AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ ಕರ್ನಾಟಕದ ಕೋಲಾರ ಹಾಗೂ ಮಂಡ್ಯದಲ್ಲಿ ನಡೆದಿವೆ.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು
ಪ್ರತ್ಯೇಕ ಘಟನೆಗಳಲ್ಲಿ ಹತ್ಯೆಯಾದ ಮಕ್ಕಳು
Follow us
Ganapathi Sharma
|

Updated on: Jun 22, 2023 | 2:56 PM

ಬೆಂಗಳೂರು: ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ (Crime News) ಕರ್ನಾಟಕದ ಕೋಲಾರ (Kolar) ಹಾಗೂ ಮಂಡ್ಯದಲ್ಲಿ (Mandya) ನಡೆದಿವೆ. ಮಹಿಳೆಯೊಬ್ಬರು ತನ್ನಿಬ್ಬರೂ ಮಕ್ಕಳನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಎರಡು ದಿನ ಹಿಂದೆ ಕೋಲಾರದಲ್ಲಿ ನಡೆದಿದ್ದು ಮತ್ತೊಂದೆಡೆ, ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಉಪ್ಪಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸುಗುಣಾ (35) ಎಂಬಾಕೆ ತನ್ನ ಪತಿ ಮುರಳಿಯೊಂದಿಗೆ ಜಗಳವಾಡಿದ ನಂತರ ಮಕ್ಕಳಾದ ಪ್ರೀತಂ ಗೌಡ (12) ಮತ್ತು ನಿಶಿತಾ (5) ಅವರನ್ನು ಕೊಲೆ ಮಾಡಿದ್ದಾರೆ. ನಂತರ ಡೆತ್​​ನೋಟು ಬರೆದು ಸಹೋದರನಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಗುಣ ಅವರ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಆಕೆಯ ಪತಿ ಮುರಳಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಗುಣ ಮತ್ತು ಮುರಳಿ 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರೂ ಸಾರಿಗೆ ಸಂಸ್ಥೆ ನೌಕರರು.

ಮತ್ತೊಂದೆಡೆ, ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಲ್ಲದೆ, 3 ವರ್ಷದ ಆದಿತ್ಯ ಹಾಗೂ 4 ವರ್ಷದ ಅಮೂಲ್ಯ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಗುರುವಾರ ಮುಂಜಾನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Kolar Crime: ಸರ್ಕಾರಿ ಕೆಲಸದಲ್ಲಿದ್ದ ಅನ್ಯೋನ್ಯ ದಂಪತಿ, ಇಬ್ಬರು ಮಕ್ಕಳು, ಆದರೆ ತಾಯಿಯ ಮುಂಗೋಪಕ್ಕೆ ಕುಟುಂಬವೇ ಬಲಿ

ಈ ಕುಟುಂಬ ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಆಲೆಮನೆಯಲ್ಲಿ ಕೆಲಸ ಮಾಡುತ್ತಿತ್ತು. ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು