AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್

ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಮದ್ವೆಯಾಗಿದ್ದಾನೆ. ಇದರಿಂದ ಕರ್ನಾಟಕ ಹೈಕೋರ್ಟ್ ಆರೋಪಿ ವಿರುದ್ಧದ ಅತ್ಯಾಚಾರದ ಕೇಸ್ ರದ್ದುಗೊಳಿಸಿದೆ.

ಅತ್ಯಾಚಾರ ಸಂತ್ರಸ್ತೆಯನ್ನೇ ಮದ್ವೆಯಾದ ಆರೋಪಿ, ಕೇಸ್ ರದ್ದುಗೊಳಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jan 18, 2023 | 1:15 AM

Share

ಬೆಂಗಳೂರು: ಪ್ರೀತಿ, ಪ್ರೇಮ, ಪ್ರಣಯದ ನಡುವೆ ಉಂಟಾದ ಮದುವೆಯ ಬಗ್ಗೆ ಅದೊಂದು ಭಿನ್ನಾಭಿಪ್ರಾಯ ಪ್ರೇಯಸಿಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಮಾಡಿತ್ತು. ಪ್ರೇಮಿಯ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದ ಪ್ರೇಯಸಿ ನಂತರ ದೂರು ಹಿಂಪಡೆಯಲು ಹೋದರೂ ಪ್ರಯೋಜನವಾಗಿರಲಿಲ್ಲ. ಪ್ರೇಮಿಯನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಇದೀಗ ಪ್ರೇಮಿ ಹಾಗೂ ಪ್ರೇಯಸಿ ಇಬ್ಬರೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ತಾವಿಬ್ಬರೂ ವಿವಾಹವಾಗಿರುವುದರಿಂದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಇಬ್ಬರ ಪ್ರಮಾಣಪತ್ರ ಪರಿಶೀಲಿಸಿದ ನ್ಯಾ. ಕೆ.ನಟರಾಜನ್ ರವರಿದ್ದ ಕರ್ನಾಟಕ ಹೈಕೋರ್ಟ್(Karnataka high court) ಪೀಠ ಪ್ರಕರಣ ರದ್ದುಪಡಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಈ ಮೂಲಕ  ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ವಿವಾಹವಾಗಿರುವುದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿ ಆದೇಶಿಸಿದೆ.

ಸಂತ್ರಸ್ತೆಯನ್ನು ವಿವಾಹವಾಗಿದ್ದು, ಜೀವನಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿ ಆರೋಪಿ ಪ್ರಮಾಣ ಪತ್ರ ಸಲ್ಲಿಸಿದ್ದ. ಅದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಅತ್ಯಾಚಾರ, ಹಣ ವಸೂಲಿ, ಜೀವ ಬೆದರಿಕೆ ಪ್ರಕರಣ ರದ್ದುಪಡಿಸಿತು. ಹಾಗೆಯೇ, ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾವುದೇ ರೀತಿ ತೊಂದರೆ ನೀಡಬಾರದು ಎಂದು ಆರೋಪಿಗೆ ಸೂಚಿಸಿದೆ.

ಪ್ರಕರಣ ಹಿನ್ನೆಲೆ

ಬೆಂಗಳೂರಿನ ಯುವತಿ 2022ರ ಅಕ್ಟೋಬರ್‌ನಲ್ಲಿ ಪೊಲೀಸರಿಗೆ ದೂರು ನೀಡಿ, ರವಿ ಎಂಬಾತ ತನ್ನ ಹುಟ್ಟುಹಬ್ಬದ ಆಚರಣೆ ನಿಮಿತ್ತ ಮನೆಗೆ ಆಹ್ವಾನಿಸಿದ್ದರು. ಅಂದು ಮದ್ಯ ಸೇವಿಸಿ ಬಂದಿದ್ದ ರವಿ, ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು. ಈ ವಿಷಯ ಬಹಿರಂಗಪಡಿಸಿದರೆ ಹತ್ಯೆ ಬೆದರಿಕೆ ಹಾಕಿದ್ದರು. ಜೊತೆಗೆ ಮದುವೆಯಾಗಬೇಕಿದ್ದರೆ ಹಣ ನೀಡುವಂತೆ ಒತ್ತಾಯಿಸಿದ್ದರು ಎಂದು ಯುವತಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಮತ್ತು ಹಣ ವಸೂಲಿ ಸೇರಿದಂತೆ ಇನ್ನಿತರ ಆರೋಪಗಳಡಿ ಎಫ್‌ಐಆರ್‌ ದಾಖಲಿಸಿದ್ದರು.

ಆ ಪ್ರಕರಣ ರದ್ದುಕೋರಿ ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರೇಮಿಸಿ ವಿವಾಹವಾಗುವ ವಿಷಯದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಕೇಸ್ ದಾಖಲಾಗಿತ್ತು. ಇದೀಗ ಇಬ್ಬರೂ ಪರಸ್ಪರ ಒಪ್ಪಿ ಮದುವೆಯಾಗಿದ್ದೇವೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಆರೋಪಿ ಪ್ರೇಮಿ ಕೋರ್ಟ್ ಗೆ ಮನವಿ ಮಾಡಿದ್ದ. ಇದಕ್ಕೆ ಪ್ರತಿವಾದಿಯಾಗಿದ್ದ ಯುವತಿಯೂ ಸಹಮತ ಸೂಚಿಸಿ ಪ್ರಕರಣ ರದ್ದು ಕೋರಿದ್ದರಿಂದ ಹೈಕೋರ್ಟ್ ಪ್ರಕರಣ ರದ್ದುಪಡಿಸಿ ಆದೇಶ ನೀಡಿದೆ.

Published On - 12:57 am, Wed, 18 January 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು