AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು

ಆತ ಎರಡನೇ ವರ್ಷದ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ. ಇದರ ಜೊತೆಗೆ ಪ್ರೀತಿ ಎಂಬ ಮಾಯಾಜಾಲಕ್ಕೆ ಸಿಲುಕಿ ಬಾರದ ಲೋಕಕ್ಕೆ ಹೋಗಿದ್ದಾನೆ. ಬರ್ತಡೇ ಪಾರ್ಟಿಗೆಂದು ಮನೆಗೆ ಕರೆಯಿಸಿಕೊಂಡು ಹತ್ಯೆ ಮಾಡಿರುವ ಆರೋಪ ಕಲಬುರಗಿ ನಗರದಲ್ಲಿ ಕೇಳಿಬಂದಿದ್ದು, ಇತ್ತ ಇರುವ ಒಬ್ಬ ಮಗನನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು
ಮುಗಿಲು ಮುಟ್ಟಿದ ಮೃತನ ಕುಟುಂಬಸ್ಥರ ಅಳಲು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 05, 2024 | 4:14 PM

Share

ಕಲಬುರಗಿ, ಮಾ.05: ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಅಭೀಷಕ್(18)ಇತ್ತೀಚಿಗಷ್ಟೇ ಪರೀಕ್ಷೆ ಕೂಡ ಬರೆದಿದ್ದನು. ಇದರ ಮಧ್ಯೆ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ(Love)ಯ ಬಲೆಯಲ್ಲಿ ಬಿದ್ದಿದ್ದ ಅಭಿಷೇಕ್, ಆಕೆಯೊಂದಿಗ ಪ್ರೀತಿ ಮಾಡುತ್ತಿದ್ದನಂತೆ. ಹೀಗಾಗೇ ಮೊನ್ನೆ ರಾತ್ರಿ ಆಕೆಯೇ ಪೋನ್ ಮಾಡಿ ಮನೆಗೆ ಕರೆಯಿಸಿಕೊಂಡಿದ್ದಳಂತೆ. ಹಾಗೇ ಹೋದ ಅಭಿಷೇಕ್, ಆಕೆಯ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಎಲ್ಲರೂ ಆತನನ್ನ ಮನಬಂದಂತೆ ಥಳಿಸಿದ್ದರು. ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಅಭೀಷಕ್​ನನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನು ಕೊಲೆಯಾದ ಅಭಿಷೇಕ್‌ ಮತ್ತು ಹುಡುಗಿಯ ಮಧ್ಯದ ಪ್ರೀತಿ ವಿಷಯ ಅದ್ಯಾವಾಗ ಆಕೆಯ ಕುಟುಂಬಸ್ಥರಿಗೆ ತಿಳಿಯಿತೋ ಅಂದಿನಿಂದ ಅಭಿಷೇಕ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದರು. ಇತ್ತ ಅಭಿಷೇಕ್ ಮತ್ತು ಅಪ್ರಾಪ್ತೆ, ಪ್ರೀತಿಯೆಂಬ ಮಾಯಾ ಜಾಲಕ್ಕೆ ಸಿಲುಕಿ ಕ್ಷಣಕ್ಷಣಕ್ಕೂ ವಾಟ್ಸಪ್‌ ಮೇಸೆಜ್ ಮಾಡುತ್ತಿದ್ದರು. ಅದರಂತೆ ಅಪ್ರಾಪ್ತೆ ಪೋಷಕರು ಆಕೆಯಿಂದಲೇ ಅಭಿಷೇಕನಿಗೆ ಕಾಲ್ ಮಾಡಿಸಿ ಮನೆಗೆ ಬರ್ತಡೇ ಪಾರ್ಟಿ ಇದೆ ಬಾ ಎಂದು ಕರೆಯಿಸಿಕೊಂಡಿದ್ದಾರೆ. ಈ ವೇಳೆ ಮನೆಯವರು ಅಭಿಷೇಕನಿಗೆ ಮನೆಯಲ್ಲಿ ಕೂಡಿಹಾಕಿ ರಾಡ್‌ನಿಂದ ಎರಡು ಗಂಟೆಗಳ ಕಾಲ ಥಳಿಸಿದ್ದಾರೆ. ಆಕೆ ಸಹ ಬಿಡಿಸಿಕೊಳ್ಳಲು ಬಂದಾಗ ಕೆರ್ ಮಾಡದೇ ಮನಬಂದಂತೆ ಹೊಡೆದಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕನನ್ನ ತಕ್ಷಣ ನಿರ್ಜನ ಪ್ರದೇಶದಲ್ಲಿ ಬಿಸಾಕಿ‌ ಕೈ ತೊಳೆದುಕೊಂಡಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ (ಪ್ರೇರಣಾ) ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನು ಕೊಲೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಭಿಷೇಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅದೆನೇ ಇರಲಿ ತಾನಾಯಿತು ತನ್ನ ಓದು ಆಯಿತು ಎಂದು ಸುಮ್ಮನೆ ಇರುತ್ತಿದ್ದರೇ, ಬಾಳಿ ಬದುಕಬೇಕಿದ್ದ ಯುವಕ ಅಭಿಷೇಕ್, ಇಂದು ಬೀದಿ ಹೆಣವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಪ್ರೀತಿ ವಿಚಾರಕ್ಕೋ ಅಥಾವ ಇನ್ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ತನಿಖೆ‌ ನಂತರವಷ್ಟೇ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 5 March 24

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ