AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಧರಂಸಿಂಗ್ ಸಂಬಂಧಿ ಕೊಲೆ ಕೇಸ್: ಮಲತಾಯಿಯ ಮಸಲತ್ತು? ಎ1 ಆರೋಪಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಾಜಿ ಸಿಎಂ ದಿವಂಗತ ಧರಂಸಿಂಗ್ ಸಂಬಂಧಿ ಸಿದ್ಧಾರ್ಥ್ ದೇವೇಂದ್ರ ಸಿಂಗ್ ಭೀಕರವಾಗಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ರಹಸ್ಯ ಬಯಲಾಗಿದೆ. Karnataka Former CM Dharam Singh relative murder case

ಮಾಜಿ ಸಿಎಂ ಧರಂಸಿಂಗ್ ಸಂಬಂಧಿ ಕೊಲೆ ಕೇಸ್: ಮಲತಾಯಿಯ ಮಸಲತ್ತು? ಎ1 ಆರೋಪಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸಿದ್ಧಾರ್ಥ್ ದೇವೇಂದ್ರ ಸಿಂಗ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 02, 2021 | 10:02 AM

Share

ಬೆಂಗಳೂರು: ಮಾಜಿ ಸಿಎಂ ದಿವಂಗತ ಧರಂಸಿಂಗ್ ಸಂಬಂಧಿ ಸಿದ್ಧಾರ್ಥ್ ದೇವೇಂದ್ರ ಸಿಂಗ್ ಭೀಕರವಾಗಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ರಹಸ್ಯ ಬಯಲಾಗಿದೆ. ಕಿಡ್ನ್ಯಾಪ್ & ಮರ್ಡರ್ ಸ್ಟೋರಿಯ ಇಂಚಿಂಚು ಮಾಹಿತಿ ಬಹಿರಂಗವಾಗಿದೆ. ಸಿದ್ಧಾರ್ಥ್​ನ ಹತ್ಯೆಗೈದ ಆರೋಪಿಗಳೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಪೈಕಿ ಪ್ರಕರಣದ ಎ-1 ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮತ್ತೋರ್ವ ಆರೋಪಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ. ಈ ಪ್ರಕರಣದ ಡಿಟೇಲ್ಸ್ ಇಲ್ಲಿದೆ:

ಒಬ್ಬ ಆರೋಪಿ ಬದುಕಿದ! ತಿರುಪತಿ ಮೂಲದ ಶ್ಯಾಮ್ ಮತ್ತು ವಿನೋದ್ ಕುಮಾರ್​ ಎಂಬ ಇಬ್ಬರು ಮಾಜಿ ಸಿಎಂ ದಿ. ಧರಂಸಿಂಗ್ ಸಂಬಂಧಿಯನ್ನ ಹತ್ಯೆಗೈದಿದ್ದರು. ಆದರೆ ಪೊಲೀಸರು ವಶಕ್ಕೆ ಪಡೆಯುವ ಮೊದಲೇ ಎ-1 ಆರೋಪಿ ಶ್ಯಾಮ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮತ್ತೋರ್ವ ಆರೋಪಿ ವಿನೋದ್ ರೈಲ್ವೆ ಹಳಿ ಮೇಲೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ ಆದರೆ ಅದೃಷ್ಟ ಕೈ ಹಿಡಿದ ಕಾರಣ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ವಿನೋದ್‌ ಕುಮಾರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಲತಾಯಿಯ ಮಸಲತ್ತು? ಮಲತಾಯಿ ಮಸಲತ್ತಿನಿಂದಲೇ ಸಿದ್ಧಾರ್ಥ್ ಹತ್ಯೆಯಾದ್ನಾ? ಎಂಬ ಅನುಮಾನವೊಂದು ಶುರುವಾಗಿದೆ. ಅಮೃತಹಳ್ಳಿ ಪೊಲೀಸರ ತನಿಖೆಯ ವೇಳೆ ಇಂತಹದೊಂದು ಮಹತ್ವದ ಮಾಹಿತಿ ಸಿಕ್ಕಿದ್ದು ಇದೇ ಮಾಹಿತಿ ಆಧರಿಸಿ ಖಾಕಿ ಪಡೆ ತನಿಖೆ ನಡೆಸುತ್ತಿದೆ.

ದೇವೇಂದ್ರ ಸಿಂಗ್ ಮೊದಲ ಪತ್ನಿಯ ಮಗನೇ ಈ ಸಿದ್ಧಾರ್ಥ್. ಈತ ಅಮೆರಿಕದಿಂದ ಬೆಂಗಳೂರಿಗೆ ಬಂದು ವಾಸವಾಗಿದ್ದ. ಆದರೆ ಆಸ್ತಿ ಆಸೆಗೆ ಸಿದ್ಧಾರ್ಥ್​ನ ಮಲತಾಯಿಯಿಂದ ಹತ್ಯೆ ಮಾಡಿಸಲಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದೆ. ಆರೋಪಿ ವಿನೋದ್ ಜೊತೆ ಸಿದ್ಧಾರ್ಥ್​ನ ಮಲತಾಯಿಗೆ ಲಿಂಕ್ ಇದೆ ಎಂದು ತಿಳಿದು ಬಂದಿದೆ. ಸದ್ಯ ಆಸ್ತಿ ಆಸೆಗಾಗಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

6 ದಿನಗಳ ಬಳಿಕ ಮಿಸ್ಸಿಂಗ್ ಕಂಪ್ಲೆಂಟ್ ಸಿದ್ಧಾರ್ಥ್ ನಾಪತ್ತೆಯಾಗಿ 6 ದಿನಗಳ ಬಳಿಕ ಮಿಸ್ಸಿಂಗ್ ಕಂಪ್ಲೆಂಟ್ ನೀಡಲಾಗಿತ್ತು. ಅಮೆರಿಕದ ಸ್ನೇಹಿತರ ಭೇಟಿಗಾಗಿ ತೆರಳುತ್ತಿರುವುದಾಗಿ ತಂದೆ ದೇವೇಂದ್ರ ಸಿಂಗ್​ಗೆ ಜನವರಿ 19ರಂದು ಮೃತ ಸಿದ್ದಾರ್ಥ ಮೆಸೇಜ್ ಮಾಡಿದ್ದ. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಸಿದ್ಧಾರ್ಥ್​ನ ತಾಯಿ ಪದೇ ಪದೆ ಸಿದ್ದಾರ್ಥನ ಮೊಬೈಲ್​ಗೆ ಕರೆ ಮಾಡಿದ್ರು ಮಗ ಫೋನ್ ತೆಗೆಯದ ಹಿನ್ನೆಲೆಯಲ್ಲಿ ಪತಿಗೆ ವಿಷಯ ತಿಳಿಸಿದ್ರು. ಇದಾದ ಬಳಿಕ ಆಸ್ತಿಗಾಗಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇದೇ ಅನುಮಾನದಿಂದ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ರು.

ತನಿಖೆಯಲ್ಲಿ ಸಿದ್ಧಾರ್ಥ್ ದೇವೇಂದ್ರ ಸಿಂಗ್ ಹತ್ಯೆಯಾಗಿದ್ದು ರಿವೀಲ್ ಆಗಿದೆ. ಇದೇ ಕಾರಣಕ್ಕೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ. ಮುಂದೆ ಈ ಪ್ರಕರಣ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್