AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ರಾಜ್ಯಪಾಲನಾಗಿದ್ದೇನೆಂದು ಹೇಳಿ ಕಲಬುರಗಿ ವ್ಯಕ್ತಿಗೆ 3.8 ಲಕ್ಷ ರೂ. ವಂಚನೆ

ಕಲಬುರಗಿಯ ಶಾಸ್ತ್ರಿ ನಗರ ನಿವಾಸಿ ಪ್ರೇಮಲತಾ ವಿಶ್ವನಾಥ ಎಂಬುವವರಿಗೆ ತೆಲಂಗಾಣ ರಾಜ್ಯಪಾಲನಾಗಿದ್ದೇನೆಂದು ಹೇಳಿ ಜಿಲ್ಲೆಯ ಎಂಬಿ ನಗರ ನಿವಾಸಿ ಶಾಂತಕುಮಾರ ಜೆಟ್ಟೂರು ಎಂಬಾತನಿಂದ 3.8 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ನಗರದ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ತೆಲಂಗಾಣ ರಾಜ್ಯಪಾಲನಾಗಿದ್ದೇನೆಂದು ಹೇಳಿ ಕಲಬುರಗಿ ವ್ಯಕ್ತಿಗೆ 3.8 ಲಕ್ಷ ರೂ. ವಂಚನೆ
ಶಾಂತಕುಮಾರ್‌ ಜೆಟ್ಟೂರು
ದತ್ತಾತ್ರೇಯ ಪಾಟೀಲ್​
| Edited By: |

Updated on:Jan 12, 2024 | 4:17 PM

Share

ಕಲಬುರಗಿ, ಜನವರಿ 12: ತೆಲಂಗಾಣ ರಾಜ್ಯಪಾಲನಾಗಿದ್ದೇನೆಂದು ಹೇಳಿ 3.8 ಲಕ್ಷ ರೂ. ವಂಚನೆ (Fraud) ಮಾಡಿರುವಂತಹ ಘಟನೆ ನಡೆದಿದ್ದು, ನಗರದ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಕಲಬುರಗಿಯ ಶಾಸ್ತ್ರಿನಗರ ನಿವಾಸಿ ಪ್ರೇಮಲತಾ ವಿಶ್ವನಾಥ್​ಗೆ ಕಲಬುರಗಿಯ ಎಂ.ಬಿ.ನಗರ ನಿವಾಸಿ ಶಾಂತಕುಮಾರ್ ಜೆಟ್ಟೂರು ವಂಚನೆ ಮಾಡಲಾಗಿದೆ. ಪ್ರೇಮಲತಾ ಕುಟುಂಬಕ್ಕೆ ಮೊದಲಿನಿಂದಲೂ ವಂಚಕ ಶಾಂತಕುಮಾರ್ ಜೆಟ್ಟೂರು ಪರಿಚಯವಿದ್ದ. ಇತ್ತಿಚೆಗೆ ಸರ್ಕಾರಿ ಪಾಸಿಂಗ್ ವಾಹನದಲ್ಲಿ ಮನೆಗೆ ಬಂದು ನಂಬಿಕೆ ಬರುವಂತೆ ಮಾಡಿದ್ದ. ತೆಲಂಗಾಣ ರಾಜ್ಯಪಾಲನಾಗಿದ್ದೇನೆ. ಹಣದ ಅವಶ್ಯಕತೆ ಇದೆ ಎಂದು 3.8 ಲಕ್ಷ ರೂ. ಹಣವನ್ನು ಪಡೆದು ಬಳಿಕ ಕೊಡದೆ ವಂಚನೆ ಮಾಡಿದ್ದಾನೆ.

ಬ್ಯಾಂಕ್​ನಲ್ಲಿಟ್ಟಿದ್ದ ಸಾವಿರಾರು ರೂ. ಹಣ ರಾತ್ರೋ ರಾತ್ರಿ ಮಾಯ

ದೇವನಹಳ್ಳಿ: ಬ್ಯಾಂಕ್​ನಲ್ಲಿಟ್ಟಿದ್ದ ಸಾವಿರಾರು ರೂ. ಹಣ ರಾತ್ರೋ ರಾತ್ರಿ ಮಾಯವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಯೂನಿಯನ್ ಬ್ಯಾಂಕ್ ಖಾತೆಯಲ್ಲಿಟ್ಟಿದ್ದ ಹಣ ಇದ್ದಕ್ಕಿದ್ದಂತೆ ಮಾಯವಾಗಿದೆ ಎಂದು ಹತ್ತಾರು ಜನರು ಇದೇ ರೀತಿ ಆರೋಪ ಮಾಡಿದ್ದಾರೆ. ಖಾತೆಯಲ್ಲಿದ್ದ ಉಳಿತಾಯ ಹಣ ಕಳೆದುಕೊಂಡು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಯಾವ ಕಾರಣಕ್ಕೆ ಹಣ ಕಟ್ ಆಗಿದೆ ಮತ್ತು ಬ್ಯಾಂಕ್ ಸಿಬ್ಬಂದಿಗಳು ಸಮರ್ಪಕ ಉತ್ತರ ಕೊಡುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಕೆಲ ರೈತರು ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್​ಗೆ ಥಂಬ್ ನೀಡಿ ಬಂದ ನಂತರ ಖಾತೆಯಲ್ಲಿದ್ದ ಹಣ ಮಾಯ‌ವಾಗಿದೆ. ಯಾರು ಯಾವ ಖಾತೆಗೆ ಹಣ ವರ್ಗಾವಣೆಯಾಗಿದೆ ಅಂತ ತಿಳಿಸುವಂತೆ ಒತ್ತಾಯಿಸಿದ್ದಾರೆ.

ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ 2 ಬಂಧನ: 7 ಲಕ್ಷ ರೂ. ಮೌಲ್ಯದ 121 ಗ್ರಾಂ.ಚಿನ್ನ ವಶಕ್ಕೆ

ಬೆಂಗಳೂರು: ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 7 ಲಕ್ಷ ಮೌಲ್ಯದ 121 ಗ್ರಾಂ.ಚಿನ್ನ, 1 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸದ್ಯ ರಾಜಗೋಪಾಲನಗರ ಪೊಲೀಸರು ತನಿಖೆ ನಡೆಸಿದ್ದಾರೆ. ರಾಜಗೋಪಾಲನಗರದ ಮನೆಯೊಂದರ ಹಳ್ಳಿಯಲ್ಲಿ ಕೃತ್ಯ ಎಸಗಿದ್ದರು. ಮನೆಯಲ್ಲಿದ್ದ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದರು.

ಇದನ್ನೂ ಓದಿ: ಐಎಎಸ್, ಐಪಿಎಸ್ ಕನಸು ಕಂಡವ ಮಾಡಿದ್ದು ಉದ್ಯಮಿಯ ಕಿಡ್ನಾಪ್! ಇಬ್ಬರು ಅರೆಸ್ಟ್‌

ಈ ಹಿಂದೆ ನಾಲ್ವರನ್ನು ಬಂಧನ ಮಾಡಿದ್ದ ಪೊಲೀಸರು, ಬಳಿಕ ಇಂದು ಪ್ರಕರಣದ ಪ್ರಮುಖ ಆರೋಪಿ ಮಣಿಕಂಠನನ್ನು ಬಂಧಿಸಿದ್ದರು. ರಾಜಗೋಪಾಲನಗರದ ರೌಡಿಶೀಟ್ ಸಹ ಹೊಂದಿದ್ದು, ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಭಾರಿ ಬಂಧನವಾದರೂ ಮತ್ತದೆ ಕೃತ್ಯ ಎಸಗುತ್ತಿದ್ದ.

ಮತ್ತಷ್ಟ ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:16 pm, Fri, 12 January 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ