AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು

ಆತ ಎರಡನೇ ವರ್ಷದ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ. ಇದರ ಜೊತೆಗೆ ಪ್ರೀತಿ ಎಂಬ ಮಾಯಾಜಾಲಕ್ಕೆ ಸಿಲುಕಿ ಬಾರದ ಲೋಕಕ್ಕೆ ಹೋಗಿದ್ದಾನೆ. ಬರ್ತಡೇ ಪಾರ್ಟಿಗೆಂದು ಮನೆಗೆ ಕರೆಯಿಸಿಕೊಂಡು ಹತ್ಯೆ ಮಾಡಿರುವ ಆರೋಪ ಕಲಬುರಗಿ ನಗರದಲ್ಲಿ ಕೇಳಿಬಂದಿದ್ದು, ಇತ್ತ ಇರುವ ಒಬ್ಬ ಮಗನನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು
ಮುಗಿಲು ಮುಟ್ಟಿದ ಮೃತನ ಕುಟುಂಬಸ್ಥರ ಅಳಲು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 05, 2024 | 4:14 PM

Share

ಕಲಬುರಗಿ, ಮಾ.05: ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಅಭೀಷಕ್(18)ಇತ್ತೀಚಿಗಷ್ಟೇ ಪರೀಕ್ಷೆ ಕೂಡ ಬರೆದಿದ್ದನು. ಇದರ ಮಧ್ಯೆ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ(Love)ಯ ಬಲೆಯಲ್ಲಿ ಬಿದ್ದಿದ್ದ ಅಭಿಷೇಕ್, ಆಕೆಯೊಂದಿಗ ಪ್ರೀತಿ ಮಾಡುತ್ತಿದ್ದನಂತೆ. ಹೀಗಾಗೇ ಮೊನ್ನೆ ರಾತ್ರಿ ಆಕೆಯೇ ಪೋನ್ ಮಾಡಿ ಮನೆಗೆ ಕರೆಯಿಸಿಕೊಂಡಿದ್ದಳಂತೆ. ಹಾಗೇ ಹೋದ ಅಭಿಷೇಕ್, ಆಕೆಯ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಎಲ್ಲರೂ ಆತನನ್ನ ಮನಬಂದಂತೆ ಥಳಿಸಿದ್ದರು. ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಅಭೀಷಕ್​ನನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನು ಕೊಲೆಯಾದ ಅಭಿಷೇಕ್‌ ಮತ್ತು ಹುಡುಗಿಯ ಮಧ್ಯದ ಪ್ರೀತಿ ವಿಷಯ ಅದ್ಯಾವಾಗ ಆಕೆಯ ಕುಟುಂಬಸ್ಥರಿಗೆ ತಿಳಿಯಿತೋ ಅಂದಿನಿಂದ ಅಭಿಷೇಕ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದರು. ಇತ್ತ ಅಭಿಷೇಕ್ ಮತ್ತು ಅಪ್ರಾಪ್ತೆ, ಪ್ರೀತಿಯೆಂಬ ಮಾಯಾ ಜಾಲಕ್ಕೆ ಸಿಲುಕಿ ಕ್ಷಣಕ್ಷಣಕ್ಕೂ ವಾಟ್ಸಪ್‌ ಮೇಸೆಜ್ ಮಾಡುತ್ತಿದ್ದರು. ಅದರಂತೆ ಅಪ್ರಾಪ್ತೆ ಪೋಷಕರು ಆಕೆಯಿಂದಲೇ ಅಭಿಷೇಕನಿಗೆ ಕಾಲ್ ಮಾಡಿಸಿ ಮನೆಗೆ ಬರ್ತಡೇ ಪಾರ್ಟಿ ಇದೆ ಬಾ ಎಂದು ಕರೆಯಿಸಿಕೊಂಡಿದ್ದಾರೆ. ಈ ವೇಳೆ ಮನೆಯವರು ಅಭಿಷೇಕನಿಗೆ ಮನೆಯಲ್ಲಿ ಕೂಡಿಹಾಕಿ ರಾಡ್‌ನಿಂದ ಎರಡು ಗಂಟೆಗಳ ಕಾಲ ಥಳಿಸಿದ್ದಾರೆ. ಆಕೆ ಸಹ ಬಿಡಿಸಿಕೊಳ್ಳಲು ಬಂದಾಗ ಕೆರ್ ಮಾಡದೇ ಮನಬಂದಂತೆ ಹೊಡೆದಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕನನ್ನ ತಕ್ಷಣ ನಿರ್ಜನ ಪ್ರದೇಶದಲ್ಲಿ ಬಿಸಾಕಿ‌ ಕೈ ತೊಳೆದುಕೊಂಡಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ (ಪ್ರೇರಣಾ) ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನು ಕೊಲೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಭಿಷೇಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅದೆನೇ ಇರಲಿ ತಾನಾಯಿತು ತನ್ನ ಓದು ಆಯಿತು ಎಂದು ಸುಮ್ಮನೆ ಇರುತ್ತಿದ್ದರೇ, ಬಾಳಿ ಬದುಕಬೇಕಿದ್ದ ಯುವಕ ಅಭಿಷೇಕ್, ಇಂದು ಬೀದಿ ಹೆಣವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಪ್ರೀತಿ ವಿಚಾರಕ್ಕೋ ಅಥಾವ ಇನ್ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ತನಿಖೆ‌ ನಂತರವಷ್ಟೇ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 5 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ