AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು ಮನೆಯಲ್ಲಿ ಕಳವು ಪ್ರಕರಣ: ಮನೆಗೆಲಸದವ ಒಡಿಶಾದಲ್ಲಿ ಅರೆಸ್ಟ್

ಮಾಜಿ ಗೃಹಸಚಿವ ಎಂ.ಬಿ.ಪಾಟೀಲ್ ನಿವಾಸದಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಒಡಿಶಾದಲ್ಲಿ ಪೊಲೀಸರು ಬಂಧಿಸಿದ್ದಾರೆ

ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು ಮನೆಯಲ್ಲಿ ಕಳವು ಪ್ರಕರಣ: ಮನೆಗೆಲಸದವ ಒಡಿಶಾದಲ್ಲಿ ಅರೆಸ್ಟ್
ಎಂ.ಬಿ.ಪಾಟೀಲ್
Follow us
TV9 Web
| Updated By: Rakesh Nayak Manchi

Updated on:Aug 01, 2022 | 5:48 PM

ಬೆಂಗಳೂರು: ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರ​ ನಿವಾಸದಲ್ಲಿ ನಡೆದ 1 ಲಕ್ಷ 20 ಸಾವಿರ ರೂಪಾಯಿ ವಸ್ತುಗಳ ಕಳ್ಳತನ ಪ್ರಕರಣ ಸಂಬಂಧ ಮನೆಯ ಕೆಲಸಗಾರನನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಎಂ.ಬಿ. ಪಾಟೀಲ್ ಅವರ​ ನಿವಾಸದಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯನ್ನು ಕೈಗೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಎಂ.ಬಿ.ಪಾಟೀಲ್ ಅವರ ಮನೆಯಲ್ಲಿ ಜಯಂತ್ ದಾಸ್ ಲಾಂಡ್ರಿ ಕೆಲಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಕರೆನ್ಸಿ, ಬ್ರಾಂಡೆಡ್ ವಾಚ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಜಯಂತ್ ದಾಸ್ ಕಳವು ಮಾಡಿ ಪರಾರಿಯಾಗಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ ಎಂ.ಬಿ.ಪಾಟೀಲ್ ಅವರು ಅಡುಗೆ ಕೆಲಸಕ್ಕೆ ಇದ್ದ ವ್ಯಕ್ತಿ ಮೂಲಕ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ಆರಂಭಿಸಿದ ಪೊಲೀಸರು, ಜಯಂತ್​ನನ್ನು ಒಡಿಶಾದಲ್ಲಿ ಬಂಧಿಸಿದ್ದಾರೆ.

ಆತ್ಮಹತ್ಯೆಯಲ್ಲಿ ಅಂತ್ಯವಾದ ಕಬಾಬ್ ಜಗಳ

ಬೆಂಗಳೂರು: ಕಬಾಬ್​ ವಿಚಾರಕ್ಕೆ ಆರಂಭವಾದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಗರದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಲಸಂದ್ರ ದಿನ್ನೆ ನಿವಾಸಿ ಎಂ.ಸುರೇಶ್ (48) ಎಂಬವರ ಪತ್ನಿ ಶಾಲಿನಿ (42) ಚಿಕನ್ ಕಬಾಬ್ ಮಾಡಿದ್ದರು. ಆದರೆ ಮಾಡಿದ ಕಬಾಬ್​ ರುಚಿ ಚೆನ್ನಾಗಿಲ್ಲ ಎಂದು ಉಗುಳಿದ್ದಾನೆ. ಇಲ್ಲಿಂದ ಆರಂಭವಾದ ಜಗಳ ಸುರೇಶ್​ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಅಂತ್ಯಗೊಂಡಿದೆ.

ಶಾಲಿನಿ ತನ್ನ ಪತಿಗಾಗಿ ಚಿಕನ್ ಕಬಾಬ್ ಮಾಡಿದ್ದರು. ಆದರೆ ಪತಿ ಸುರೇಶ್ ಇದು ಚೆನ್ನಾಗಿಲ್ಲ ಎಂದು ಉಗುಳಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ಆರಂಭಗೊಂಡಿದ್ದು, ಕೋಪದಿಂದ ಸುರೇಶ್ ಶಾಲಿನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹೊಡೆತ ತಿಂದು ಅಸ್ವಸ್ಥರಾದ ಶಾಲಿನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಕೊಂಚ ಚೇತರಿಸಿಕೊಂಡ ನಂತರ ಶಾಲಿನಿ ಗಂಡನ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಶಾಲಿನಿ ನೀಡಿದ ದೂರಿನಂತೆ ಪೊಲೀಸರು ಸುರೇಶ್ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ಈ ನಡುವೆ ಸುರೇಶ್ ದಾರಿ ಬದಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು

ಮೈಸೂರು: ಈಜಲು ತೆರಳಿದ್ದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಚಿಕ್ಕೆರೆಯೂರು ಬಳಿ ನಡೆದಿದೆ. ಹರೀಶ್(27) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕ. ಚಿಕ್ಕೆರೆಯೂರು ಗ್ರಾಮದ ಹೊರವಲಯದಲ್ಲಿ ಇರುವ ಕೆರೆಗೆ ಈಜಲೆಂದು ಹರೀಶ ತೆರಳಿದ್ದಾನೆ. ಹೀಗೆ ಹೋಗಿದ್ದ ಹರೀಶ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಈಜುಗಾರರ ಸಹಾಯದಿಂದ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದೆ.

Published On - 12:02 pm, Mon, 1 August 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ