AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 16, 2021 | 7:01 PM

Share

ಕೊಪ್ಪಳ: ಕೊಪ್ಪಳದ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ 52 ವರ್ಷದ ಶ್ರೀಧರ್ ಅಂಗಡಿ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಇವರು ಕೊಪ್ಪಳ ನಗರದ ಬಸವನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶ್ರೀಧರ್ ಅಂಗಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಆತ್ಮಹತ್ಯೆ ಕುರಿತು ಮಾತನಾಡಲು ಮನೆಯವರ ಹಿಂದೇಟು ಹಾಕಿದ್ದಾರೆ. ಆತ್ಮಹತ್ಯೆ ಕುರಿತು ಇನ್ನೂ ದೂರು ದಾಖಲಾಗಿಲ್ಲ.

ಚಿಕ್ಕಮಗಳೂರಿನಲ್ಲಿ ಅಪಘಾತ; ಬೈಕ್ ಸವಾರ ಸಾವು: ಚಿಕ್ಕಮಗಳೂರಿನಲ್ಲಿ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ NMC ಸರ್ಕಲ್ ಬಳಿ ದುರ್ಘಟನೆ ನಡೆದಿದೆ. ಬಿಜೆಪಿ ನಾಯಕ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಹಗಲು ಹೊತ್ತಿನಲ್ಲಿ ನಗರದೊಳಗೆ ಟಿಪ್ಪರ್ ಸಂಚಾರಕ್ಕೆ ಅವಕಾಶವಿಲ್ಲದಿದ್ದರೂ ಟಿಪ್ಪರ್ ಚಲಾಯಿಸಲಾಗುತ್ತಿತ್ತು. ಚಿಕ್ಕಮಗಳೂರು ನಗರದಲ್ಲಿ ರಾಕೆಟ್ ಸ್ಪೀಡಿನಲ್ಲಿ ಸಂಚರಿಸುವ ಟಿಪ್ಪರ್​ಗಳಿಂದ ಅನಾಹುತಗಳು ಸಂಭವಿಸುತ್ತಿರುವುದು ಇದೇ ಮೊದಲೇನಲ್ಲ. ಆದರೂ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರೆ.

ವಿಜಯಪುರದಲ್ಲಿ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ಕ್ಲೀನರ್​​ಗೆ ಗಾಯವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಅಹಮದಾಬಾದ್​ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ.

ಇದನ್ನೂ ಓದಿ: Crime News: ಹಸುಗೂಸಿನ ಮೈಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ಬಾಲಕಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

Crime News: ಆಲ್ಕೋಹಾಲ್ ತರಲಿಲ್ಲವೆಂದು ಹೊಡೆದ ಮಗನನ್ನೇ ಕೊಂದ ತಾಯಿ!

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ