AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ

ಕೋಮು ಸೌಹಾರ್ದ ಕದಡಲು ಪರಸ್ಪರ ಹಲ್ಲೆ ನಡೆಸಿ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ
ಕೋಮು ಸಂಘರ್ಷಕ್ಕೆ ಯತ್ನಿಸಿದ ಆರೋಪಿಗಳು ಅರೆಸ್ಟ್
TV9 Web
| Edited By: |

Updated on:Oct 15, 2022 | 8:46 AM

Share

ಕಾರವಾರ: ಭಟ್ಕಳದಲ್ಲಿ ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತ ಹಿಂದೂ ಕಾರ್ಯಕರ್ತರಾಗಿದ್ದಾರೆ. ಇಬ್ಬರೂ ವಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸಿ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿರುವುದು ತಿಳಿದುಬಂದ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಸೋಮಯ್ಯ ಮತ್ತು ವೆಂಕಟೇಶ ಎಂಬವರು ಭಟಟ್ಕಳದಲ್ಲಿ ಕೋಮು ಸೌಹಾರ್ದತೆ ಕದಡಲು ಮತ್ತು ಶಾಂತಿ ಭಂಗ ಮಾಡಲು ಇಬ್ಬರೂ ವಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸುತ್ತಾನೆ. ಬಳಿಕ ಹಲ್ಲೆಯನ್ನು ಅನ್ಯ ಕೋಮಿನವರು ಮಾಡಿದ್ದಾರೆ ಎಂದು ಆರೋಪಿಸಿ ನವೀನ್ ಸೋಮಯ್ಯ ಮುರುಡೇಶ್ವರ ಠಾಣೆಗೆ ಸುಳ್ಳು ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ. ಭಟ್ಕಳ ಠಾಣೆಯ ಸಿಪಿಐ ಮಹಾಬಲೇಶ್ವರ ನಾಯಕ ತಂಡವು ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ಭಟ್ಕಳದಲ್ಲಿ ಕೋಮು ಸಂಘರ್ಷ ಮೂಡಿಸಿ ಶಾಂತಿ ಕದಡಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.

ಕಾರುಗಳನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರೇ ಎಚ್ಚರ

ಬೆಂಗಳೂರು: ಹೈ ಎಂಡ್ ಕಾರುಗಳನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರು ಎಚ್ಚರವಾಗಿರಿ. ಏಕೆಂದರೆ ಕಾರನ್ನು ಅಡಮಾನ ಇಟ್ಟರೆ ನಿಮ್ಮ ಕಾರು ಯಾರಿಗೂ ಮಾರಾಟವಾಗಬಹುದು. ಹೀಗಾಗಿ ತುರ್ತಾಗಿ ಹಣದ ಅವಶ್ಯಕತೆ ಬಿದ್ದಾಗ ಕಾರು ಅಡವಿಟ್ಟು ಹಣ ಪಡೆಯುವ ಮುನ್ನ ನೂರಾರು ಬಾರಿ ಯೋಚಿಸಿ. ಕಾರು ಮಾಲೀಕರಿಗೆ ಗೊತ್ತಿಲ್ಲದಂತೆ ಅಡವಿಟ್ಟ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳನ್ನು ಪುಲಕೇಶಿ ನಗರ ಪೊಲೀಸರು  ಬಂಧಿಸಿದ್ದಾರೆ. ನದೀಮ್, ಉಮರ್ ಫಾರುಕ್ ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಆದಿ ಕೇಶವಲು ಮೊಮ್ಮಗ ಗೀತಾವುಷ್ಣು ಕಾರನ್ನ ಕೂಡ ಬೇರೆಯವರಿಗೆ ಮಾರಾಟ ಮಾಡಿದ್ದರು. ಕಾರನ್ನ ಮಾರಾಟ ಮಾಡುವಾಗ ನಂಬರ್ ಫ್ಲೇಟ್ ಹಾಗೂ ಡಾಕ್ಯುಮೆಂಟ್ಸ್ ಚೇಂಜ್ ಮಾಡಿ ಮಾರಾಟ ಮಾಡುತ್ತಿದ್ದರು. ಸದ್ಯ ಬಂಧಿತರಿಂದ ಒಟ್ಟು 14 ಹೈ ಎಂಡ್ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಯಾ ಬಣವೆಗೆ ಕಿಡಿಗೇಡಿಗಳಿಂದ ಬೆಂಕಿ

ಬೀದರ್: ರಾಶಿ ಮಾಡಲು ಹಾಕಿದ್ದ ಸೋಯಾ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶಗೊಳಿಸಿದ ಘಟನೆ ಬಸವಕಲ್ಯಾಣ ತಾಲೂಕಿನ ಘಾಟಹಿಪ್ಪರ್ಗಾ ಗ್ರಾಮದಲ್ಲಿ ನಡೆದಿದೆ. ಸಂಜು ಕುಮಾರ್ ಎಂಬ ರೈತ ತನ್ನ 12 ಎಕರೆ ಜಮೀನಿನಲ್ಲಿ 5 ‌ಲಕ್ಷ ರೂಪಾಯಿ ಮೌಲ್ಯದ ಸೋಯಾ ಬೆಳೆದಿದ್ದರು. ಕಿಡಿಗೇಡಿಗಳ ಕಣ್ಣು ಇದರ ಮೇಲೆ ವಕ್ರದೃಷ್ಟಿ ಬಿದ್ದು ರಾಶಿ ಮಾಡಲು ಕೂಡಿ ಹಾಕಿದ್ದ ಬಣವೆಗೆ ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ. ನೊಂದ ರೈತ ಸಂಜು ಆರೋಪಿಗಳನ್ನು ಬಂಧಿಸುವಂತೆ ಮೂಡಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನೀರಿನ ಟ್ಯಾಂಕರ್ ಲಾರಿ ಪಲ್ಟಿ

ಬೆಂಗಳೂರು: ನಗರದ ಡೈರಿ ಸರ್ಕಲ್ ಮೇಲ್ಸೇತುವೆ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದು ಬಿಎಂಆರ್​ಸಿಎಲ್ ಕಾಮಗಾರಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಶುಕ್ರವಾರ ರಾತ್ರಿ ಅತಿವೇಗದಿಂದ ಲಾರಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ವಾಹನಗಳ ಸಂಚಾರವಿರಲಿಲ್ಲ‌‌‌. ರಸ್ತೆಗೆ ಅಡ್ಡಲಾಗಿ ಬಿದ್ದ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಜಯನಗರ ಸಂಚಾರಿ ಪೊಲೀಸರು ಲಾರಿ ತೆರವು ಕಾರ್ಯ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Sat, 15 October 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​