AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ್ದ ಕಾನ್​ಸ್ಟೇಬಲ್​ ಕಿಸೆಯಿಂದ ಕೀ ತೆಗೆದುಕೊಂಡು ಪೊಲೀಸ್​ ಬಸ್​ ಕಳವಿಗೆ ಯತ್ನಸಿದ ಸೋನು

ಕಲಬುರಗಿ ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕಡುಕ ಕಳ್ಳನೊಬ್ಬ ನಶೆಯಲ್ಲಿ ಪೊಲೀಸ್​ ಕಚೇರಿಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಪೊಲೀಸ್​ ಬಸ್​ ಒಳಗಡೆ ಹೋಗಿ, ನಿದ್ದೆಗೆ ಜಾರಿದ್ದ ಪೊಲೀಸ್​ ಪೇದೆ ಕಿಸೆಯಿಂದ ಕೀ ತೆಗೆದುಕೊಂಡು ಕಳುವು ಮಾಡಲು ಯತ್ನಿಸಿದ್ದಾನೆ.

ನಿದ್ದೆಗೆ ಜಾರಿದ್ದ ಕಾನ್​ಸ್ಟೇಬಲ್​ ಕಿಸೆಯಿಂದ ಕೀ ತೆಗೆದುಕೊಂಡು ಪೊಲೀಸ್​ ಬಸ್​ ಕಳವಿಗೆ ಯತ್ನಸಿದ ಸೋನು
ಆರೋಪಿ ಸೋನು, ಪೊಲೀಸ್​ ಬಸ್​
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 17, 2024 | 9:53 AM

Share

ಕಲಬುರಗಿ, ಮೇ 17: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬಸ್​ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ (Kalaburagi) ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ (Police Commissioner office) ಆವರಣದಲ್ಲಿ ನಡೆದಿದೆ. ಸೋನು ಭಗಿರಥ ಕಳ್ಳತನದ ಆರೋಪಿ. ಕೆಎ 32 ಜಿ 1550 ನಂಬರ್​ನ ಸಿಆರ್​ಪಿಎಫ್​ ಪೊಲೀಸರ ಬಸ್ ಅನ್ನು ಕಮಿಷನರ್​ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು.

ಚತ್ತಿಸಘಡ ಮೂಲದ ಕಳ್ಳ ಸೋನು ಭಗಿರಥ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ಕುಡಿದ ನಶೆಯಲ್ಲಿ ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದೊಳಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಸಿಆರ್​ಪಿಎಫ್​ ಪೊಲೀಸರ ಬಸ್ ಒಳಗಡೆ ಹೋಗಿದ್ದಾನೆ. ಬಸ್​ ಓರ್ವ ಕಾನ್​ಸ್ಟೇಬಲ್​ ಇದ್ದು, ನಿದ್ದೆಗೆ ಜಾರಿದ್ದರು.

ಪೊಲೀಸ್ ಕಾನ್ಸಟೇಬಲ್ ಬಸ್​ನ ಕಿಟಕಿಗೆ ತಮ್ಮ ಬಟ್ಟೆ ನೇತು ಹಾಕಿ, ಮಲಗಿದ್ದರು. ಇದನ್ನು ಕಂಡ ಕಳ್ಳ ಸೋನು ಪೊಲೀಸ್ ಕಾನ್ಸಟೇಬಲ್ ಜೇಬಿನಲ್ಲಿದ್ದ ಬಸ್​ ಕೀ ತೆಗೆದುಕೊಂಡಿದ್ದಾನೆ. ಬಳಿಕ ಬಸ್ ಸ್ಟಾರ್ಟ್ ಮಾಡುತ್ತಿದ್ದ ಹಾಗೆ ಪೊಲೀಸ್ ಕಾನ್ಸಟೇಬಲ್ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣ ಪೊಲೀಸ್ ಕಾನ್ಸಟೇಬಲ್ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸರಣಿ ಕೊಲೆಗಳು, ಭುಗಿಲೆದ್ದ ಆಕ್ರೋಶ: ಕಾನೂನು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ನಾಯಕರಿಂದಲೇ ಅಸಮಾಧಾನ

ಒಡವೆ ಅಂಗಡಿಯಲ್ಲಿದ್ದ ಬಂಗಾರ ಕಳ್ಳತನ

ಇದೇ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್​ನಲ್ಲಿರುವ ತನಿಷ್ಕ ಒಡವೆ ಅಂಗಡಿಯಲ್ಲಿನ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಇಬ್ಬರು ಮಹಿಳೆಯರು ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದಿದ್ದಾರೆ. ಚಿನ್ನಾಭರಣ ಖರಿದಿ ನೇಪದಲ್ಲಿ ಹಲವು ಒಡವೆಗಳನ್ನ ತೆಗೆಸಿದ್ದರು. ಒಡೆವುಗಳನ್ನು ನೋಡುತ್ತಾ, ಅಂಗಡಿ ಸಿಬ್ಬಂದಿಗೆ ಕಾಣದಂತೆ ಬಂಗಾರದ ಬಳೆಯನ್ನು ಕದ್ದಿದ್ದಾರೆ. ಬಳಿಕ ಯಾವುದು ಇಷ್ಟವಾಗಲಿಲ್ಲ ಎಂದು ಮಹಿಳೆಯರು ಹೊರಗೆ ಹೋಗಿದ್ದಾರೆ. ಮಹಿಳೆಯರ ಖತರ್ನಾಕ್ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಖದೀಮರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!