AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯ ಬರ್ಬರ ಹತ್ಯೆ!

ಚಾಕುವಿನಿಂದ ಇರಿದು ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಪುಲಿಕೇಶಿನಗರದ ಎಂಎಂ ರಸ್ತೆಯಲ್ಲಿ ನಡೆದಿದೆ.

Crime News: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯ ಬರ್ಬರ ಹತ್ಯೆ!
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jun 14, 2022 | 4:03 PM

Share

ಬೆಂಗಳೂರು: ಚಾಕುವಿನಿಂದ ಇರಿದು ಹೊರರಾಜ್ಯದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಪುಲಿಕೇಶಿನಗರದ ಎಂಎಂ ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬಿಕಾಸ್ ಮೂಡಿ(37) ಕೊಲೆಯಾದ ವ್ಯಕ್ತಿ. ಮೂಲತಃ ಪಶ್ಚಿಮ ಬಂಗಾಳದವನಾದ ಬಿಕಾಸ್ ಮೆಟ್ರೋ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದನು. ಆದರೆ ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಬಿಕಾಸ್ ಬರ್ಬರವಾಗಿ ಹತ್ಯೆಯಾಗಿದ್ದು, ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದೆ.

ಇದನ್ನೂ ಓದಿ: Crime News: ಪ್ರತಿಷ್ಠಿತ ಕಾಲೇಜಿಗೆ ಮೋಸ, ದಾನಿಗಳಿಂದ ಬಂದ ಹಣವನ್ನು ನುಂಗಿ ನೀರು ಕುಡಿದು ಪರಾರಿಯಾದ ಕಾರ್ಯದರ್ಶಿ

ಹೆಚ್ಚಾದ ಪಂಪ್ ಸೆಟ್ ಕಳ್ಳರ ಹಾವಳಿ

ಬೀದರ್: ಜಿಲ್ಲೆಯಲ್ಲಿ ಪಂಪ್ ಸೆಟ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಇದೀಗ ಮತ್ತೊಂದು ಕಳ್ಳತನ ಪ್ರಕರಣ ನಡೆದಿದೆ. ಔರಾದ್ ತಾಲೂಕಿನ ಕೌಠಾ ಗ್ರಾಮದಲ್ಲಿ ಪಂಪ್​ಸೆಟ್ ಅನ್ನು ಖದೀಮರು ಕಳವು ಮಾಡಿದ್ದಾರೆ. ಆ ಮೂಲಕ ಕೇವಲ ಎರಡು ವಾರಗಳಲ್ಲಿ ಒಟ್ಟು 18 ಪಂಪ್ ಸೆಟ್​ಗಳು ಕಳ್ಳತನವಾಗಿವೆ. ಕಳ್ಳರ ಹಾವಳಿಯಿಂದಾಗಿ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಒಂದು ನೀರು ಎತ್ತುವ ಪಂಪ್ ಸೇಟ್ ಬೆಲೆ 30 ರಿಂದ 40 ಸಾವಿರ ರೂಪಾಯಿ ಇದೆ. ಇಷ್ಟೊಂದು ಬೆಳೆಬಾಲುವ ಪಂಪ್​ ಅನ್ನು ಸಾಲ ಮಾಡಿ ಖರೀದಿಸಿ ಕಳವಾದರೆ ಹೇಗೆ? ಹೊಸ ಪಂಪ್ ಸೆಟ್ ಖರೀದಿಸಲು ಅನ್ನದಾತರು ಪರದಾಡುವಂತಾಗಿದ್ದು, ಕಳ್ಳರ ಬಂಧನಕ್ಕೆ ರೈತರು ಒತ್ತಾಯಿಸುತ್ತಿದ್ದಾರೆ.

ವಿದ್ಯಾರ್ಥಿಗಳ ಎದುರೇ ಎಣ್ಣೆ ಹಾಕಿ ದರ್ಬಾರ್

ಕೋಲಾರ: ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳ ಎದುರೇ ಎಣ್ಣೆ ಹಾಕಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಬಾಣಸಿಗನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗಾಜಲದಿನ್ನೆಯಲ್ಲಿರುವ ಅಂಬೇಡ್ಕರ್ ಹಾಸ್ಟೆಲ್​ನಲ್ಲಿ ವಾರ್ಡನ್ ಹರೀಶ್ ಇಲ್ಲದಿದ್ದ ಸಂದರ್ಭದಲ್ಲಿ ಬಾಣಸಿಗ ಮಂಜುನಾಥ್, ವಿದ್ಯಾರ್ಥಿಗಳ ಎದುರೇ ಮದ್ಯ ಸೇವನೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಮಂಜುನಾಥ್ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ. ಅಡುಗೆ ಮಾಡುವವನ ದರ್ಪ ಹಾಗೂ ದೌರ್ಜನ್ಯದ ವಿಡಿಯೋ ಮಾಡಿದ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಹಾಸ್ಟೆಲ್​ನ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ 250ರಿಂದ 100ಕ್ಕೆ ಇಳಿದೆ.

ಇದನ್ನೂ ಓದಿ: Crime News: ಲಾಡ್ಜ್​ನಲ್ಲಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಬಂಧನ, ನಸುಕಿನಲ್ಲಿ ಠಾಣೆಗೆ ಯುವತಿ ಕರೆತಂದ ಪೊಲೀಸರಿಗೆ ವಕೀಲ ಛೀಮಾರಿ

ಕಲ್ಲು, ಬಡಿಗೆಯಿಂದ ಪರಸ್ಪರ ಹೊಡೆದಾಡಿಕೊಂಡ ಕುಟುಂಬಗಳು

ಯಾದಗಿರಿ: ನಿರ್ಮಾಣ ಹಂತದ ಮನೆಯ ಬಾಗಿಲು ಕಳ್ಳತವಾಗಿದ್ದಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದ ಘಟನೆ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದಿದೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಗಯ್ಯ ಸ್ವಾಮಿ ಎಂಬವರು ಮನೆಯೊಂದನ್ನು ಕಟ್ಟಿಸುತ್ತಿದ್ದಾರೆ. ಈ ಮನೆಯ ಮೇಲೆ ಖದೀಮರ ಕಣ್ಣು ಬಿದ್ದು ಬಾಗಿಲು ಕಳ್ಳತನವಾಗಿದೆ. ಬಾಗಿಲು ಕಳ್ಳತನವಾದ ಬಗ್ಗೆ ನಾಗಯ್ಯ ಸ್ವಾಮಿ ಕುಟುಂಬಸ್ಥರು ಬೇರೆಯವರ ಮೇಲೆ‌ ಸಂಶಯ ವ್ಯಕ್ತಪಡಿಸಿ ಬೈದಿದ್ದಾರೆ. ಇದೇ ಕಾರಣಕ್ಕೆ ಪಕ್ಕದ ಮನೆಯ ಕಂಠೇಪ್ಪ ಹಾಗೂ ಸಂಬಂಧಿಕರು ”ಬಾಗಿಲು ಕಳ್ಳತನ ಆಗಿದ್ದಕ್ಕೆ ನಮ್ಮ ಮೇಲೆ ಸಂಶಯ ವ್ಯಕ್ತಪಡಿಸುತ್ತಿರಾ” ಎಂದು ಹಲ್ಲೆ ನಡೆಸಿದ್ದಾರೆ. ಈ ವೇಳೆ  ನಾಗಯ್ಯ ಸ್ವಾಮಿ ಕುಟುಂಬಸ್ಥರಿಂದಲೂ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿ ನಿಂತು ಕಲ್ಲು, ಬಡಿಗೆಗಳನ್ನು ಹಿಡಿದುಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Tue, 14 June 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?