ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು

ನಿಮ್ಮ ಹಣವನ್ನು ದ್ವಿಗುಣ ಮಾಡುತ್ತೇವೆ ನಮ್ಮಲ್ಲಿ ಹೂಡಿಕೆ ಮಾಡಿ ಅಂತ ಯುವಕ, ಯುವತಿಯರನ್ನು ನಂಬಿಸಿ, ಅವರಿಂದ ಹಣ ಪಡೆದು ವಂಚಿಸಿರುವ ಕಲಬುರಗಿ ನಗರದ ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ಮಾಲಿಕರ ವಿರುದ್ಧ ದೂರು ದಾಖಲಾಗಿದೆ.

ಕಲಬುರಗಿ: ಯುವಕ, ಯುವತಿಯರಿಗೆ ಕೋಟಿ ಕೋಟಿ ವಂಚಿಸಿದ್ದ ದಂಪತಿ ವಿರುದ್ಧ ದೂರು
ರೋಜಾ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on: May 26, 2024 | 11:55 AM

ಕಲಬುರಗಿ, ಮೇ 26: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣವಾಗುತ್ತೆ ಅಂತ ಅಂತ ಯುವಕ, ಯುವತಿರಿಂದ ಹಣ ಪಡೆದು 30 ಕೋಟಿಗೂ ಅಧಿಕ ವಂಚನೆ ಮಾಡಿದ್ದ ದಂಪತಿ ವಿರುದ್ಧ ಕಲಬುರಗಿಯ (Kalaburagi) ರೋಜಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಪತಿ ಉತ್ಕರ್ಷ ಹಾಗೂ ಸಾವಿತ್ರಿ ವಂಚಿಸಿದ ಆರೋಪಿಗಳು.

ಗಾಂಧಿನಗರದಲ್ಲಿನ ಬಿ.ಎಲ್. ಕಾಂಪ್ಲ್ಯಾಕ್ಸ್​ನಲ್ಲಿ ದಂಪತಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಎಂಬ ಹೆಸರಿನ ಟ್ರೆಡಿಂಗ್ ಕಂಪನಿ ತೆರದಿದ್ದರು. ಇವರು “ನಿಮ್ಮ ಹಣ ದ್ವಿಗುಣ ಮಾಡಿ ಕೊಡುತ್ತೇವೆ” ಯುವಕ, ಯುವತಿಯರಿದ ಹಣ ಪಡೆದು ವಂಚಿಸುತ್ತಿದ್ದರು. ದಂಪತಿ ಬರೊಬ್ಬರಿ 500ಕ್ಕೂ ಅಧಿಕ ಜನರಿಗೆ ವಂಚಿಸಿದ್ದಾರೆ. ಇನ್ನು ಆರೋಪಿ ಉತ್ಕರ್ಷಗೆ ಸಹಾಯ ಮಾಡುತ್ತಿದ್ದ ವಿಜಯಸಿಂಗ್ ಹಜಾರೆ ಹಾಗೂ ಸುಧಾ ಎಂಬುವರ ವಿರುದ್ಧವೂ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ದಂಪತಿ ಅಪಾರ್ಟ್​ಮೆಂಟ್​ನಿಂದ ಕಾಲ್ಕಿತ್ತಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ, ವಂಚನೆಗೆ ಒಳಗಾದವರು ಒಬ್ಬರಾಗಿ ಬಂದು ರೋಜಾ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಿದ್ದಾರೆ.

ಇದನ್ನೂ ಓದಿ: ಕಾರು ಕಲಿಯಲು ಹೋಗಿ ಬಾಲಕಿ‌ ಮೇಲೆ‌ ಕಾರು ಹತ್ತಿಸಿದ ಮಹಿಳೆ; ಬಾಲಕಿ ಸ್ಥಳದಲ್ಲೇ ಸಾವು

ಸುಲಿಗೆಕೋರರ ಬಂಧನ

ಬೆಂಗಳೂರು: ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಸುಲಿಗೇಕೋರರನ್ನು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಜ್ ಬಂಧಿತ ಆರೋಪಿಗಳು. ಆರೋಪಿಗಳು ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಸ್ಕೂಟರ್​ನಲ್ಲಿ ಬಂದು ಸುಲಿಗೆ ಮಾಡುತ್ತಿದ್ದರು.

ಕೆಲ ದಿನಗಳ ಹಿಂದೆ ಆರೋಪಿಗಳು ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್