AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬೆಂಗಳೂರಿಗೆ ಗನ್​​ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್​

ಕಳೆದ ಶುಕ್ರವಾರ (ಸೆ.13) ರಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕಲಬುರಗಿ: ಬೆಂಗಳೂರಿಗೆ ಗನ್​​ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್​
ಆರೋಪಿ ಲಕ್ಷ್ಮಣ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Sep 22, 2024 | 9:59 AM

Share

ಕಲಬುರಗಿ, ಸೆಪ್ಟೆಂಬರ್​ 21: ಕಳೆದ ಶುಕ್ರವಾರ ಆಳಂದ (Alanda) ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯಿತು ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಲಕ್ಷ್ಮಣ ಗುಂಡೇಟು ತಿಂದ ಆರೋಪಿ.  ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿದ್ದ ಆರೋಪಿ ಲಕ್ಷ್ಮಣನನ್ನು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಲಕ್ಷ್ಮಣ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದನು. ಆತ್ಮರಕ್ಷಣೆಗಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಆರೋಪಿ ಲಕ್ಷ್ಮಣ ಬಲಗಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯ ವಿವಿಧಡೆ ಬಂದೂಕು ಸರಬರಾಜು ಮಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ. ವಿಶ್ವನಾಥ್​ ಜಮಾದಾರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಗ್ರಾ.ಪಂ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆ

ವಿಶ್ವನಾಥ್​​​ ಜಮಾದಾರ್ ಕಳೆದ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತೇನೆ ಅಂತ ಬೈಕ್ ಮೇಲೆ ಹೋಗಿದ್ದರು. ಮಗನನ್ನು ಶಾಲೆಗೆ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್​ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದರು.

ವಿಶ್ವನಾಥ್​ ಅವರ ತೆಲೆಗೆ ಮೂರು ಗುಂಡು ಹೊಡೆದಿದ್ದರು. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದರು. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ವಿಶ್ವಾನಥ್​ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದರು. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದು, ಮಾಹಿತಿ ಕಲೆ ಹಾಕಿದರು.

ಆಳಂದ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 am, Sat, 21 September 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು