AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು

ನಿಮ್ಮ ಹಣವನ್ನು ದ್ವಿಗುಣ ಮಾಡುತ್ತೇವೆ ನಮ್ಮಲ್ಲಿ ಹೂಡಿಕೆ ಮಾಡಿ ಅಂತ ಯುವಕ, ಯುವತಿಯರನ್ನು ನಂಬಿಸಿ, ಅವರಿಂದ ಹಣ ಪಡೆದು ವಂಚಿಸಿರುವ ಕಲಬುರಗಿ ನಗರದ ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ಮಾಲಿಕರ ವಿರುದ್ಧ ದೂರು ದಾಖಲಾಗಿದೆ.

ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು
ರೋಜಾ ಪೊಲೀಸ್​ ಠಾಣೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: May 26, 2024 | 11:55 AM

Share

ಕಲಬುರಗಿ, ಮೇ 26: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತೆ ಅಂತ ಅಂತ ಯುವಕ, ಯುವತಿರಿಂದ ಹಣ ಪಡೆದು 30 ಕೋಟಿಗೂ ಅಧಿಕ ವಂಚನೆ ಮಾಡಿದ್ದ ದಂಪತಿ ವಿರುದ್ಧ ಕಲಬುರಗಿಯ (Kalaburagi) ರೋಜಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಉತ್ಕರ್ಷ ಹಾಗೂ ಸಾವಿತ್ರಿ ವಂಚಿಸಿದ ಆರೋಪಿಗಳು.

ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ದಂಪತಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ತೆರದಿದ್ದರು. ಇವರು “ನಿಮ್ಮ ಹಣ ದ್ವಿಗುಣ ಮಾಡಿ ಕೊಡುತ್ತೇವೆ” ಯುವಕ, ಯುವತಿಯರಿದ ಹಣ ಪಡೆದು ವಂಚಿಸುತ್ತಿದ್ದರು. ದಂಪತಿ ಬರೊಬ್ಬರಿ 500ಕ್ಕೂ ಅಧಿಕ ಜನರಿಗೆ ವಂಚಿಸಿದ್ದಾರೆ. ಇನ್ನು ಆರೋಪಿ ಉತ್ಕರ್ಷಗೆ ಸಹಾಯ ಮಾಡುತ್ತಿದ್ದ ವಿಜಯಸಿಂಗ್ ಹಜಾರೆ ಹಾಗೂ ಸುಧಾ ಎಂಬುವರ ವಿರುದ್ಧವೂ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದಂಪತಿ ಅಪಾರ್ಟ್​ಮೆಂಟ್​ನಿಂದ ಕಾಲ್ಕಿತ್ತಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ, ವಂಚನೆಗೆ ಒಳಗಾದವರು ಒಬ್ಬರಾಗಿ ಬಂದು ರೋಜಾ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಾರೆ.

ಇದನ್ನೂ ಓದಿ: ಕಾರು ಕಲಿಯಲು ಹೋಗಿ ಬಾಲಕಿ‌ ಮೇಲೆ‌ ಕಾರು ಹತ್ತಿಸಿದ ಮಹಿಳೆ; ಬಾಲಕಿ ಸ್ಥಳದಲ್ಲೇ ಸಾವು

ಸುಲಿಗೆಕೋರರ ಬಂಧನ

ಬೆಂಗಳೂರು: ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಸುಲಿಗೇಕೋರರನ್ನು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಜ್ ಬಂಧಿತ ಆರೋಪಿಗಳು. ಆರೋಪಿಗಳು ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಸ್ಕೂಟರ್​ನಲ್ಲಿ ಬಂದು ಸುಲಿಗೆ ಮಾಡುತ್ತಿದ್ದರು.

ಕೆಲ ದಿನಗಳ ಹಿಂದೆ ಆರೋಪಿಗಳು ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್