AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

Kumar Hegde Rape Case: ಅನೇಕ ವಿಚಾರಗಳ ಬಗ್ಗೆ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಮೇಲೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ
ಕಂಗನಾ ರಣಾವತ್​
ಮದನ್​ ಕುಮಾರ್​
| Edited By: |

Updated on:May 22, 2021 | 11:49 AM

Share

ಕಂಗನಾ ರಣಾವತ್​ ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ ಎಂಬಷ್ಟರಮಟ್ಟಿಗೆ ಅವರು ಈಗಾಗಲೇ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ರೇಪ್​ ಪ್ರಕರಣವೊಂದರ ಕಾರಣಕ್ಕಾಗಿ ಕಂಗನಾ ರಣಾವತ್​ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿ ಸುದ್ದಿಯಾಗುತ್ತಿದ್ದಾನೆ. ಆತ ಕಂಗನಾಗೆ ಬಾಡಿ ಗಾರ್ಡ್​ ಆಗಿದ್ದ ಎಂಬ ಕಾರಣಕ್ಕೆ ಈ ಪ್ರಕರಣ ಹೆಚ್ಚು ಹೈಲೈಟ್​ ಆಗುತ್ತಿದೆ. ಮುಂಬೈನ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ಕುಮಾರ್​ ಹೆಗಡೆ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್​ 376 ಮತ್ತು 377ರ ಅಡಿಯಲ್ಲಿ ಕುಮಾರ್​ ಹೆಗಡೆ ವಿರುದ್ಧ ದೂರು ದಾಖಲಾಗಿದೆ. ಯುವತಿಯೊಬ್ಬಳ ಜೊತೆ ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿ ಇದ್ದ ಆತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಎಂಬ ಆರೋಪ ಕೂಡ ಕೇಳಿಬಂದಿದೆ. ಇತ್ತೀಚೆಗೆ ಇಬ್ಬರ ನಡುವೆ ಬ್ರೇಕಪ್​ ಆಗಿತ್ತು ಎಂಬ ಮಾಹಿತಿ ಇದೆ.

ಇಂಥ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಕುಮಾರ್​ ಹೆಗಡೆ ಎಂಬಾತನು ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಪರ್ಸನಲ್​ ಬಾಡಿಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದ ಎಂಬ ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಕುಮಾರ್​ ಹೆಗಡೆ ಹಿನ್ನೆಲೆ ಬಗ್ಗೆ ಇನ್ನಷ್ಟೇ ತನಿಖೆ ನಡೆಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ಯುವತಿ ಹೇಳಿಕೆ ನೀಡಿದ್ದಾಳೆಂದು ಹಲವೆಡೆ ವರದಿ ಆಗಿದೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ:

ಕೊರೊನಾ ವಿಚಾರದಲ್ಲಿ ಯು-ಟರ್ನ್​ ತೆಗೆದುಕೊಂಡ ಕಂಗನಾ

Kangana Ranaut: ಟ್ವಿಟರ್​ನಿಂದ ಹೊರದಬ್ಬಿಸಿಕೊಂಡ ಕಂಗನಾ ಇನ್​ಸ್ಟಾಗ್ರಾಮ್​ನಲ್ಲಿ ಒಂದು ವಾರ ಉಳಿಯೋದು ಕೂಡ ಅನುಮಾನ

Published On - 11:43 am, Sat, 22 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ