AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

ಕಾಮಾಕ್ಷಿಪಾಳ್ಯ ಮಹಿಳೆ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗೋವಾದಲ್ಲಿ ಆರೋಪಿ ಪ್ರವೀಣ್(23) ವಶಕ್ಕೆ ಪಡೆಯಲಾಗಿದೆ.

ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್
ಆರೋಪಿ ಪ್ರವೀಣ್ (ಕುಳಿತಿರುವ ವ್ಯಕ್ತಿ)
ಆಯೇಷಾ ಬಾನು
| Edited By: |

Updated on:Jan 06, 2021 | 9:55 AM

Share

ಬೆಂಗಳೂರು: ಕಾಮಾಕ್ಷಿಪಾಳ್ಯದ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗೋವಾದಲ್ಲಿ ಆರೋಪಿ ಪ್ರವೀಣ್(23) ವಶಕ್ಕೆ ಪಡೆಯಲಾಗಿದೆ. ನಗರದ ಕಾಮಾಕ್ಷಿಪಾಳ್ಯದ ಬಳಿಯ ರಂಗನಾಥಪುರದಲ್ಲಿ ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಕೇಸ್ ಬೆನ್ನತ್ತಿದ ಗೋವಾ, ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಪ್ರವೀಣ್ ಮಹಿಳೆ ಹತ್ಯೆ ಬಳಿಕ ಗೋವಾಕ್ಕೆ ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಗೋವಾಕ್ಕೆ ತೆರಳಿದ್ದ ಪೊಲೀಸರು ಅಲ್ಲಿಯ ಪೊಲೀಸರ ಸಹಾಯದಿಂದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಆತನನ್ನು ಬೆಂಗಳೂರಿಗೆ ಕರೆತರಲಾಗುತ್ತೆ. ಬಳಿಕ ಈ ಕೇಸ್​ನ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತೆ.

ಘಟನೆ ಹಿನ್ನೆಲೆ: ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಅರುಣಾಕುಮಾರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಅರುಣಾಕುಮಾರಿ ತಮ್ಮ ದಾಸರಹಳ್ಳಿಯ ನಿವಾಸದಿಂದ ಕೆಲಸಕ್ಕೆಂದು ಪ್ರಿಂಟಿಂಗ್ ಪ್ರೆಸ್​ಗೆ ತೆರಳಿದ್ದರು. ಆದರೆ ಆಕೆ, ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಅರುಣಾಕುಮಾರಿ ಕುಟುಂಬಸ್ಥರು ಮಾಗಡಿ ರಸ್ತೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಬಳಿಕ ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಮಹಿಳೆ ಮೃತದೇಹವನ್ನು ಪತ್ತೆಹಚ್ಚಿದ್ದರು. ಈ ಪ್ರಕರಣ ಸಂಬಂಧ ಆರೋಪಿ ಪ್ರವೀಣ್​ನನ್ನು ಬಂಧಿಸಲಾಗಿದೆ.

ಕಾಮಾಕ್ಷಿಪಾಳ್ಯ: ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

Published On - 9:34 am, Wed, 6 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?