AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಜೊತೆ ರೇಷ್ಮೆ ಸೀರೆಗಳನ್ನು ಕದ್ದೊಯ್ದ ಕಳ್ಳರು

ಒಂದಡೆ ದುಷ್ಕರ್ಮಿಗಳ ಕಾಟ ಆದರೆ ಇನ್ನೊಂದೆಡೆ ಕಳ್ಳರ ಕಾಟ. ರಾತ್ರಿ ವೇಳೆ ಮನೆಗೆ ನುಗ್ಗವು ಈ ಕಳ್ಳರು ಬಂಗಾರದ ಜೊತೆಗೆ ರೇಷ್ಮೆ ಸೀರೆಗಳನ್ನು ಕೂಡ ಕದ್ದು ಪರಾರಿಯಾಗಿದ್ದಾರೆ.

ಬಂಗಾರದ ಜೊತೆ ರೇಷ್ಮೆ ಸೀರೆಗಳನ್ನು ಕದ್ದೊಯ್ದ ಕಳ್ಳರು
ಮನೆಗೆ ನುಗ್ಗುತ್ತಿರುವ ಕಳ್ಳರು
TV9 Web
| Edited By: |

Updated on:Oct 25, 2022 | 2:34 PM

Share

ಕಲಬುರಗಿ: ಬೀಗ ಹಾಕಿದ್ದ ಮನೆಗೆ ಯಾವುದೇ ಅಂಜಿಕೆ ಇಲ್ಲದೆ ನೇರವಾಗಿ ಗೇಟ್ ತೆರೆದು ಬಂದ ಕಳ್ಳರು, ರೋಡ್ ಗೋಲ್ಡ್ ಬಿಟ್ಟು ಅಸಲಿ ಚಿನ್ನಾಭರಣದ ಜೊತೆಗೆ ರೇಷ್ಮೆ ಸೀರೆಯನ್ನು ಕದ್ದು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಳೆದ ರಾತ್ರಿ ಎರಡು ಕಡೆ ಕಳ್ಳತನ ಪ್ರಕರಣಗಳು ನಡೆದಿವೆ. ಅದು ಕೂಡಾ ಪೊಲೀಸ್ ಇಲಾಖೆಯಲ್ಲಿ ಇದ್ದ ಇಬ್ಬರ ಮನೆಗಳಿಗೆ ಕಳೆದ ರಾತ್ರಿ ಕನ್ನ ಹಾಕಿರುವ ಕಳ್ಳರು, ಚಿನ್ನಾಭರಣ, ರೇಷ್ಮೆ ಸೀರೆ, ಹಣ ಕದ್ದುಕೊಂಡು ಪರಾರಿಯಾಗಿದ್ದಾರೆ. ನಿವೃತ್ತ ಕೆಎಸ್ಆರ್​ಪಿ ಪೇದೆ ಸಿದ್ದಲಿಂಗಯ್ಯ ಅವರ ಮನೆಯಿಂದ 10 ಗ್ರಾಂ ಚಿನ್ನಾಭರಣ, ಇಪ್ಪತ್ತು ಸಾವಿರ ನಗದು, 10 ರೇಷ್ಮೆ ಸೀರೆ ಕದ್ದೋಯ್ದಿದ್ದರೆ, ಮಹಾಂತೇಶ್ ಎಂಬವರ ಮನೆಯಿಂದ 50 ಗ್ರಾಂ ಚಿನ್ನಾಭರಣ, ಹತ್ತು ಸಾವಿರ ನಗದು ಸೇರಿದಂತೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಲ್ಲಿನ ಪೆಟ್ರೋಲ್ ಅನ್ನು ಕೂಡಾ ಕದ್ದುಕೊಂಡು ಹೋಗಿದ್ದಾರೆ.

ಈ ಇಬ್ಬರ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ್ದ ಕಳ್ಳರು, ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕೈಗೆ ಸಿಕ್ಕಿದ್ದನ್ನು ದೋಚಿಕೊಂಡು ಹೋಗಿದ್ದಾರೆ. ಇನ್ನು ನಿವೃತ್ತ ಕೆಎಸ್​ಆರ್​ಪಿ ಸಿದ್ದಲಿಂಗಯ್ಯ ಮನೆಯಲ್ಲಿ ನಕಲಿ ಬಳೆಗಳು ಇದ್ದರೂ ಕಳ್ಳರು ಅವುಗಳನ್ನು ನೋಡಿ ಅಲ್ಲಿಯೇ ಬಿಟ್ಟು ಹೋಗಿದ್ದಾರೆ.

ಕಳೆದ ವಾರವಷ್ಟೇ ಇದೇ ಬಡಾವಣೆಯಲ್ಲಿ ದುಷ್ಕರ್ಮಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಲ್ಲೆಸದು ಹೋಗಿದ್ದ. ಇದರಿಂದ ಬಡಾವಣೆಯ ಜನರು ಕಂಗಾಲಾಗಿದ್ದರು. ಆದರೆ ಈ ಬಾರಿ ಮನೆಗಳ್ಳತನ ಮಾಡಿಕೊಂಡು ಹೋಗಿದ್ದಾರೆ. ಕಲಬುರಗಿ ನಗರದಲ್ಲಿ ಒಂದಲ್ಲಾ ಒಂದು ಕಡೆ ಮನೆಗಳ್ಳತನ ಪ್ರಕರಣಗಳು ಪ್ರತಿನಿತ್ಯ ನಡೆಯುತ್ತಿವೆ. ಇದು ಜನರ ನಿದ್ದೆ ಕೆಡಿಸಿದೆ. ಪೊಲೀಸರು ಸರಿಯಾಗಿ ರಾತ್ರಿ ಗಸ್ತು ತಿರಗುತ್ತಿಲ್ಲಾ, ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿಲ್ಲ, ರಾತ್ರಿ ಸಾರ್ವಜನಿಕರು ಓಡಾಡಲು, ಮನೆಯಲ್ಲಿರಲು ಕೂಡಾ ಭಯ ಪಡುವಂತಾಗಿದೆ ಎಂದು ಸಾರ್ವಜನಿಕರು ಗೋಳಾಡುತ್ತಿದ್ದಾರೆ. ಸದ್ಯ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವರದಿ: ಸಂಜಯ್, ಟಿವಿ9 ಕಲಬುರಗಿ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Tue, 25 October 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು