AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಿಮ್ಮ ಮಗಳ ಕಥೆ ಮುಗಿಸಿದ್ದೇನೆ, ಬಂದು ಎತ್ಕೊಂಡು ಹೋಗಿ: ಕತ್ತು ಸೀಳಿ ಹೆಂಡತಿಯ ಕೊಂದ ಪಾಪಿ

Kannada Criime News: ಅಂಕಿತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಆತನೊಬ್ಬನೇ ಈ ಕೊಲೆ ಮಾಡಲು ಸಾಧ್ಯವಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Crime News: ನಿಮ್ಮ ಮಗಳ ಕಥೆ ಮುಗಿಸಿದ್ದೇನೆ, ಬಂದು ಎತ್ಕೊಂಡು ಹೋಗಿ: ಕತ್ತು ಸೀಳಿ ಹೆಂಡತಿಯ ಕೊಂದ ಪಾಪಿ
ಅಂಕಿತ್-ತನು
TV9 Web
| Edited By: |

Updated on: Aug 17, 2022 | 6:32 PM

Share

Crime News In Kannada: ಫೋನ್ ಕರೆಯೊಂದನ್ನು ರಿಸೀವ್ ಮಾಡಿದಾಗ, ನಿಮ್ಮ ಮಗಳ ಕಥೆ ಮುಗಿಸಿದ್ದೇನೆ…ಬಂದು ಎತ್ಕೊಂಡು ಹೋಗಿ ಎಂದರೆ ಯಾವ ಹೆತ್ತ ಕರುಳು ಸಹಿಸಿಯಾಳು…ತೀರಾ ವಿಚಿತ್ರ ಎನಿಸುವ ಇಂತಹ ಭೀಕರ ಕೊಲೆ ನಡೆದಿರುವುದು ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ. ಗಂಡನೇ ತನ್ನ ಹೆಂಡತಿಯನ್ನು ಕೊಂದು ತವರಿಗೆ ಕರೆ ಮಾಡಿ ತಿಳಿಸಿದ್ದ. ಈ ಸುದ್ದಿ ಕೇಳಿ ಹೆತ್ತಮ್ಮನ ಆಕ್ರಂದನ ಮುಗಿಲುಮುಟ್ಟಿತು. ಗಾಜಿಯಾಬಾದ್​ನ ನಂದಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಅಂಕಿತ್ ಗರಿಮಾ ಗಾರ್ಡನ್‌ನಲ್ಲಿ ವಾಸಿಸುವ ರಮೇಶ್ ಪಾಲ್ ಅವರ ಪುತ್ರಿ ತನು ಅವರನ್ನು ಜುಲೈ 10, 2016 ರಂದು ವಿವಾಹವಾಗಿದ್ದ. ಇದಾದ ಬಳಿಕ ಈ ಜೋಡಿ ಅದೇ ಗ್ರಾಮದಲ್ಲೇ ವಾಸವಾಗಿದ್ದರು. ಅಲ್ಲದೆ ಅಂಕಿತ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಹೀಗೆ ಕಳೆದ ನಾಲ್ಕೈದು ವರ್ಷಗಳ ಕಾಲ ಇಬ್ಬರೂ ಜೊತೆಯಾಗಿ ಸಂಸಾರದ ಬಂಡಿ ಸಾಗಿಸಿದ್ದಾರೆ. ಆದರೆ ಇತ್ತೀಚೆಗೆ ಅಂಕಿತ್ ಹಾಗೂ  ಕುಟುಂಬಸ್ಥರು ತನುಗೆ ವರದಕ್ಷಿಣೆ ಕಿರುಕುಳ ನೀಡಲಾರಂಭಿಸಿದ್ದಾರೆ. ಇದಾಗ್ಯೂ ಆಕೆ ಎಲ್ಲಾ ದೌರ್ಜನ್ಯಗಳನ್ನು ಸಹಿಸಿ ಪತಿಯ ಜೊತೆಯಲ್ಲೇ ಇದ್ದಳು. ಆದರೆ ದಿನ ಕಳೆದಂತೆ ಅಂಕಿತ್ ಉಪಟಳ ಹೆಚ್ಚಾಗಿದೆ. ಹೀಗಾಗಿ ಈ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾಳೆ.

ಆದರೆ ಅದಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ತನು ಕುಟುಂಬ ಮತ್ತೊಮ್ಮೆ ವರದಕ್ಷಿಣೆ ನೀಡುವ ಸ್ಥಿತಿಯಲ್ಲಿರಲಿಲ್ಲ. ಇದರಿಂದ ಅಂಕಿತ್ ಮತ್ತಷ್ಟು ಕುಪಿತಗೊಂಡಿದ್ದ. ಹೀಗಾಗಿ ಹೆಂಡತಿಯ ಮೇಲೆ ದೌರ್ಜನ್ಯವನ್ನು ಮುಂದುವರೆಸಿದ್ದ. ಅದರಂತೆ ಆಗಸ್ಟ್ 15 ರಂದು ಹೆಂಡತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಅದಾಗಲೇ 8 ತಿಂಗಳ ತುಂಬು ಗರ್ಭಿಣಿಯಾಗಿದ್ದ ತನು ಗಂಡನ ಏಟಿಗೆ ಅರೆ ಪ್ರಜ್ಞಾವಸ್ಥೆಗೆ ಜಾರಿದ್ದಳು.

ಇದನ್ನೂ ಓದಿ
Image
Crime News: ಮುದುಕರಿಗೆ ಬೆತ್ತಲೆ ವಿಡಿಯೋ ಕರೆ ಮಾಡಿ 3 ಲಕ್ಷ ರೂ. ಪೀಕಿದ ಖತರ್ನಾಕ್ ಲೇಡಿ..!
Image
Crime News: ಡ್ರಗ್ಸ್​ನೊಂದಿಗೆ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ನಾಲ್ವರ ಬಂಧನ..!
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಈ ಸಂದರ್ಭವನ್ನು ಬಳಸಿಕೊಂಡ ಪಾಪಿ ಪತಿ ಆಕೆಯ ಕುತ್ತಿಗೆಯನ್ನು ಕುಯ್ದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಅಚ್ಚರಿ ಎಂದರೆ ಇಂತಹದೊಂದು ದುಷ್ಕೃತ್ಯ ಎಸೆಗಿದ ಬಳಿಕ ಆತ ಅತ್ತೆಗೆ ಕರೆ ಮಾಡಿ ನಿಮ್ಮ ಮಗಳ ಕಥೆ ಮುಗಿಸಿದ್ದೇನೆ, ಬಂದು ಎತ್ಕೊಂಡು ಹೋಗಿ ಎಂದು ತಿಳಿಸಿದ್ದ. ಗಾಬರಿಗೊಂಡ ಮನೆಯವರು ತಕ್ಷಣವೇ ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ತರಾತುರಿಯಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮನೆಗೆ ಬಂದು ನೋಡುತ್ತಿದ್ದಂತೆ ಮಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಇದೀಗ ಅಂಕಿತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಆತನೊಬ್ಬನೇ ಈ ಕೊಲೆ ಮಾಡಲು ಸಾಧ್ಯವಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಹತ್ಯೆಯಲ್ಲಿ ಅವರ ಕುಟುಂಬ ಸದಸ್ಯರು ಕೂಡ ಕೈ ಜೋಡಿಸಿದ್ದಾರೆ. ವರದಕ್ಷಿಣೆ ನೀಡದ ಕಾರಣ ಗಂಡನ ಮನೆಯವರೆಲ್ಲಾ ಸೇರಿ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಮೃತ ತನು ಕುಟುಂಬಸ್ಥರು ಆರೋಪಿಸಿದ್ದಾರೆ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ