AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಲಾಯರ್ ಹತ್ಯೆ: ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್, ಕೊಲೆ ಹಿಂದಿನ ಸ್ಫೋಟಕ ಕಾರಣ ಬಹಿರಂಗ

ಡಿಸೆಂಬರ್​ 7 ರಂದು ಕಲಬುರಗಿಯಲ್ಲಿ ನಡೆದ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಹಾಡು ಹಗಲೇ ವಕೀಲರೊಬ್ಬರನ್ನು ಅಟ್ಟಾಡಿಸಿಕೊಂಡು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಅಂದು ಮಧ್ಯಾಹ್ನ ವಕೀಲ ಈರಣ್ಣಗೌಡ ಪಾಟೀಲ್​ ಅವರನ್ನು ಕೊಲೆ ಮಾಡಲು ಕಾರಣವೇನು? ಇಲ್ಲಿದೆ ಓದಿ...

ಕಲಬುರಗಿಯಲ್ಲಿ ಲಾಯರ್ ಹತ್ಯೆ: ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್, ಕೊಲೆ ಹಿಂದಿನ ಸ್ಫೋಟಕ ಕಾರಣ ಬಹಿರಂಗ
ಪ್ರಮುಖ ಆರೋಪಿ ನೀಲಕಂಠ, ವಕೀಲ ಈರಣ್ಣಗೌಡ ಪಾಟೀಲ್​
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 10, 2023 | 1:24 PM

Share

ಕಲಬುರಗಿ, ಡಿಸೆಂಬರ್​ 10: ವಕೀಲ (Lawyer) ಈರಣ್ಣಗೌಡ ಪಾಟೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು (Police) ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ನೀಲಕಂಠ ಪಾಟೀಲ್ ಬಂಧಿತ ಪ್ರಮುಖ ಆರೋಪಿ. ಪ್ರಕರಣ ನಡೆದ ಬಳಿಕ ಪ್ರಮುಖ ಆರೋಪಿ ನೀಲಕಂಠ ಪರಾರಿಯಾಗಿದ್ದನು. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೂ ಪೊಲೀಸರು ತಡರಾತ್ರಿ ಪ್ರಮುಖ ಆರೋಪಿ ನೀಲಕಂಠ‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಪೊಲೀಸರು ನೀಲಕಂಠ ಪಾಟೀಲ್ ಪತ್ನಿ ಸಿದ್ದಮ್ಮ ಪಾಟೀಲ್​ಳನ್ನೂ ಬಂಧಿಸಿದ್ದಾರೆ.

ಡಿಸೆಂಬರ್​​ 7 ರಂದು ಕಲಬುರಗಿಯ ಶ್ರಿಗಂಗಾವಿಹಾರ ಅರ್ಪಾಟಮೆಂಟ್​ನಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈರಣ್ಣಗೌಡ ಪಾಟೀಲ್​ ಅವರನ್ನು ಕೊಲೆ ಮಾಡಲು ಪ್ರಮುಖ ಆರೋಪಿ ನೀಲಕಂಠ ಮತ್ತು ಈತನ ಸಹಚರರಾದ ಮಲ್ಲಿನಾಥ ನಾಯ್ಕೋಡಿ, ಭಾಗೇಶ, ಅವಣ್ಣ ಜೊತೆಯಾಗಿ ಫ್ಲ್ಯಾನ್ ರೂಪಿಸಿದ್ದರು.

ವಕೀಲ ಈರಣ್ಣಗೌಡ ಕೊಲೆ ಹಿಂದಿನ ಕಾರಣ

ಪ್ರಕರಣದ ಪ್ರಮುಖ ಆರೋಪಿ ನೀಲಕಂಠ ಕೊಲೆಯಾದ ವಕೀಲ ಈರಣ್ಣಗೌಡ ಪಾಟೀಲ್ ಅವರ ಸಹೋದರ ಸಂಬಂಧಿ. ಕಲಬುರಗಿ ನಗರಕ್ಕೆ ಹೊಂದಿಕೊಂಡಂತೆ ಎಕರೆಗೆ 3 ಕೋಟಿ ರೂ. ಬೆಲೆ ಬಾಳುವ 12 ಎಕರೆ ಜಮೀನು ವಕೀಲ ಈರಣ್ಣಗೌಡ ಪಾಟೀಲ್​ ಅವರ ಹೆಸರಿನಲ್ಲಿ ಇತ್ತು. ಈ ಜಮೀನನ್ನು ಹಂತಕ ಮಲ್ಲಿನಾಥ ನಾಯ್ಕೋಡಿ ಕುಟುಂಬದವರು ನೋಡಿಕೊಳ್ಳುತ್ತಿದ್ದರು.

ತಮ್ಮ ಜಮೀನನ್ನು ಸೈಟ್ ಆಗಿ ಪರಿವರ್ತನೆ ಮಾಡುವ ಸಲುವಾಗಿ ವಕೀಲ ಈರಣ್ಣಗೌಡ ಪಾಟೀಲ್​ ಓಡಾಡುತ್ತಿದ್ದರು. ಒಂದೊಂದು ಸೈಟ್ 20 ರಿಂದ 30 ಲಕ್ಷ ರೂ. ಬೆಲೆ ಬಾಳುತ್ತದೆ. ಈ ಮಧ್ಯೆ ಜಮೀನಿನಲ್ಲಿ ಪಾಲು ಬೇಕು ಅಂತ ನೀಲಕಂಠ ಹಾಗೂ ನಾಯ್ಕೋಡಿ ಕುಟುಂಬ ನ್ಯಾಯಾಲಯದಲ್ಲಿ ದಾವೆ ಹೂಡಿದರು.

ಇತ್ತ ನಾಯ್ಕೋಡಿ ಕುಟುಂಬದ ಜಮೀನಿನ ಪಕ್ಕದಲ್ಲೇ ವಕೀಲ ಈರಣ್ಣಗೌಡ ಪಾಟೀಲ್​ ಅವರ ಜಮೀನು ಇತ್ತು. ಹೀಗಾಗಿ ಕೋಟಿ ಕೋಟಿ ಬೆಲೆ ಬಾಳುವ ಭೂಮಿ ಮೇಲೆ ನಾಯ್ಕೋಡಿ ಕುಟುಂಬದ ಕಣ್ಣು ಬಿದ್ದಿತ್ತು. ಇದಕ್ಕಾಗಿ ಗಲಾಟೆ, ರಾಜಿ-ಪಂಚಾಯಿತಿ ಕೂಡ ಆಗಿತ್ತು. 12 ಏಕೆರೆಯಲ್ಲಿ 2 ರಿಂದ 3 ಏಕರೆನಾದರೂ ನೀಡವುಂತೆ ಆರೋಪಿಗಳು ದುಂಬಾಲು ಬಿದ್ದಿದ್ದರು. ಆದರೆ ಇದಕ್ಕೆ ವಕೀಲ ಈರಣ್ಣಗೌಡ ಪಾಟೀಲ್​ ಅವರು ಒಪ್ಪಿರಲ್ಲ.

ಇದನ್ನೂ ಓದಿ: ಕೆಎಸ್ಆರ್​ಟಿಸಿ ಸಿಬ್ಬಂದಿ ಹತ್ಯೆ; ನಾಲ್ಕು ತಿಂಗಳ ಬಳಿಕ ಕೊಲೆ ಆರೋಪಿಗಳ ಬಂಧನ

ಈರಣ್ಣಗೌಡ ಒಬ್ಬನೇ ಮಗ, ಹೀಗಾಗಿ ಅವನನ್ನು ಮುಗಿಸಿದರೇ ಕೋಟಿ ಕೋಟಿ ಬೆಲೆ ಬಾಳುವ ಜಮೀನು ತಮ್ಮದಾಗುತ್ತೆಂದು ಹಂತಕರು ಫ್ಲ್ಯಾನ್ ಮಾಡಿದ್ದರು. ಅದರಂತೆ ಸಹೋದರ ಸಂಬಂಧಿ ನೀಲಕಂಠ ಫ್ಲ್ಯಾನ್ ಮಾಡಿದ್ದನು. ಈ ಪ್ಲ್ಯಾನ್​​ನಲ್ಲಿ ನೀಲಕಂಠ ಪಾಟೀಲ್​ ಪತ್ನಿ ಕೂಡ ಶಾಮೀಲಾಗಿದ್ದಾಳೆ. ಹತ್ಯೆಗೆ ಸಂಬಂಧಿಸಿದಂತೆ ಎಲ್ಲಾ ವ್ಯವಸ್ಥೆಯನ್ನು ದಂಪತಿ ಮಾಡಿದ್ದರು.

ಡಿಸೆಂಬರ್​ 7 ರಂದು ಜಮೀನು ವ್ಯಾಜ್ಯ ಸಂಬಂಧ ಅಂತೀಮ ತೀರ್ಪು ಇತ್ತು. ಅವತ್ತು ವಕೀಲ​ ಈರಣ್ಣಗೌಡ ಪಾಟೀಲ್ ಅವರು​ ಕೋರ್ಟ್​ಗೆ ಹೋಗುತ್ತಿದ್ದರು. ಇತ್ತ್ತ ನೀಲಕಂಠ ಪಾಟೀಲ್​ ಮತ್ತು ಆತನ ಪತ್ನಿ ಸಿದ್ದಮ್ಮ ಪಾಟೀಲ್​ ತಮ್ಮ ಹೊಸ ಕಾರ್ ಪೂಜೆಗೆಂದು ದಂಪತಿ ಗಾಣಾಗಪುರಕ್ಕೆ ತೇರಳಿದ್ದರು.

ಆರೋಪಿ ನೀಲಕಂಠ ಪಾಟೀಲ್​ನ ಫ್ಲ್ಯಾನ್​ನಂತೆ ಮಲ್ಲಿನಾಥ, ಅವಣ್ಣ, ಭಾಗೇಶ ನಾಯ್ಕೋಡಿ ದಾರಿಯಲ್ಲಿ ಈರಣ್ಣಗೌಡ ಪಾಟೀಲ್​ ಅವರನ್ನು ಅಡ್ಡಹಾಕಿದರು. ಕೈಯಲ್ಲಿ ಮಚ್ಚು ಹಿಡಿದುಕೊಂಡು ಅಟ್ಟಾಡಿಸಿ ಈರಣ್ಣಗೌಡ ಪಾಟೀಲ್​ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದರು. ಬಳಿಕ ಕೊಲೆಯ ವಿಚಾರವನ್ನು ದಂಪತಿಗೆ ತಿಳಿಸಿದ್ದಾರೆ.

ಕಾರ್ ಪೂಜೆ ಮುಗಿಸಿ ದೇವರ ದರ್ಶನ ಪಡೆಯುವಾಗಲೆ‌ ನೀಲಕಂಠ ಪಾಟೀಲ್ ಕೊಲೆಯಾದ ಸುದ್ದಿ ಪಡೆದಿದ್ದಾನೆ. ಕೊಲೆಯಾದ ಸುದ್ದಿ ತಿಳಿಯುತ್ತಲೆ ದಂಪತಿ ದೇವಸ್ಥಾನದಲ್ಲಿ ಸಂತಸಪಟ್ಟಿದ್ದಾರೆ. ಬಳಿಕ ನೀಲಕಂಠ ಪಾಟೀಲ್ ಮತ್ತು ಸಿದ್ದಮ್ಮ ಕಲಬುರಗಿಗೆ ಆಗಮಿಸಿದ್ದಾರೆ. ಮಲ್ಲಿನಾಥ್ ನಾಯ್ಕೋಡಿ ಕೂಡ ರಕ್ತದ ಕಲೆಯಲ್ಲೇ ಇವರ ಮನೆಗೆ ಬಂದು, ಸಿದ್ದಮ್ಮ ಪಾಟೀಲ್​ನಿಂದ 50 ಸಾವಿರ ರೂ. ತೆಗೆದುಕೊಂಡ ಹೋಗಿದ್ದನು. ಸದ್ಯ ಕಲಬುರಗಿ ವಿವಿ ಪೊಲೀಸರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ