AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ತೆರಳದಂತೆ ನಿರ್ಬಂಧ: ಇಡಿ ತನಿಖೆಗೆ ಸಹಕರಿಸಲು ಹೈಕೋರ್ಟ್ ಸೂಚನೆ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗಾಗಿ ಇಡಿ ತನಿಖಾಧಿರಿಗಳೊಂದಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ತೆರಳದಂತೆ ನಿರ್ಬಂಧ: ಇಡಿ ತನಿಖೆಗೆ ಸಹಕರಿಸಲು ಹೈಕೋರ್ಟ್ ಸೂಚನೆ
ಹ್ಯಾಕರ್ ಶ್ರೀಕಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 26, 2022 | 12:59 PM

Share

ಬೆಂಗಳೂರು: ಹ್ಯಾಕರ್ ಶ್ರೀಕಿ ಸೋದರನಿಗೆ ದೇಶ ಬಿಟ್ಟು ಹೋಗದಂತೆ ನಿರ್ಬಂಧಿಸಿರುವ ಜಾರಿ ನಿರ್ದೇಶನಾಲಯದ (Enforcement Directorate – ED) ಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗಾಗಿ ಇಡಿ ತನಿಖಾಧಿರಿಗಳೊಂದಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ತಮಗೆ ದೇಶ ಬಿಟ್ಟು ತೆರಳಲು ಅವಕಾಶ ನೀಡದ ಇಡಿ ಕ್ರಮ ಪ್ರಶ್ನಿಸಿ ಶ್ರೀಕಿ ಸೋದರ ಶ್ರೀಕೃಷ್ಣ ರಮೇಶ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜೂನ್ 20ರಂದು ಇಡಿ ಜಾರಿ ಮಾಡಿರುವ ಲುಕೌಟ್ ನೊಟೀಸ್ ರದ್ದುಪಡಿಸಬೇಕು ಎಂದು ಕೋರಿದ್ದರು.

ನೆದರ್​ಲೆಂಡ್ಸ್​ನಲ್ಲಿ ಎಂಜಿನಿಯರ್ ಆಗಿರುವ ಸುದರ್ಶನ್ ರಮೇಶ್ (31) ಕಳೆದ ಜನವರಿಯಲ್ಲಿ ದೇಶದಿಂದ ಹೊರಗೆ ಹೋಗಲು ಯತ್ನಿಸಿದ್ದರು. ಆದರೆ ಜಾರಿ ನಿರ್ದೇಶನಾಲಯವು ಲುಕೌಟ್ ನೊಟೀಸ್ ಜಾರಿ ಮಾಡಿದ್ದರಿಂದ ಇಮಿಗ್ರೇಶನ್ ಅಧಿಕಾರಿಗಳು ಸುದರ್ಶನ್ ಅವರಿಗೆ ದೇಶದಿಂದ ಹೊರಗೆ ಹೋಗಲು ಅನುಮತಿ ನಿರಾಕರಿಸಿದ್ದರು.

ಸುದರ್ಶನ್ ರಮೇಶ್​ರ ತಮ್ಮ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ (28) ಅವರ ಮೇಲೆ ಹ್ಯಾಕಿಂಗ್ ಮೂಲಕ ವಂಚನೆ ಮಾಡಿದ ಹಲವು ಪ್ರಕರಣಗಳಿವೆ. ನವೆಂಬರ್ 2020ರಲ್ಲಿ ಡಾರ್ಕ್​ನೆಟ್​ನಲ್ಲಿ ಡ್ರಗ್ಸ್​ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ವಿರುದ್ಧ ಕರ್ನಾಟಕ ಪೊಲೀಸರು ಹಲವು ಪ್ರಕರಣ ದಾಖಲಿಸಿದ್ದರು. ಇಡಿ ಸಹ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಿಸಿತ್ತು. ಹಲವು ರಾಜಕಾರಿಣಿಗಳ ಮಕ್ಕಳ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಪ್ರಕರಣ ದೇಶವ್ಯಾಪಿ ಸದ್ದು ಮಾಡಿತ್ತು.

ನೆದರ್​ಲೆಂಡ್​ಗೆ ಹಿಂದಿರುಗಲು ಅನುಮತಿ ನೀಡಬೇಕೆಂದು ಹೈಕೋರ್ಟ್​ಗೆ ಸಲ್ಲಿಸಿರುವ ಸುದರ್ಶನ್ ರಮೇಶ್​ ಅರ್ಜಿಗೆ ಜಾರಿ ನಿರ್ದೇಶನಾಲಯವು ತಕರಾರು ಮಂಡಿಸಿತ್ತು. ಹ್ಯಾಕಿಂಗ್ ಮೂಲಕ ಗಳಿಸಿದ ಹಣವನ್ನು ಶ್ರೀಕಿಯು ಸುದರ್ಶನ್​ಗೆ ರವಾನಿಸಿದ್ದಾನೆ ಎಂದು ಇಡಿ ಹೇಳಿತ್ತು. ಮೇ 2021ರಲ್ಲಿ ಹನಿಶ್ ಪಟೇಲ್ ಎನ್ನುವವರ ಮೂಲಕ ಶ್ರೀಕಿಯು 50,000 ಬ್ರಿಟಿಷ್ ಪೌಂಡ್​ನಷ್ಟು ಹಣ ಪಡೆದುಕೊಂಡಿದ್ದ. ಈ ಹಣದ ಮೂಲದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸುದರ್ಶನ್ ಸಮರ್ಪಕ ಉತ್ತರ ನೀಡಿರಲಿಲ್ಲ ಎಂದು ಇಡಿ ಹೇಳಿತ್ತು.

ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾಗ ಕೇಳಿದ ಪ್ರಶ್ನೆಗಳಿಗೆ ಸುದರ್ಶನ್ ಸಮಪರ್ಕವಾಗಿ ಉತ್ತರಿಸಿಲ್ಲ. ಪಾಸ್​ವರ್ಡ್​ ಮತ್ತು ಕೆಲ ಕೀವರ್ಡ್​ಗಳನ್ನು ನೀಡಿರಲಿಲ್ಲ ಎಂದು ಇಡಿ ತಿಳಿಸಿತ್ತು. ತನಿಖೆಯ ವೇಳೆ ಬೆಳಕಿಗೆ ಬಂದ ಹ್ಯಾಕರ್​ನ ಅಣ್ಣ ಮತ್ತು ತಂದೆಯ ನಡುವಣ ಸಂಭಾಷಣೆಯಲ್ಲಿಯೂ ಬ್ರಿಟನ್ ಪೌಂಡ್​ಗಳ ವಹಿವಾಟು ನಡೆದಿರುವ ಬಗ್ಗೆ ಮಾಹಿತಿಯಿದೆ. ಸ್ವಿಸ್​ ಬ್ಯಾಂಕ್​ಗೆ ರವಾನೆಯಾಗಿರುವ ಹಣದ ವಿವರಗಳು ಇನ್ನೂ ಪತ್ತೆಯಾಗಬೇಕಿದೆ. ಈ ವಿಚಾರದಲ್ಲಿಯೂ ಸುದರ್ಶನ್ ಸಹಕಾರ ನೀಡಿಲ್ಲ ಎಂದು ಇಡಿ ಹೇಳಿತ್ತು.

ಸುದರ್ಶನ್ ಒಮ್ಮೆ ಭಾರತ ಬಿಟ್ಟು ನೆದರ್​ಲೆಂಡ್ಸ್​ಗೆ ಹೋದರೆ ಅಲ್ಲಿಯೇ ವಾಸ್ತವ್ಯ ಹೂಡಲು ನಿರ್ಧರಿಸಿದ್ದ. ಭಾರತದ ಆರ್ಥಿಕ ಹಿತಾಸಕ್ತಿಗೆ ಧಕ್ಕೆ ತರುವುದನ್ನು ತಡೆಯುವ ಉದ್ದೇಶದಿಂದ ಸುದರ್ಶನ್​ ವಿರುದ್ಧ ಲುಕೌಟ್ ನೊಟೀಸ್ ಜಾರಿ ಮಾಡಲಾಗಿದೆ ಎಂದು ಇಡಿ ಹೇಳಿತ್ತು. ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಾಗಿರುವ ಇಂಥ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ ಹೈಕೋರ್ಟ್​, ಯಾವುದೇ ವ್ಯಕ್ತಿಯ ವೈಯಕ್ತಿಕ ಹಿತಾಸಕ್ತಿ ಅಥವಾ ಆರ್ಥಿಕ ಹಿತಾಸಕ್ತಿಗಿಂತಲೂ ದೇಶದ ರಾಷ್ಟ್ರೀಯ ಹಿತಾಸಕ್ತಿಯು ಅತ್ಯಂತ ಪ್ರಮುಖವಾದುದು. ಸುದರ್ಶನ್ ರಮೇಶ್ ಅವರನ್ನು ದೇಶ ಬಿಟ್ಟು ಹೋಗದಂತೆ ತಡೆದಿರುವ ಇಡಿ ಕ್ರಮವು ಸಂವಿಧಾನದ 19 ಮತ್ತು 21ನೇ ಪರಿಚ್ಛೇದಗಳನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿತು.

Published On - 12:59 pm, Sun, 26 June 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?