ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ

ಅವರೆಲ್ಲರು ಒಂದೇ ಏರಿಯಾದ ಹುಡುಗರು, ಮೇಲಾಗಿ ಎಲ್ಲರೂ ಕುಚಿಕು ಸ್ನೇಹಿತರು. ಕಷ್ಟಕ್ಕೆ ಎಂದು ಸ್ನೇಹಿತನ ಬಳಿ ಅವರು ಹಣವನ್ನ ಸಾಲದ ರೂಪದಲ್ಲಿ ಪಡೆದಿದ್ದರು. ಸಾಲ ಕೊಟ್ಟವ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತರೆಲ್ಲರೂ ಸೇರಿಕೊಂಡು ಗೆಳೆಯನನ್ನೇ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆದ ಘಟನೆ ಕಲಬುರಗಿಯಲ್ಲಿ ನಡೆದಿತ್ತು. ಇದೀಗ ಪರಾರಿಯಾಗಿದ್ದ ಮೂರು ಜನ ಹಂತಕ ಸ್ನೇಹಿತರನ್ನ ಪೊಲೀಸರು ಲಾಕ್ ಮಾಡಿ ಕಂಬಿ ಹಿಂದೆ ಕಳುಹಿಸಿದ್ದಾರೆ.

ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ
ಮೃತ ರೋಹನ್​, ಬಂಧಿತ ಆರೋಪಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 17, 2024 | 3:08 PM

ಕಲಬುರಗಿ, ಫೆ.17: ಕೊಟ್ಟ ಸಾಲ ವಾಪಸ್​​ ಕೇಳಿದಕ್ಕೆ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಕಲಬುರಗಿ (Kalaburagi) ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿತ್ತು. ರೋಹನ್ ಮೃತ ರ್ದುದೈವಿ. ಫೆಬ್ರವರಿ 6 ರಂದು ಸುನೀಲ್ ಸಿಂಗ್ , ಭಗತ್ ಸಿಂಗ್  ಸೊಹೇಲ್ ಎಂಬುವವರು ಜೊತೆಗಿದ್ದ ಸ್ನೇಹಿತ ರೋಹನ್ ಎಂಬಾತನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಕೊಲೆಯ ಬಳಿಕ ನಾಲ್ಕು ಜನ ಆರೋಪಿಗಳು ಎಸ್ಕೇಪ್ ಆಗಿದ್ದರು. ಕೊಲೆ ಪ್ರಕರಣವನ್ನ ದಾಖಲಿಸಿಕೊಂಡ ಚೌಕ್ ಪೊಲೀಸರು, ಇದೀಗ ಮೂರು ಜನ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ.

ಇನ್ನು ಕೊಲೆಯಾದ ರೋಹನ್​ ಸೇರಿದಂತೆ ಹತ್ಯೆ ಮಾಡಿದವರು ಕೂಡ ಸ್ನೇಹಿತರು. ಈ ಸುನೀಲ್ ಸಿಂಗ್ ಹಾಗೂ ಭಗತ್ ಸಿಂಗ್ ಎಂಬುವವರು ರೋಹನ್ ಬಳಿ ಎರಡ್ಮೂರು ಸಾವಿರ ರೂಪಾಯಿ ಹಣವನ್ನ ಸಾಲದ ರೂಪದಲ್ಲಿ ಪಡೆದುಕೊಂಡಿದ್ದರು. ಸಾಲವಾಗಿ ಕೊಟ್ಟ ಹಣವನ್ನ ತಿಂಗಳುಗಳು ಕಳೆದರೂ ಕೂಡ ವಾಪಸ್ ನೀಡಿರಲಿಲ್ಲ. ಹಾಗಾಗಿ ಕಳೆದ ಮಂಗಳವಾರ ರೋಹನ್ ತನ್ನ ಸ್ನೇಹಿತರಿಗೆ ದುಡ್ಡು ಕೊಡುವಂತೆ ತಾಕೀತು ಮಾಡಿದ್ದಾನೆ. ಆಗ ಈ ಸುನೀಲ್ ಸಿಂಗ್ ,ಮತ್ತು ಭಗತ್ ಸಿಂಗ್ ಗ್ಯಾಂಗ್ ಮಂಗಳವಾರ ರಾತ್ರಿ ರೋಹನ್ ಕರೆ ಮಾಡಿ ಮನೆಯಿಂದ ಕರೆಯಿಸಿಕೊಂಡು ಸೈಯದ್ ಚಿಂಚೋಳಿ ಕ್ರಾಸ್ ಬಳಿ ಕರೆದುಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು.

ಇದನ್ನೂ ಓದಿ:ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಸದ್ಯ ಕೊಲೆ ಮಾಡಿದ ಮೂರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡ ಮತ್ತೊಬ್ಬ ಆರೋಪಿ ಮೋಹನ್‌ಗಾಗಿ ಚೌಕ್ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅದೇನೆ ಇರಲಿ ಕಷ್ಟ ಎಂದಾಗ ಸ್ನೇಹಿತ ಬೇಕು, ಅದೇ ಸ್ನೇಹಿತನಿಗೆ ಕಷ್ಟ ಬಂದಿದೆ ಎಂದಾಗ ಕೊಟ್ಟ ದುಡ್ಡು ವಾಪಸ್ ಕೇಳಿರೋದಕ್ಕೆ ಕೊಲೆ ಮಾಡಿರುವುದು ನಿಜಕ್ಕೂ ದುರುಂತವೇ ಸರಿ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ