AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನಗರದಲ್ಲಿದೆ ಖತರ್ನಾಕ್​ ಗ್ಯಾಂಗ್​: ಜಮೀನು ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ವಂಚನೆ

ನಕಲಿ ದಾಖಲಾತಿ ಸೃಷ್ಟಿಸಿ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ಮಾರಟ ಮಾಡುತ್ತಿದ್ದ ಗ್ಯಾಂಗ್ ವಿರುದ್ಧ ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. 26 ಜ‌ನರ ವಿರದ್ಧ ದೂರು ದಾಖಲಾಗಿದ್ದು, ನಾಲ್ವರು ವಂಚಕರನ್ನು ಬಂಧಿಸಲಾಗಿದೆ.

ಕಲಬುರಗಿ ನಗರದಲ್ಲಿದೆ ಖತರ್ನಾಕ್​ ಗ್ಯಾಂಗ್​: ಜಮೀನು ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ ವಂಚನೆ
ಚರ್ಚ್​ ಆಸ್ತಿ ಗುಳುಂ ಮಾಡಲು ಯತ್ನ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jan 08, 2024 | 1:57 PM

Share

ಕಲಬುರಗಿ, ಜನವರಿ 07: ನಕಲಿ ದಾಖಲಾತಿ ಸೃಷ್ಟಿಸಿ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ಮಾರಟ ಮಾಡುತ್ತಿದ್ದ ಗ್ಯಾಂಗ್ ವಿರುದ್ಧ ಕಲಬುರಗಿ (Kalaburagi) ಸೈಬರ್ ಕ್ರೈಂ (Cyber Crime) ಠಾಣೆಯಲ್ಲಿ ದೂರು ದಾಖಲಾಗಿದೆ. 26 ಜ‌ನರ ವಿರದ್ಧ ದೂರು ದಾಖಲಾಗಿದ್ದು, ನಾಲ್ವರು ವಂಚಕರನ್ನು ಬಂಧಿಸಲಾಗಿದೆ. ಆನಂದ್ ಪಾಪಾಚಂದ, ನಜೀರ್ ಅಹ್ಮದ್, ಮಶಾಕ್ ಪಟೇಲ್ ಬಂಧಿತ ಆರೋಪಿಗಳು. ಇನ್ನುಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕಲಬುರಗಿ ನಗರದ ಹೃದಯಭಾಗದಲ್ಲಿ ಕ್ರಿಶ್ಚಿಯನ್ ಸಮೂದಾಯದ ಶಾಂತಿ ಸದನಕ್ಕೆ ಸೇರಿದ 6 ಎಕರೆ 5 ಗುಂಟೆ ಜಮೀನು ಕನಿಷ್ಟ 80 ರಿಂದ 100 ಕೋಟಿ ರೂಪಾಯಿಗೆ ಬೆಲೆ ಬಾಳುತ್ತದೆ. ಆರೋಪಿಗಳು ಈ ಜಮೀನಿಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಬಳಿಕ ಉದ್ಯಮಿ ಅಂಬರೀಷ ಎಂಬುವರಿಗೆ 10 ಕೋಟಿ 20 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಆಸ್ತಿಗೆ ಸಂಬಂಧವಿಲ್ಲದ ಮೂರನೇ ವ್ಯಕ್ತಿಯಿಂದ ಅಂಬರೀಶ್ ಬಳಿ ಹಣ ವಸೂಲಿ ಮಾಡಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಯುವಕನನ್ನು ಬರ್ಬರವಾಗಿ ಕೊಲೆಗೈದು, ಶವ ಸುಟ್ಟ ಆರೋಪಿಗಳ ಬಂಧನ

ಬಳಿಕ ಅಂಬರೀಶ್ ಅವರನ್ನು ನಂಬಿಸಲು ಖದೀಮರು ಖತರ್ನಾಕ್ ಪ್ಲ್ಯಾನ್ ಮಾಡಿದ್ದಾರೆ. ಅಂಬರೀಶ್​ ಅವರನ್ನು ಸಬ್ ರೆಜಿಸ್ಟರ್ ಕಛೇರಿಗೆ ಕರೆದುಕೊಂಡು ಹೋಗಿ, ಅವರ ಥಂಬ್, ಫೋಟೋ, ಸಹಿ ಪಡೆದಿದ್ದಾರೆ. ಆದರೆ ದಾಖಲೆ ಪತ್ರದಲ್ಲಿ ರಜಿಸ್ಟರ್ ಆಗಿದ್ದು 6 ಎಕರೆ ಶಾಂತಿ ಸದನ ಆಸ್ತಿಯಲ್ಲ, ಬದಲಿಗೆ ಕುಸನೂರ ಬಳಿಯ 40X60 ಸೈಟಾಗಿತ್ತು. ಈ 40X60 ಸೈಟಿನ ಮೂಲ ದಾಖಲೆಗಳನ್ನೇ ಮುಂದಿಟ್ಟುಕೊಂಡು ಐದು ಎಕರೆ ಜಮೀನು ರಜಿಸ್ಟರ್ ಆಗಿರುವ ನಕಲಿ ದಾಖಲೆ ಸೃಷ್ಠಿಸಿದ್ದಾರೆ. ಸಬ್ ರಜಿಸ್ಟರ್ ಅವರ ಸೀಲ್, ಸಹಿ ಎಲ್ಲವೂ ನಕಲಿಯಾಗಿದೆ. ಖರೀದಿದಾರ ಅಂಬರೀಶ್, ಜಾಗದ ಕಬ್ಜಾಗೆ ಹೋದಾಗ ಈ ಸತ್ಯ ಬೆಳಕಿಗೆ ಬಂದಿದೆ.

ಸಬ್ ರಜಿಸ್ಟರ್ ಕಚೇರಿಯಲ್ಲಿ ಈ ಜಮೀನು ಮಾರಾಟವಾಗಿಲ್ಲ. ಆದರೂ ಖರೀದಿದಾರನಿಗೆ ನಕಲಿ ದಾಖಲೆ ಕೊಟ್ಟು ನಂಬಿಸಿ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ಒಂದೆಡೆ ತಮ್ಮ ಆಸ್ತಿ ಉಳಿಸಿಕೊಳ್ಳಲು ಕ್ರೈಸ್ತ ಸಮುದಾಯದವರು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಜಮೀನಿಗಾಗಿ ಹತ್ತು ಕೋಟಿ ರೂ. ಕಳೆದುಕೊಂಡ ಅಂಬರೀಶ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ