ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ. ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ […]

ಸಮವಸ್ತ್ರ ಧರಿಸಿ, ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸ್ತಿದ್ದವ ಅಂದರ್
ಸಾಧು ಶ್ರೀನಾಥ್​

Updated on: Nov 30, 2019 | 12:40 PM

ರಾಯಚೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ 3 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಯು ಉದ್ಯೋಗಾಂಕ್ಷಿಗಳನ್ನ ಸೆಳೆಯಲು ಮತ್ತು ಅವರಲ್ಲಿ ನಂಬಿಕೆ ಹುಟ್ಟಿಸಲು ಸ್ವತಃ ಸೇನಾ ಸಮವಸ್ತ್ರ ಧರಿಸುತ್ತಿದ್ದ ಎಂಬುದು ಗಮನಾರ್ಹ.

ಮುದ್ದೇಬಿಹಾಳದ ನಾಲತವಾಡ ಮೂಲದ ಮಂಜುನಾಥರೆಡ್ಡಿ ಬಂಧಿತ ಆರೋಪಿ. ಲಿಂಗಸುಗೂರ ತಾಲೂಕಿನ ಮುದಗಲ್ ಮೂಲದ ಅಮರೇಶ್ ಮತ್ತು ಮಹೇಶ್ ಎಂಬುವವರಿಂದ 3 ಲಕ್ಷ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದಲ್ಲದೆ, ಮಂಗಳೂರಿನ ಸೂರತ್ಕಲ್​ನಲ್ಲೂ ಹಲವರಿಗೆ ಸೇನೆಯಲ್ಲಿ ಉದ್ಯೋಗ ಕೊಡಿಸುವಾಗಿ ವಂಚಿಸಿದ್ದಾನೆ.  ಸದ್ಯ ಆರೋಪಿ ಮಂಜುನಾಥರೆಡ್ಡಿ ಮಂಗಳೂರ ಪೊಲೀಸರ ವಶದಲ್ಲಿದ್ದಾನೆ ಎಂದು ಜಿಲ್ಲಾ ಎಸ್​ಪಿ ಡಾ.ವೇದಮೂರ್ತಿ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us