AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ

ಅವರೆಲ್ಲರು ಒಂದೇ ಏರಿಯಾದ ಹುಡುಗರು, ಮೇಲಾಗಿ ಎಲ್ಲರೂ ಕುಚಿಕು ಸ್ನೇಹಿತರು. ಕಷ್ಟಕ್ಕೆ ಎಂದು ಸ್ನೇಹಿತನ ಬಳಿ ಅವರು ಹಣವನ್ನ ಸಾಲದ ರೂಪದಲ್ಲಿ ಪಡೆದಿದ್ದರು. ಸಾಲ ಕೊಟ್ಟವ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತರೆಲ್ಲರೂ ಸೇರಿಕೊಂಡು ಗೆಳೆಯನನ್ನೇ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆದ ಘಟನೆ ಕಲಬುರಗಿಯಲ್ಲಿ ನಡೆದಿತ್ತು. ಇದೀಗ ಪರಾರಿಯಾಗಿದ್ದ ಮೂರು ಜನ ಹಂತಕ ಸ್ನೇಹಿತರನ್ನ ಪೊಲೀಸರು ಲಾಕ್ ಮಾಡಿ ಕಂಬಿ ಹಿಂದೆ ಕಳುಹಿಸಿದ್ದಾರೆ.

ಕಲಬುರಗಿ: ಸಾಲ ಕೊಟ್ಟ ಹಣ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ; ಮೂವರ ಬಂಧನ
ಮೃತ ರೋಹನ್​, ಬಂಧಿತ ಆರೋಪಿಗಳು
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 17, 2024 | 3:08 PM

Share

ಕಲಬುರಗಿ, ಫೆ.17: ಕೊಟ್ಟ ಸಾಲ ವಾಪಸ್​​ ಕೇಳಿದಕ್ಕೆ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಕಲಬುರಗಿ (Kalaburagi) ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿತ್ತು. ರೋಹನ್ ಮೃತ ರ್ದುದೈವಿ. ಫೆಬ್ರವರಿ 6 ರಂದು ಸುನೀಲ್ ಸಿಂಗ್ , ಭಗತ್ ಸಿಂಗ್  ಸೊಹೇಲ್ ಎಂಬುವವರು ಜೊತೆಗಿದ್ದ ಸ್ನೇಹಿತ ರೋಹನ್ ಎಂಬಾತನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಕೊಲೆಯ ಬಳಿಕ ನಾಲ್ಕು ಜನ ಆರೋಪಿಗಳು ಎಸ್ಕೇಪ್ ಆಗಿದ್ದರು. ಕೊಲೆ ಪ್ರಕರಣವನ್ನ ದಾಖಲಿಸಿಕೊಂಡ ಚೌಕ್ ಪೊಲೀಸರು, ಇದೀಗ ಮೂರು ಜನ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ.

ಇನ್ನು ಕೊಲೆಯಾದ ರೋಹನ್​ ಸೇರಿದಂತೆ ಹತ್ಯೆ ಮಾಡಿದವರು ಕೂಡ ಸ್ನೇಹಿತರು. ಈ ಸುನೀಲ್ ಸಿಂಗ್ ಹಾಗೂ ಭಗತ್ ಸಿಂಗ್ ಎಂಬುವವರು ರೋಹನ್ ಬಳಿ ಎರಡ್ಮೂರು ಸಾವಿರ ರೂಪಾಯಿ ಹಣವನ್ನ ಸಾಲದ ರೂಪದಲ್ಲಿ ಪಡೆದುಕೊಂಡಿದ್ದರು. ಸಾಲವಾಗಿ ಕೊಟ್ಟ ಹಣವನ್ನ ತಿಂಗಳುಗಳು ಕಳೆದರೂ ಕೂಡ ವಾಪಸ್ ನೀಡಿರಲಿಲ್ಲ. ಹಾಗಾಗಿ ಕಳೆದ ಮಂಗಳವಾರ ರೋಹನ್ ತನ್ನ ಸ್ನೇಹಿತರಿಗೆ ದುಡ್ಡು ಕೊಡುವಂತೆ ತಾಕೀತು ಮಾಡಿದ್ದಾನೆ. ಆಗ ಈ ಸುನೀಲ್ ಸಿಂಗ್ ,ಮತ್ತು ಭಗತ್ ಸಿಂಗ್ ಗ್ಯಾಂಗ್ ಮಂಗಳವಾರ ರಾತ್ರಿ ರೋಹನ್ ಕರೆ ಮಾಡಿ ಮನೆಯಿಂದ ಕರೆಯಿಸಿಕೊಂಡು ಸೈಯದ್ ಚಿಂಚೋಳಿ ಕ್ರಾಸ್ ಬಳಿ ಕರೆದುಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು.

ಇದನ್ನೂ ಓದಿ:ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಸದ್ಯ ಕೊಲೆ ಮಾಡಿದ ಮೂರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡ ಮತ್ತೊಬ್ಬ ಆರೋಪಿ ಮೋಹನ್‌ಗಾಗಿ ಚೌಕ್ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅದೇನೆ ಇರಲಿ ಕಷ್ಟ ಎಂದಾಗ ಸ್ನೇಹಿತ ಬೇಕು, ಅದೇ ಸ್ನೇಹಿತನಿಗೆ ಕಷ್ಟ ಬಂದಿದೆ ಎಂದಾಗ ಕೊಟ್ಟ ದುಡ್ಡು ವಾಪಸ್ ಕೇಳಿರೋದಕ್ಕೆ ಕೊಲೆ ಮಾಡಿರುವುದು ನಿಜಕ್ಕೂ ದುರುಂತವೇ ಸರಿ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ