲ್ಲಿ ರಾಜೀವ್​​ಗೆ ದೊರೆತ ಕ್ವಾರ್ಟರ್ಸ್​​ನಲ್ಲಿ ಮಗಳ ಜತೆ ಇಬ್ಬರೂ ವಾಸಿಸುತ್ತಿರುತ್ತಾರೆ. ಅಲ್ಲಿಯೇ ರಾಜೀವ್​ನನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ: ತಾಯಿಯ ಅನೈತಿಕ ಸಂಬಂಧ ಪ್ರಶ್ನೇ ಮಾಡಿದ ಅಪ್ರಾಪ್ತ ಬಾಲಕಿಯನ್ನ ಕೊಂದ ದುರುಳ

ರಾಜೀವ್​ ಸಾವಿನ ಬಗ್ಗೆ ಅನುಮಾನಗಳು ಮೂಡಿಬಂದಿದ್ದರಿಂದ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಯಿತು. ಅನಿತಾಳನ್ನು ವಿಚಾರಣೆಗೆ ಒಳಪಡಿಸಿದಾಗ, ಪತಿಯ ಮರಣದ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಬಹುದೆಂಬ ಆಸೆಯಿಂದ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಎಲ್ಲಿದೆ ಚಾಯೀಬಸ?

ಜಾರ್ಖಂಡ್ ರಾಜ್ಯದ ಪಶ್ಚಿಮ ಸಿಂಹಭೂಮ್ ಜಿಲ್ಲೆಯ ನಗರವಾಗಿದೆ. ಚಾಯೀಬಸ ಜಿಲ್ಲಾ ಕೇಂದ್ರವೂ ಹೌದು. ಇದು ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಸ್ಥಳವೂ ಆಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 18 March 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ