AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಎಸಿಪಿ ಪ್ರಭುಶಂಕರ್​ಗೆ ನಾನೇ 62 ಲಕ್ಷ ಹಣ ನೀಡಿದ್ದೇನೆ -ACB ಮುಂದೆ ಸಾಕ್ಷ್ಯ ದಾಖಲು!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಸಿಗರೇಟ್ ಡೀಲರ್​ಗಳಿಂದ ಸಿಸಿಬಿ ಪೊಲೀಸರು ಲಂಚ ಪಡೆದ ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಎಸಿಬಿ ದಾಖಲಿಸಿಕೊಂಡಿದೆ. ಎರಡು ದಿನಗಳ ಕಾಲ 8 ಜನ ಸಿಗರೇಟ್ ವಿತರಕರು ಸೇರಿ 10 ಜನರ ವಿಚಾರಣೆಯನ್ನು ಎಸಿಬಿ ಪೊಲೀಸರು ನಡೆಸಿದ್ದಾರೆ. ಪ್ರಮುಖ ಸಾಕ್ಷಿ ಆದಿಲ್ ಅಜೀಜ್​ ಹೇಳಿಕೆಯನ್ನು ಎಸಿಬಿ ದಾಖಲಿಸಿದೆ. ಅಮಾನತಾದ ಸಿಸಿಬಿ ಎಸಿಪಿ ಪ್ರಭುಶಂಕರ್​ ಅವರಿಗೆ ನನ್ನ ಕೈಯಿಂದಲೇ 62.5 ಲಕ್ಷ ಹಣವನ್ನು ನೀಡಿದ್ದೇನೆ. ಏಪ್ರಿಲ್ 30 ರಂದು 32.5 ಲಕ್ಷ, […]

CCB ಎಸಿಪಿ ಪ್ರಭುಶಂಕರ್​ಗೆ ನಾನೇ 62 ಲಕ್ಷ ಹಣ ನೀಡಿದ್ದೇನೆ -ACB ಮುಂದೆ ಸಾಕ್ಷ್ಯ ದಾಖಲು!
CCB ಕಚೇರಿ
ಸಾಧು ಶ್ರೀನಾಥ್​
|

Updated on: May 29, 2020 | 3:16 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಸಿಗರೇಟ್ ಡೀಲರ್​ಗಳಿಂದ ಸಿಸಿಬಿ ಪೊಲೀಸರು ಲಂಚ ಪಡೆದ ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಎಸಿಬಿ ದಾಖಲಿಸಿಕೊಂಡಿದೆ. ಎರಡು ದಿನಗಳ ಕಾಲ 8 ಜನ ಸಿಗರೇಟ್ ವಿತರಕರು ಸೇರಿ 10 ಜನರ ವಿಚಾರಣೆಯನ್ನು ಎಸಿಬಿ ಪೊಲೀಸರು ನಡೆಸಿದ್ದಾರೆ. ಪ್ರಮುಖ ಸಾಕ್ಷಿ ಆದಿಲ್ ಅಜೀಜ್​ ಹೇಳಿಕೆಯನ್ನು ಎಸಿಬಿ ದಾಖಲಿಸಿದೆ.

ಅಮಾನತಾದ ಸಿಸಿಬಿ ಎಸಿಪಿ ಪ್ರಭುಶಂಕರ್​ ಅವರಿಗೆ ನನ್ನ ಕೈಯಿಂದಲೇ 62.5 ಲಕ್ಷ ಹಣವನ್ನು ನೀಡಿದ್ದೇನೆ. ಏಪ್ರಿಲ್ 30 ರಂದು 32.5 ಲಕ್ಷ, ಮೇ ಮೊದಲ ವಾರದಲ್ಲಿ 30 ಲಕ್ಷ ರೂ. ಕೊಟ್ಟಿದ್ದೇನೆ. ಒಟ್ಟಾರೆಯಾಗಿ 62.5 ಲಕ್ಷ ರೂಪಾಯಿ ನೀಡಿದ್ದೇನೆ. ಸಿಸಿಬಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಹಣ ನೀಡಿರುವುದಾಗಿ ಆದಿಲ್ ಅಜೀಜ್ ಹೇಳಿಕೆ ಕೊಟ್ಟಿದ್ದಾನೆ.

ಯಲಹಂಕ ನಿವಾಸಿ ಬಾಬು ರಾಜೇಂದ್ರ ಪ್ರಸಾದ್ ಮತ್ತು ಭೂಷಣ್ ಮೂಲಕ ಮೂವರು ಸಿಸಿಬಿ ಅಧಿಕಾರಿಗಳ ಸಂಪರ್ಕ ಮಾಡಿದ್ದರು. ಪ್ರತಿಯೊಬ್ಬ ಸಿಗರೇಟ್ ವಿತರಕರಿಂದ 14 ಲಕ್ಷಕ್ಕೆ ಸಿಸಿಬಿ ಅಧಿಕಾರಿಗಳು ಬೇಡಿಕೆಯಿಟ್ಟಿದ್ದರು ಎಂದು ಬಾಯ್ಬಿಟ್ಟಿದ್ದಾನೆ ಎಂದು ಎಸಿಬಿ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್