AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ ಕರ್ನಾಟಕದ ಕೋಲಾರ ಹಾಗೂ ಮಂಡ್ಯದಲ್ಲಿ ನಡೆದಿವೆ.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು
ಪ್ರತ್ಯೇಕ ಘಟನೆಗಳಲ್ಲಿ ಹತ್ಯೆಯಾದ ಮಕ್ಕಳು
ಗಣಪತಿ ಶರ್ಮಾ
|

Updated on: Jun 22, 2023 | 2:56 PM

Share

ಬೆಂಗಳೂರು: ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ (Crime News) ಕರ್ನಾಟಕದ ಕೋಲಾರ (Kolar) ಹಾಗೂ ಮಂಡ್ಯದಲ್ಲಿ (Mandya) ನಡೆದಿವೆ. ಮಹಿಳೆಯೊಬ್ಬರು ತನ್ನಿಬ್ಬರೂ ಮಕ್ಕಳನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಎರಡು ದಿನ ಹಿಂದೆ ಕೋಲಾರದಲ್ಲಿ ನಡೆದಿದ್ದು ಮತ್ತೊಂದೆಡೆ, ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಉಪ್ಪಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸುಗುಣಾ (35) ಎಂಬಾಕೆ ತನ್ನ ಪತಿ ಮುರಳಿಯೊಂದಿಗೆ ಜಗಳವಾಡಿದ ನಂತರ ಮಕ್ಕಳಾದ ಪ್ರೀತಂ ಗೌಡ (12) ಮತ್ತು ನಿಶಿತಾ (5) ಅವರನ್ನು ಕೊಲೆ ಮಾಡಿದ್ದಾರೆ. ನಂತರ ಡೆತ್​​ನೋಟು ಬರೆದು ಸಹೋದರನಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಗುಣ ಅವರ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಆಕೆಯ ಪತಿ ಮುರಳಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಗುಣ ಮತ್ತು ಮುರಳಿ 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರೂ ಸಾರಿಗೆ ಸಂಸ್ಥೆ ನೌಕರರು.

ಮತ್ತೊಂದೆಡೆ, ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಲ್ಲದೆ, 3 ವರ್ಷದ ಆದಿತ್ಯ ಹಾಗೂ 4 ವರ್ಷದ ಅಮೂಲ್ಯ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಗುರುವಾರ ಮುಂಜಾನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Kolar Crime: ಸರ್ಕಾರಿ ಕೆಲಸದಲ್ಲಿದ್ದ ಅನ್ಯೋನ್ಯ ದಂಪತಿ, ಇಬ್ಬರು ಮಕ್ಕಳು, ಆದರೆ ತಾಯಿಯ ಮುಂಗೋಪಕ್ಕೆ ಕುಟುಂಬವೇ ಬಲಿ

ಈ ಕುಟುಂಬ ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಆಲೆಮನೆಯಲ್ಲಿ ಕೆಲಸ ಮಾಡುತ್ತಿತ್ತು. ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ