ಕಲಬುರಗಿ: ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕತ್ತು ಕೊಯ್ದ ಯುವಕರು‌; ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೂ ಕೊಲೆಗಳು ನಡೆಯುತ್ತಿದೆ. ಇದೀಗ ಸಿನಿಮೀಯ ರೀತಿಯಲ್ಲಿ ಯುವಕರು‌ ಅಪ್ರಾಪ್ತೆಯ ಕತ್ತು ಕೊಯ್ದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಬಾಲಕಿ ಬಸ್​ನಲ್ಲಿ ತೆರಳುತ್ತಿದ್ದ ವೇಳೆ ಅಪ್ರಾಪ್ತ ಬಾಲಕರು ಬೈಕ್​ನಲ್ಲಿ ಬಂದು ಬಸ್​ ನಿಲ್ಲಿಸಿ ಬಾಲಕಿಗೆ ಚಾಕು ಇರಿದಿದ್ದಾರೆ.

ಕಲಬುರಗಿ: ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕತ್ತು ಕೊಯ್ದ ಯುವಕರು‌; ಆಸ್ಪತ್ರೆಗೆ ದಾಖಲು
ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಚಾಕು ಇರಿತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 22, 2024 | 5:56 PM

ಕಲಬುರಗಿ, ಫೆ.22: ಸಿನಿಮೀಯ ರೀತಿಯಲ್ಲಿ ಯುವಕರು‌ ಅಪ್ರಾಪ್ತೆಯ ಕತ್ತು ಕೊಯ್ದ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡ ಬಾಲಕಿ ಅಂಬಿಕಾ ಕಾರಬಾರಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಬಸ್​ನಲ್ಲಿ ಬಾಲಕಿ ತೆರಳುತ್ತಿದ್ದಳು. ಈ ವೇಳೆ ಅಪ್ರಾಪ್ತ ಬಾಲಕರಾದ ಚನ್ನವೀರ ಮತ್ತು ಆತನ ಇನ್ನೊಬ್ಬ ಸ್ನೇಹಿತ ಸೇರಿಕೊಂಡು ಬೈಕ್​ನಲ್ಲಿ ಬಂದು ಬಸ್​ ನಿಲ್ಲಿಸಿ ಬಾಲಕಿಗೆ  ಚಾಕು ಇರಿದಿದ್ದಾರೆ. ಈ ಕುರಿತು ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕವಾಗಿ ಕಲ್ಲು ಗಣಿಗಾರಿಕೆ ಹೊಂಡಕ್ಕೆ ಬಿದ್ದು ಬಾಲಕ ಸಾವು

ಕಲಬುರಗಿ: ಕಲ್ಲು ಗಣಿಗಾರಿಕೆ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಕಲಬುರಗಿ ತಾಲ್ಲೂಕಿನ ಬೇಲೂರ್( ಜೆ) ತಾಂಡಾ ಹೊರವಲಯದಲ್ಲಿ ನಡೆದಿದೆ. ನಿತೀನ್ ತಂದೆ ನಾರಾಯಣ್ ರಾಠೋಡ್ (6) ಮೃತ ಬಾಲಕ. ಕಲ್ಲು ಗಣಿಗಾರಿಕೆ ಮಾಡಿ ಹಾಗೆ ಬಿಟ್ಟಿದ್ದ ನೀರಿನ ಹೊಂಡದಲ್ಲಿ ಆಟವಾಡುತ್ತಾ ಹೋಗಿ ಬಿದ್ದು ಮೃತನಾಗಿದ್ದಾನೆ. ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಲಬುರಗಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿ ಕೃಷ್ಣ ನಾಯ್ಡು(84) ಹಾಗೂ ಪತ್ನಿ ಸರೋಜಮ್ಮ(74) ಮೃತ ರ್ದುದೈವಿಗಳು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮೃತ ವೃದ್ಧ ದಂಪತಿ, ಕೆಲ ತಿಂಗಳಿಂದ ಟೆರೇಸ್​ನಲ್ಲಿರುವ​ ಕೋಣೆಯಲ್ಲಿ ವಾಸವಾಗಿದ್ದರು. ಪುತ್ರ ಅಶೋಕ್ ಮನೆಯಲ್ಲಿ ಪ್ರತ್ಯೇಕ ರೂಮ್​ನಲ್ಲಿ ವಾಸವಿದ್ದರು. ಬೆಳಗ್ಗೆ ನೀರು ಹಿಡಿದುಕೊಳ್ಳಲು ಸೊಸೆ ಟೆರೇಸ್​ ಮೇಲೆ ಹೋಗಿದ್ದು, ಈ ವೇಳೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಮಲ್ಲವ್ವ ನಿಮ್ಮವ್ವ ಎಲ್ಲವ್ವ ಎಂದು ರೇಗಿಸಿದ್ದ ಯುವಕನಿಗೆ ಚಾಕು ಇರಿತ: ಮದ್ವೆ ಗಂಡು ಅರೆಸ್ಟ್​

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಆನೇಕಲ್ ತಾಲೂಕಿನ ನಾರಾಯಣಪುರ ಬಳಿ ನಡೆದಿದೆ. ಮುರುಗೇಶ್(42)ಗೆ ಗಾಯವಾಗಿದ್ದು, ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸತೀಶ್, ನವೀನ್ ಎಂಬುವವರು ಕೃತ್ಯವೆಸಗಿದ್ದಾರೆ. ಈ ಇಬ್ಬರು ಆರೋಪಿಗಳು ಗುಲ್ಲಣ್ಣ ಲೇಔಟ್​​​​ ಬಡಾವಣೆಯೊಂದರಲ್ಲಿ ರಾತ್ರಿ ಎಣ್ಣೆ ಪಾರ್ಟಿಮಾಡಿದ್ದು, ರಾತ್ರಿ 12.30ರ ಸುಮಾರಿಗೆ ಮುರುಗೇಶ್ ಮನೆ ಬಳಿ ಬಂದಿದ್ದರು. ಬಾಗಿಲು ಬಡಿದು ನೀರು ಕೊಡುವಂತೆ ಕೇಳಿದ್ದಾರೆ. ನೀರು ಕೊಡುವುದು ವಿಳಂಬವಾಗಿದ್ದಕ್ಕೆ ಮುರುಗೇಶ್ ಮೇಲೆ ಹಲ್ಲೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Thu, 22 February 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ