AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು

ನಿಮ್ಮ ಹಣವನ್ನು ದ್ವಿಗುಣ ಮಾಡುತ್ತೇವೆ ನಮ್ಮಲ್ಲಿ ಹೂಡಿಕೆ ಮಾಡಿ ಅಂತ ಯುವಕ, ಯುವತಿಯರನ್ನು ನಂಬಿಸಿ, ಅವರಿಂದ ಹಣ ಪಡೆದು ವಂಚಿಸಿರುವ ಕಲಬುರಗಿ ನಗರದ ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ಮಾಲಿಕರ ವಿರುದ್ಧ ದೂರು ದಾಖಲಾಗಿದೆ.

ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು
ರೋಜಾ ಪೊಲೀಸ್​ ಠಾಣೆ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: May 26, 2024 | 11:55 AM

Share

ಕಲಬುರಗಿ, ಮೇ 26: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತೆ ಅಂತ ಅಂತ ಯುವಕ, ಯುವತಿರಿಂದ ಹಣ ಪಡೆದು 30 ಕೋಟಿಗೂ ಅಧಿಕ ವಂಚನೆ ಮಾಡಿದ್ದ ದಂಪತಿ ವಿರುದ್ಧ ಕಲಬುರಗಿಯ (Kalaburagi) ರೋಜಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಉತ್ಕರ್ಷ ಹಾಗೂ ಸಾವಿತ್ರಿ ವಂಚಿಸಿದ ಆರೋಪಿಗಳು.

ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ದಂಪತಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ತೆರದಿದ್ದರು. ಇವರು “ನಿಮ್ಮ ಹಣ ದ್ವಿಗುಣ ಮಾಡಿ ಕೊಡುತ್ತೇವೆ” ಯುವಕ, ಯುವತಿಯರಿದ ಹಣ ಪಡೆದು ವಂಚಿಸುತ್ತಿದ್ದರು. ದಂಪತಿ ಬರೊಬ್ಬರಿ 500ಕ್ಕೂ ಅಧಿಕ ಜನರಿಗೆ ವಂಚಿಸಿದ್ದಾರೆ. ಇನ್ನು ಆರೋಪಿ ಉತ್ಕರ್ಷಗೆ ಸಹಾಯ ಮಾಡುತ್ತಿದ್ದ ವಿಜಯಸಿಂಗ್ ಹಜಾರೆ ಹಾಗೂ ಸುಧಾ ಎಂಬುವರ ವಿರುದ್ಧವೂ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದಂಪತಿ ಅಪಾರ್ಟ್​ಮೆಂಟ್​ನಿಂದ ಕಾಲ್ಕಿತ್ತಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ, ವಂಚನೆಗೆ ಒಳಗಾದವರು ಒಬ್ಬರಾಗಿ ಬಂದು ರೋಜಾ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಾರೆ.

ಇದನ್ನೂ ಓದಿ: ಕಾರು ಕಲಿಯಲು ಹೋಗಿ ಬಾಲಕಿ‌ ಮೇಲೆ‌ ಕಾರು ಹತ್ತಿಸಿದ ಮಹಿಳೆ; ಬಾಲಕಿ ಸ್ಥಳದಲ್ಲೇ ಸಾವು

ಸುಲಿಗೆಕೋರರ ಬಂಧನ

ಬೆಂಗಳೂರು: ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಸುಲಿಗೇಕೋರರನ್ನು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಜ್ ಬಂಧಿತ ಆರೋಪಿಗಳು. ಆರೋಪಿಗಳು ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಸ್ಕೂಟರ್​ನಲ್ಲಿ ಬಂದು ಸುಲಿಗೆ ಮಾಡುತ್ತಿದ್ದರು.

ಕೆಲ ದಿನಗಳ ಹಿಂದೆ ಆರೋಪಿಗಳು ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ