AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಕುಡುಕ ಪತಿಯಿಂದ ಜಗಳ, ಹತ್ಯೆಗೈದ ಪತ್ನಿ.. ಪರಾರಿಯಾದ ಮಹಿಳೆಯ ಹಿಡಿದು ಠಾಣೆಗೆ ತಂದ ಪೊಲೀಸರು

16 ವರ್ಷದ ಹಿಂದೆ ಮದುವೆಯಾಗಿದ್ದ ಮೋಹನ್ ಮತ್ತು ಪದ್ಮಾ ದಂಪತಿ ನಡುವೆ ಪ್ರತಿ ದಿನವೂ ಜಗಳವಾಗುತ್ತಿತ್ತು. ಆದ್ರೆ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಜಗಳದಲ್ಲಿ ಪತ್ನಿ ಪದ್ಮಾ ಗಂಡನನ್ನೇ ಕೊಲೆ ಮಾಡಿದ್ದಾರೆ.

ಬೆಳಗಿನ ಜಾವ ಕುಡುಕ ಪತಿಯಿಂದ ಜಗಳ, ಹತ್ಯೆಗೈದ ಪತ್ನಿ.. ಪರಾರಿಯಾದ ಮಹಿಳೆಯ ಹಿಡಿದು ಠಾಣೆಗೆ ತಂದ ಪೊಲೀಸರು
ಪದ್ಮಾ
ಆಯೇಷಾ ಬಾನು
| Edited By: |

Updated on: Apr 12, 2021 | 12:48 PM

Share

ಬೆಂಗಳೂರು: ಗಂಡ ಹೆಂಡತಿಯ ಜಗಳ ಉಂಡು ಮಲಗೋ ತನಕ ಅನ್ನುತ್ತಾರೆ. ಆದ್ರೆ ಇಲ್ಲಿ ಶುರುವಾದ ಜಗಳಕ್ಕೆ ಪತ್ನಿಯೇ ಪತಿಯ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆ.ಜೆ.ನಗರದ ಓಬಳೇಶ್ ಕಾಲೋನಿಯಲ್ಲಿ ನಡೆದಿದೆ. 41 ವರ್ಷದ ಮೋಹನ್​ನನ್ನು ಪತ್ನಿ ಪದ್ಮಾ ಹತ್ಯೆಗೈದಿದ್ದಾರೆ. ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

16 ವರ್ಷದ ಹಿಂದೆ ಮದುವೆಯಾಗಿದ್ದ ಮೋಹನ್ ಮತ್ತು ಪದ್ಮಾ ದಂಪತಿ ನಡುವೆ ಪ್ರತಿ ದಿನವೂ ಜಗಳವಾಗುತ್ತಿತ್ತು. ಆದ್ರೆ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಜಗಳದಲ್ಲಿ ಪತ್ನಿ ಪದ್ಮಾ ಗಂಡನನ್ನೇ ಕೊಲೆ ಮಾಡಿದ್ದಾರೆ. ಕುಡಿತಕ್ಕೆ ದಾಸನಾಗಿದ್ದ ಮೋಹನ್ ಪತ್ನಿಯ ಶೀಲ ಶಂಕಿಸಿ ದಿನ ಆಕೆಯ ಜೊತೆ ಜಗಳವಾಡುತ್ತಿದ್ದ. ಇದೇ ವಿಚಾರಕ್ಕೆ ಇಂದು ಕೂಡ ಜಗಳವಾಗಿದ್ದು ಮಾತಿಗೆ ಮಾತು ಬೆಳೆದು ಕೋಪ ಮಿತಿ ಮೀರಿ ಪದ್ಮಾ ಗಂಡನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಮನೆಯಿಂದ ನಾಪತ್ತೆಯಾಗಿದ್ದಾರೆ.

ಮನೆಯಲ್ಲಿ ಬಿದ್ದಿದ್ದ ಮೋಹನ್​ನನ್ನು ಅಕ್ಕಪಕ್ಕದ ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು ಮಾರ್ಗ ಮಧ್ಯೆಯೇ ಮೋಹನ್ ಮೃತಪಟ್ಟಿದ್ದಾರೆ. ಬಳಿಕ ಜೆಜೆ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿದ್ದು ನಾಪತ್ತೆಯಾಗಿದ್ದ ಪದ್ಮಾಳನ್ನು ಹುಡುಕಿ ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೋಹನ್ ಮತ್ತು ಪದ್ಮಾ ದಂಪತಿಗೆ ಮೂವರು ಮಕ್ಕಳಿದ್ದಾರೆ. ಕೊಲೆ ಮಾಡಿರುವ ಪದ್ಮಾಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Husband Kills Wife: ಬಾಯಿಗೆ ಬಟ್ಟೆ ಇಟ್ಟು ಪತ್ನಿ ಕೊಲೆ ಮಾಡಿದ ಪತಿರಾಯ ಅರೆಸ್ಟ್

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್