ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ ಕರ್ನಾಟಕದ ಕೋಲಾರ ಹಾಗೂ ಮಂಡ್ಯದಲ್ಲಿ ನಡೆದಿವೆ.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು
ಪ್ರತ್ಯೇಕ ಘಟನೆಗಳಲ್ಲಿ ಹತ್ಯೆಯಾದ ಮಕ್ಕಳು
Follow us
|

Updated on: Jun 22, 2023 | 2:56 PM

ಬೆಂಗಳೂರು: ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ (Crime News) ಕರ್ನಾಟಕದ ಕೋಲಾರ (Kolar) ಹಾಗೂ ಮಂಡ್ಯದಲ್ಲಿ (Mandya) ನಡೆದಿವೆ. ಮಹಿಳೆಯೊಬ್ಬರು ತನ್ನಿಬ್ಬರೂ ಮಕ್ಕಳನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಎರಡು ದಿನ ಹಿಂದೆ ಕೋಲಾರದಲ್ಲಿ ನಡೆದಿದ್ದು ಮತ್ತೊಂದೆಡೆ, ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಉಪ್ಪಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸುಗುಣಾ (35) ಎಂಬಾಕೆ ತನ್ನ ಪತಿ ಮುರಳಿಯೊಂದಿಗೆ ಜಗಳವಾಡಿದ ನಂತರ ಮಕ್ಕಳಾದ ಪ್ರೀತಂ ಗೌಡ (12) ಮತ್ತು ನಿಶಿತಾ (5) ಅವರನ್ನು ಕೊಲೆ ಮಾಡಿದ್ದಾರೆ. ನಂತರ ಡೆತ್​​ನೋಟು ಬರೆದು ಸಹೋದರನಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಗುಣ ಅವರ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಆಕೆಯ ಪತಿ ಮುರಳಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಗುಣ ಮತ್ತು ಮುರಳಿ 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರೂ ಸಾರಿಗೆ ಸಂಸ್ಥೆ ನೌಕರರು.

ಮತ್ತೊಂದೆಡೆ, ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಲ್ಲದೆ, 3 ವರ್ಷದ ಆದಿತ್ಯ ಹಾಗೂ 4 ವರ್ಷದ ಅಮೂಲ್ಯ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಗುರುವಾರ ಮುಂಜಾನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Kolar Crime: ಸರ್ಕಾರಿ ಕೆಲಸದಲ್ಲಿದ್ದ ಅನ್ಯೋನ್ಯ ದಂಪತಿ, ಇಬ್ಬರು ಮಕ್ಕಳು, ಆದರೆ ತಾಯಿಯ ಮುಂಗೋಪಕ್ಕೆ ಕುಟುಂಬವೇ ಬಲಿ

ಈ ಕುಟುಂಬ ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಆಲೆಮನೆಯಲ್ಲಿ ಕೆಲಸ ಮಾಡುತ್ತಿತ್ತು. ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ