AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್

ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಮದ್ವೆಯಾಗಿದ್ದಾನೆ. ಇದರಿಂದ ಕರ್ನಾಟಕ ಹೈಕೋರ್ಟ್ ಆರೋಪಿ ವಿರುದ್ಧದ ಅತ್ಯಾಚಾರದ ಕೇಸ್ ರದ್ದುಗೊಳಿಸಿದೆ.

ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jan 18, 2023 | 1:15 AM

Share

ಬೆಂಗಳೂರು: ಪ್ರೀತಿ, ಪ್ರೇಮ, ಪ್ರಣಯದ ನಡುವೆ ಉಂಟಾದ ಮದುವೆಯ ಬಗ್ಗೆ ಅದೊಂದು ಭಿನ್ನಾಭಿಪ್ರಾಯ ಪ್ರೇಯಸಿಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು. ಪ್ರೇಮಿಯ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದ ಪ್ರೇಯಸಿ ನಂತರ ದೂರು ಹಿಂಪಡೆಯಲು ಹೋದರೂ ಪ್ರಯೋಜನವಾಗಿರಲಿಲ್ಲ. ಪ್ರೇಮಿಯನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಇದೀಗ ಪ್ರೇಮಿ ಹಾಗೂ ಪ್ರೇಯಸಿ ಇಬ್ಬರೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ತಾವಿಬ್ಬರೂ ವಿವಾಹವಾಗಿರುವುದರಿಂದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಇಬ್ಬರ ಪ್ರಮಾಣಪತ್ರ ಪರಿಶೀಲಿಸಿದ ನ್ಯಾ. ಕೆ.ನಟರಾಜನ್ ರವರಿದ್ದ ಕರ್ನಾಟಕ ಹೈಕೋರ್ಟ್(Karnataka high court) ಪೀಠ ಪ್ರಕರಣ ರದ್ದುಪಡಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಈ ಮೂಲಕ  ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ವಿವಾಹವಾಗಿರುವುದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿ ಆದೇಶಿಸಿದೆ.

ಸಂತ್ರಸ್ತೆಯನ್ನು ವಿವಾಹವಾಗಿದ್ದು, ಜೀವನಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿ ಆರೋಪಿ ಪ್ರಮಾಣ ಪತ್ರ ಸಲ್ಲಿಸಿದ್ದ. ಅದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಅತ್ಯಾಚಾರ, ಹಣ ವಸೂಲಿ, ಜೀವ ಬೆದರಿಕೆ ಪ್ರಕರಣ ರದ್ದುಪಡಿಸಿತು. ಹಾಗೆಯೇ, ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾವುದೇ ರೀತಿ ತೊಂದರೆ ನೀಡಬಾರದು ಎಂದು ಆರೋಪಿಗೆ ಸೂಚಿಸಿದೆ.

ಪ್ರಕರಣ ಹಿನ್ನೆಲೆ

ಬೆಂಗಳೂರಿನ ಯುವತಿ 2022ರ ಅಕ್ಟೋಬರ್‌ನಲ್ಲಿ ಪೊಲೀಸರಿಗೆ ದೂರು ನೀಡಿ, ರವಿ ಎಂಬಾತ ತನ್ನ ಹುಟ್ಟುಹಬ್ಬದ ಆಚರಣೆ ನಿಮಿತ್ತ ಮನೆಗೆ ಆಹ್ವಾನಿಸಿದ್ದರು. ಅಂದು ಮದ್ಯ ಸೇವಿಸಿ ಬಂದಿದ್ದ ರವಿ, ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು. ಈ ವಿಷಯ ಬಹಿರಂಗಪಡಿಸಿದರೆ ಹತ್ಯೆ ಬೆದರಿಕೆ ಹಾಕಿದ್ದರು. ಜೊತೆಗೆ ಮದುವೆಯಾಗಬೇಕಿದ್ದರೆ ಹಣ ನೀಡುವಂತೆ ಒತ್ತಾಯಿಸಿದ್ದರು ಎಂದು ಯುವತಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಮತ್ತು ಹಣ ವಸೂಲಿ ಸೇರಿದಂತೆ ಇನ್ನಿತರ ಆರೋಪಗಳಡಿ ಎಫ್‌ಐಆರ್‌ ದಾಖಲಿಸಿದ್ದರು.

ಆ ಪ್ರಕರಣ ರದ್ದುಕೋರಿ ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರೇಮಿಸಿ ವಿವಾಹವಾಗುವ ವಿಷಯದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಕೇಸ್ ದಾಖಲಾಗಿತ್ತು. ಇದೀಗ ಇಬ್ಬರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಆರೋಪಿ ಪ್ರೇಮಿ ಕೋರ್ಟ್ ಗೆ ಮನವಿ ಮಾಡಿದ್ದ. ಇದಕ್ಕೆ ಪ್ರತಿವಾದಿಯಾಗಿದ್ದ ಯುವತಿಯೂ ಸಹಮತ ಸೂಚಿಸಿ ಪ್ರಕರಣ ರದ್ದು ಕೋರಿದ್ದರಿಂದ ಹೈಕೋರ್ಟ್ ಪ್ರಕರಣ ರದ್ದುಪಡಿಸಿ ಆದೇಶ ನೀಡಿದೆ.

Published On - 12:57 am, Wed, 18 January 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್