AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು

ಆತ ಎರಡನೇ ವರ್ಷದ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ. ಇದರ ಜೊತೆಗೆ ಪ್ರೀತಿ ಎಂಬ ಮಾಯಾಜಾಲಕ್ಕೆ ಸಿಲುಕಿ ಬಾರದ ಲೋಕಕ್ಕೆ ಹೋಗಿದ್ದಾನೆ. ಬರ್ತಡೇ ಪಾರ್ಟಿಗೆಂದು ಮನೆಗೆ ಕರೆಯಿಸಿಕೊಂಡು ಹತ್ಯೆ ಮಾಡಿರುವ ಆರೋಪ ಕಲಬುರಗಿ ನಗರದಲ್ಲಿ ಕೇಳಿಬಂದಿದ್ದು, ಇತ್ತ ಇರುವ ಒಬ್ಬ ಮಗನನ್ನ ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

ಕಲಬುರಗಿ: ಪ್ರೀತಿ ವಿಚಾರಕ್ಕೆ ಹುಡುಗಿ ಮನೆಯವರಿಂದ ಹಲ್ಲೆ; ಚಿಕಿತ್ಸೆ ಫಲಿಸಿದೇ ಯುವಕ ಸಾವು
ಮುಗಿಲು ಮುಟ್ಟಿದ ಮೃತನ ಕುಟುಂಬಸ್ಥರ ಅಳಲು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 05, 2024 | 4:14 PM

Share

ಕಲಬುರಗಿ, ಮಾ.05: ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ ವ್ಯಾಸಾಂಗ ಮಾಡುತ್ತಿದ್ದ ಅಭೀಷಕ್(18)ಇತ್ತೀಚಿಗಷ್ಟೇ ಪರೀಕ್ಷೆ ಕೂಡ ಬರೆದಿದ್ದನು. ಇದರ ಮಧ್ಯೆ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ(Love)ಯ ಬಲೆಯಲ್ಲಿ ಬಿದ್ದಿದ್ದ ಅಭಿಷೇಕ್, ಆಕೆಯೊಂದಿಗ ಪ್ರೀತಿ ಮಾಡುತ್ತಿದ್ದನಂತೆ. ಹೀಗಾಗೇ ಮೊನ್ನೆ ರಾತ್ರಿ ಆಕೆಯೇ ಪೋನ್ ಮಾಡಿ ಮನೆಗೆ ಕರೆಯಿಸಿಕೊಂಡಿದ್ದಳಂತೆ. ಹಾಗೇ ಹೋದ ಅಭಿಷೇಕ್, ಆಕೆಯ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಎಲ್ಲರೂ ಆತನನ್ನ ಮನಬಂದಂತೆ ಥಳಿಸಿದ್ದರು. ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಅಭೀಷಕ್​ನನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನು ಕೊಲೆಯಾದ ಅಭಿಷೇಕ್‌ ಮತ್ತು ಹುಡುಗಿಯ ಮಧ್ಯದ ಪ್ರೀತಿ ವಿಷಯ ಅದ್ಯಾವಾಗ ಆಕೆಯ ಕುಟುಂಬಸ್ಥರಿಗೆ ತಿಳಿಯಿತೋ ಅಂದಿನಿಂದ ಅಭಿಷೇಕ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದರು. ಇತ್ತ ಅಭಿಷೇಕ್ ಮತ್ತು ಅಪ್ರಾಪ್ತೆ, ಪ್ರೀತಿಯೆಂಬ ಮಾಯಾ ಜಾಲಕ್ಕೆ ಸಿಲುಕಿ ಕ್ಷಣಕ್ಷಣಕ್ಕೂ ವಾಟ್ಸಪ್‌ ಮೇಸೆಜ್ ಮಾಡುತ್ತಿದ್ದರು. ಅದರಂತೆ ಅಪ್ರಾಪ್ತೆ ಪೋಷಕರು ಆಕೆಯಿಂದಲೇ ಅಭಿಷೇಕನಿಗೆ ಕಾಲ್ ಮಾಡಿಸಿ ಮನೆಗೆ ಬರ್ತಡೇ ಪಾರ್ಟಿ ಇದೆ ಬಾ ಎಂದು ಕರೆಯಿಸಿಕೊಂಡಿದ್ದಾರೆ. ಈ ವೇಳೆ ಮನೆಯವರು ಅಭಿಷೇಕನಿಗೆ ಮನೆಯಲ್ಲಿ ಕೂಡಿಹಾಕಿ ರಾಡ್‌ನಿಂದ ಎರಡು ಗಂಟೆಗಳ ಕಾಲ ಥಳಿಸಿದ್ದಾರೆ. ಆಕೆ ಸಹ ಬಿಡಿಸಿಕೊಳ್ಳಲು ಬಂದಾಗ ಕೆರ್ ಮಾಡದೇ ಮನಬಂದಂತೆ ಹೊಡೆದಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕನನ್ನ ತಕ್ಷಣ ನಿರ್ಜನ ಪ್ರದೇಶದಲ್ಲಿ ಬಿಸಾಕಿ‌ ಕೈ ತೊಳೆದುಕೊಂಡಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ (ಪ್ರೇರಣಾ) ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನು ಕೊಲೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಭಿಷೇಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅದೆನೇ ಇರಲಿ ತಾನಾಯಿತು ತನ್ನ ಓದು ಆಯಿತು ಎಂದು ಸುಮ್ಮನೆ ಇರುತ್ತಿದ್ದರೇ, ಬಾಳಿ ಬದುಕಬೇಕಿದ್ದ ಯುವಕ ಅಭಿಷೇಕ್, ಇಂದು ಬೀದಿ ಹೆಣವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಪ್ರೀತಿ ವಿಚಾರಕ್ಕೋ ಅಥಾವ ಇನ್ಯಾವ ಕಾರಣಕ್ಕೆ ಕೊಲೆಯಾಗಿದೆ ಎನ್ನುವುದು ತನಿಖೆ‌ ನಂತರವಷ್ಟೇ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 5 March 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್