AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ; ನೌಕರನನ್ನು ತರಾಟೆಗೆ ತೆಗೆದುಕೊಂಡ ಜನ

ಬೇಲೂರಿನ ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿಮಾಡುತ್ತಿದ್ದ ನೌಕರನಿಗೆ ಸ್ಥಳಿಯರು ತರಾಟೆಗೆ ತೆಗದುಕೊಂಡಿದ್ದಾರೆ.

Crime News: ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ; ನೌಕರನನ್ನು ತರಾಟೆಗೆ ತೆಗೆದುಕೊಂಡ ಜನ
ಬೇಲೂರು ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ
TV9 Web
| Updated By: Rakesh Nayak Manchi|

Updated on:Oct 11, 2022 | 10:46 AM

Share

ಹಾಸನ: ಬೇಲೂರಿನ ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿಮಾಡುತ್ತಿದ್ದ ನೌಕರನಿಗೆ ಸ್ಥಳಿಯರು ತರಾಟೆಗೆ ತೆಗದುಕೊಂಡಿದ್ದಾರೆ. ಅಂಚೆ ಇಲಾಖೆಯ ಬೇಲೂರು ಶಾಖೆ ನೌಕರ ಮಿಥುನ್ ವಿರುದ್ದ ಅಕ್ರಮ ಹಣ ವಸೂಲಿ ಆರೋಪ ಮಾಡಲಾಗಿದ್ದು, ಇದನ್ನು ಪ್ರಶ್ನಿಸಿದಾಗ ಮಿಥುನ್ ತಪ್ಪೊಪ್ಪಿಗೆ ಕೇಳಿಕೊಂಡಿದ್ದಾನೆ. ಫೋನ್ ನಂಬರ್ ಅಪ್ಡೇಟ್ ಮಾಡಲು 50.ರೂ ಬದಲಾಗಿ 120 ರೂ. ವಸೂಲಿ ಮಾಡುತ್ತಿದ್ದು, ಉಚಿತ ಆದಾರ್ ಕಾರ್ಡ್ ಮಾಡಿಕೊಡಬೇಕಿದ್ದರು ಅದಕ್ಕೆ ಅನಧಿಕೃತವಾಗಿ 200 ರೂ. ವಸೂಲಿ ಮಾಡಿಕೊಳ್ಳುತ್ತಿದ್ದ. ಬಯೊಮೆಟ್ರಿಕ್ ಅಪ್ಡೇಟ್​ಗಾಗಿ 100 ಬದಲಾಗಿ 200 ರೂ. ವಸೂಲಿ ಮಾಡುತ್ತಿದ್ದ. ಆದರೆ ಇದಕ್ಕೆ ಯಾವುದಕ್ಕೂ ರಶೀದಿ ನೀಡದೆ ಜನರನ್ನು ವಂಚಿಸುತ್ತಿದ್ದನು. ಈ ಬಗ್ಗೆ ಅದಿಕಾರಿಗೆ ಮುತ್ತಿಗೆ ಹಾಕಿದ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಮಿಥುನ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ಹಲವು ತಿಂಗಳಿನಿಂದ ಇದೇ ರೀತಿ ಹಣ ವಸೂಲಿ ಆರೋಪ ಮಾಡುತ್ತಿರುವ ಆರೋಪ ಈತನ ಮೇಲಿದ್ದು, ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರು ಸಾವು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ತಾಲೂಕಿನ ಮರೆವಾಡ ಗ್ರಾಮದ ಬಳಿ ನಡೆದಿದೆ. ಮುನವಳ್ಳಿ ಗ್ರಾಮದ ಯಶವಂತ ಯಲಿಗಾರ (26) ಹಾಗೂ ಅಕ್ಷಯ ಕಡಕೋಳ (26) ಸಾವನ್ನಪ್ಪಿದವರು. ಸ್ಥಳಕ್ಕೆ ಆಗಮಿಸಿದ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಡರಾತ್ರಿ ಯಶವಂತ ಮತ್ತು ಅಕ್ಷಯ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ಮರೆವಾಡ ಗ್ರಾಮದ ಧಾರವಾಡ- ಸವದತ್ತಿ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.

ಸ್ನೇಹಿತರಿಗೆ ಮೆಸೇಜ್ ಮಾಡಿ ಆತ್ಮಹತ್ಯೆ

ಚಾಮರಾಜನಗರ: ಸ್ನೇಹಿತರಿಗೆ ಮೆಸೇಜ್ ಮಾಡಿದ ನಂತರ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಬಳಿಯ ಕಲ್ಲುಕಟ್ಟೆ ಡ್ಯಾಂನಲ್ಲಿ ನಡೆದಿದೆ. ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಕಲ್ಲಹಳ್ಳಿ ಗ್ರಾಮದ ಸಚಿನ್, ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಮೂವರು ಸ್ನೇಹಿತರಿಗೆ ಮೆಸೆಜ್ ಮಾಡಿದ್ದಾನೆ. ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Tue, 11 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ